Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...