HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...