HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...