HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...