Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...