Homeಅಂಕಣಗಳುಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್...

ಕಾಶ್ಮೀರದಾಗಿನ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ?

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ...

- Advertisement -
- Advertisement -

ಪೂರ್ಣಾವಧಿ ಸೋಶಿಯಲ್ ಮೀಡಿಯಾ ಸ್ಟಾರ್, ಅಲ್ಪಾವಧಿ ಲೋಕಸಭಾ ಸದಸ್ಯರಾಗಿರುವ ತೇಜಸ್ವಿ ಸೂರ್ಯ ನಾರಾಯಣರಾವು ಅವರು ಮೊನ್ನೆ ಬೆಂಗಳೂರು ಎಂಬೋ ಮಾಯಾನಗರಿಯೊಳಗ ಒಂದು ಕಾಲ್ ಸೆಂಟರ್‌ದೊಳಗಿನ 17 ಮಂದಿ ಮುಸ್ಲಿಂ ಕೆಲಸಗಾರರ ಹೆಸರು ಓದಿ, ಮರುದಿವಸ ಒಂಬತ್ತು ಮಂದಿ ಗೈರು ಮುಸ್ಲಿಂರ ದಸ್ತಗಿರಿ ಮಾಡಿಸಿದ್ದು ನಮಗ ಗೊತ್ತು.

ಇಲ್ಲೇ ಪ್ರಶ್ನೆ ಏನು ಅಂದ್ರ ಒಬ್ಬ ಎಂಪಿ ಕೆಲಸ ಏನು? ಪತ್ತೇದಾರಿ ವರದಿಗಾರರಂತೆ ಹಗರಣ ಹೊರಗೆ ತೆಗೆಯೋದೋ ಅಥವಾ ಸರ್ಕಾರದ ಕೆಲ್ಸಗಳು ಸರಿಯಾಗಿ ನಡಿಯೋ ಹಂಗ ಮಾಡೋದೋ?

ತೇಜಸ್ವಿ ಅವ್ರು ಮಾಡಿದ್ದೇ ಸರಿ. ಅವ್ರು ಈ ಹುಳುಕು ಹೊರಗೆ ತೆಗೆಯದೇ ಇದ್ದರೆ ಯಾರು ತೆಗೆಯಬೇಕಿತ್ತು? ಅಂತ ಅವರನ್ನು ಹೊಗಳುವ, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿಕ್ಕೆಬಿಟ್ಟರು ಅಂತ ಖುಷಿಯಿಂದ ಕುಣಿಯುತ್ತಿರುವ ಜನರಿಗೆ ಏನೂ ಕಮ್ಮಿ ಇಲ್ಲಾ.

ಈ ಜನರ ಭಾವನೆ ಸರಿ. ಅದನ್ನು ನಾನು ಮೈಸೂರು ತೇರು ಮೈದಾನದಿಂದ ಬೇಕಾದರೂ ಹೇಳಬಲ್ಲೆ ಅಂತ ಇನ್ನೊಬ್ಬ ಯುವ ಸಂಸದ ಪ್ರತಾಪ್ ಸಿಂಹ ಅವ್ರು ಹೇಳಿಬಿಟ್ಟಾರ. ಅವ್ರು ಇಂಥ ಕೆಲ್ಸಾ ಮಾಡಿಯೇ ಮುಂದೆ ಬಂದಾರ. ಎರಡು ವರ್ಷದ ಹಿಂದೆ ಕೊಡಗು ಜಿಲ್ಲೆಯೊಳಗ ಪ್ರವಾಹ ಬಂದಾಗ ಅವ್ರು ಒಂದು ಕೆಂಪು ಅಂಗಿ ಬಿಳೆ ಬೂಟು ಹಾಕಿಕೊಂಡು ಕರೆಂಟ್ ಕಂಬಾ ಭೂಮಿಯೊಳಗ ನೆಡುವ ಪ್ರಯತ್ನ ಮಾಡಿದ್ದ ಫೋಟೋ ಸೋಶಿಯಲ್ ಮೀಡಿಯಾದಾಗ ಓಡಾಡಲಿಕ್ಕೆ ಹತ್ತಿತ್ತು. ಆವಾಗ ಅವರ ಸಹೋದ್ಯೋಗಿಯಾಗಿದ್ದ ಹಿರಿಯ ಪತ್ರಕರ್ತರು ಒಬ್ಬರು “ನಾವು ಈ ಯುವ ಸಂಸದರನ್ನು ದೆಹಲಿಗೆ ಕಳಿಸಿದ್ದು ಯಾಕೆ ಅಂದ್ರೆ ಅವರು ಪ್ರಧಾನಿ ಹಾಗೂ ಇತರ ಮಂತ್ರಿಗಳ ಜೊತೆ ಸೇರಿ ಕರ್ನಾಟಕಕ್ಕೆ ಹೆಚ್ಚಿನ ನೆರವು ಕೊಡಿಸಲಿ ಅಂತ. ಹಸಿ ಮಣ್ಣಿನ ನೆಲದಲ್ಲಿ ಕರೆಂಟ್ ಕಂಬ ನೆಡಲಿ ಅಂತ ಅಲ್ಲಾ” ಅಂತ ಕಾಮೆಂಟ್ ಮಾಡಿದ್ರು. ಇದು ದೊಡ್ಡ ಸುದ್ದಿಯಾಗಿತ್ತು.

