HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...