Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...