ಇದೆ ಮಾದರಿಯಲ್ಲಿ ಹಿರಿಯ ಭಾರತೀಯ ಪೊಲೀಸು ಸೇವೆ ಅಧಿಕಾರಿ ರೂಪ ದಿವಾಕರ್ ಅವ್ರು ತಾವು ಜೈಲಿನಲ್ಲಿ ಡಿಐಜಿ ಇದ್ದಾಗ ಅಲ್ಲಿನ ಆಡಳಿತದಲ್ಲಿನ ತಪ್ಪುಗಳನ್ನು ಸರಿ ಮಾಡುವುದನ್ನು ಬಿಟ್ಟು ಥೇಟು ಎನ್‌ಜಿಓ ಶೈಲಿಯಲ್ಲಿ ಒಂದು ದೊಡ್ಡ ರಿಪೋರ್ಟ್ ಬರೆದರು.

ಅವರು ನಾನು ನಿಗರಾಣಿ ಅಧಿಕಾರಿಯಾಗಿರುವ ಈ ಜೈಲಿನಲ್ಲಿ, ನನ್ನ ಕೆಳಗೆ ಹಾಗು ಮೇಲೆ ಇರುವ ಅಧಿಕಾರಿಗಳು ಇಂತಹ ತಪ್ಪುಗಳನ್ನು ಮಾಡಿದ್ದಾರೆ, ಮಾಡುತ್ತಾ ಇದ್ದಾರೆ, ಮುಂದೆಯೂ ಮಾಡುವ ಸಾಧ್ಯತೆ ಇದೆ ಅಂತ ಹೇಳಿ ಒಂದು ವರದಿ ಕೊಟ್ಟರು. ಅದನ್ನು ಮಾಧ್ಯಮದವರು ದೇವವಾಣಿಯಂತೆ ಕಂಡು ಪೂಜೆ ಮಾಡಿದ್ರು. ಅದನ್ನು ಬರೆದ ಅಧಿಕಾರಿಯನ್ನು ಪ್ರಮಥರಂತೆ ನೋಡಿದರು. ನಿಮ್ಮನ್ನು ಭಾ.ಪೋ.ಸೇ.ಗೆ ಸೇರಿಸಿ, ತೆರಿಗೆದಾರರ ಹಣದಿಂದ ನಿಮಗೆ ತಿಂಗಳು ತಿಂಗಳು ಸಂಬಳ ಕೊಟ್ಟಿದ್ದು ಯಾಕೆ? ಅಲ್ಲಿನ ಸಮಸ್ಯೆಗಳನ್ನು ಪರಿಹಾರ ಮಾಡಲಿಕ್ಕೋ ಅಥವಾ ಇದು ನನ್ನ ಕಣ್ಣಿಗೆ ಬಿದ್ದಿದೆ ಆದರೆ ನಾನು ಅದರ ಬಗ್ಗೆ ಏನೂ ಮಾಡಲಾರೆ ಅಂತ ಅಸಹಾಯಕತೆ ವ್ಯಕ್ತಪಡಿಸಲಿಕ್ಕೋ ಅಂತ ಯಾವ ಟಿವಿ ಚಾನೆಲ್‌ನ ಹಿಡಿಗೂಟಗಳೂ ಕೇಳಲಿಲ್ಲ.

