HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...