ಇವತ್ತಿಗೂ ನಮ್ಮ ಜನರಿಗೆ ಯಾರ ಹತ್ತಿರ ಗೋಳು ಹೇಳಿಕೊಳ್ಳಬೇಕು ಅನ್ನುವುದು ಗೊತ್ತಿಲ್ಲ. ಸುಂಕ ವಸೂಲಾತಿಗೆ ಬಂದ ಕಂದಾಯ ಅಧಿಕಾರಿಯ ಮುಂದೆ ಯಪ್ಪಾ ನಮ್ಮ ಹತ್ತಿರ ಉಣ್ಣಾಕ್ ರೊಕ್ಕಾ ಇಲ್ಲ ಅಂದ್ರೆ ಬಿಡುತ್ತಾನೆಯೇ? ವಿಧಾನಸಭೆ – ಸಂಸತ್ತು ಸಭೆಗಳಲ್ಲಿ ಹೋಗಿ ನಮ್ಮ ಪರವಾಗಿ, ನಮ್ಮ ಸುಂಕ ಕಮ್ಮಿ ಮಾಡಬೇಕು ಅಂತ ಮಾತು ಆಡಬೇಕಾದವರು ಆಡೋದಿಲ್ಲ. ಅವ್ರ ಕುತ್ತಿಗೆ ಪಟ್ಟಿ ಹಿಡದು ನಾವು ಕೇಳೋದಿಲ್ಲಾ. ನಮ್ಮ ಮನಿಗೆ ನೀರು ಬರಲಿಲ್ಲ ಅಂದರ ಜಿಲ್ಲಾಧಿಕಾರಿಯ ಕಚೇರಿಗೆ ಹೋಗ್ತೆವಿ, ಹೊರತು, ನಮ್ಮ ನಗರಸಭೆ ಸದಸ್ಯರ ಮನಿಯ ಮುಂದ ಹೋಗಿ ಕೂಡೋದಿಲ್ಲಾ.

ಈ ಸಾರೆ ಅಂತೂ ನಾವು ಕಾಶ್ಮೀರದ ಹುಡುಗಿ ಮಾಡಿಕೊಂಡು, ಅಲ್ಲೇ ಹತ್ತು ಎಕರೆ ಸೇಬುಹಣ್ಣಿನ ತೋಟ ವರದಕ್ಷಿಣೆ ಪಡಿಯಬೇಕು ಅಂತ ಈಗಿನ ಆಳುವ ಪಕ್ಷಕ್ಕ ವೋಟು ಹಾಕಿದ್ದೇವಿ. ಹೀಗಾಗಿ, ಸರಕಾರೀ ಆಸ್ಪತ್ರೆ ಒಳಗ ಹಾಸಿಗೆ ಸಿಗಲಿಲ್ಲಾ, ರೋಗಿಗಳಿಗೆ ಆಮ್ಲಜನಕ ಸಿಗಲಿಲ್ಲ, ರೆಮೆಡಿಸಿವಿರ್ ಇಂಜಕ್ಷನ್ ಕೊಡಲಿಲ್ಲ ಅಂತ ಹೇಳಿ ನಾವು ದೂರು ಕೊಡಲಿಕ್ಕೆ ಬರೋದಿಲ್ಲಾ.

ಕಾಶ್ಮೀರದಾಗಿನ ಸೇಬುಹಣ್ಣಿನ ಬಣ್ಣದ ಅಲೌಕಿಕ ಚಲುವೆಯರು ಎಲ್ಲೇ, ಈ ಲೌಕಿಕ ಜೀವನದ ಜುಜುಬಿ ಸರಕಾರೀ ಆಸ್ಪತ್ರೆ ಬೆಡ್, ಆಕ್ಸಿಜನ್, ಇಂಜೆಕ್ಷನ್ ಎಲ್ಲೇ. ಏನರ ಹೋಲಿಕೆ ಅದ ಏನು ಹೇಳ್ರಿ?


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...