HomeಮುಖಪುಟCOW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

COW-ACTION ವರದಿ: ಗಾಯ್ ಪರೀಕ್ಷಾ ಕ್ಯಾನ್ಸಲ್, ಗಾಯ್‌ವಾಲಾ ಗಾಯಬ್!

- Advertisement -
- Advertisement -

‘ಇದೇ ಫೆಬ್ರವರಿ 25ರಂದು ನಡೆಯಬೇಕಾಗಿದ್ದ ಗಾಯ್ ಪರೀಕ್ಷಾ (ಗೋ-ಪರೀಕ್ಷೆ) ರದ್ದು ಮಾಡಿದ್ದಕ್ಕೆ ಪರೀಕ್ಷೆಗೆ ನೋಂದಾಯಿಸಿದ್ದ ಐದುವರೆ ಲಕ್ಷ ಜನರಲ್ಲದೇ ಅವರ ಕುಟುಂಬಗಳ ಸದಸ್ಯರು ನೊಂದಿದ್ದಾರೆ ಎಂದು COW-ACTION ಪೋರ್ಟಲ್ ವರದಿ ಮಾಡಿದೆ.

‘ನೋಡಿ, ನಾನು ಹಸುವನ್ನು ಹತ್ತಿರದಿಂದ ಎಂದೂ ನೋಡಿಲ್ಲ. ಆದರೆ, ಕಾಮಧೇನು ಆಯೋಗ್ ಹಸುವಿನ ಪ್ರಾಮುಖ್ಯತೆ ಕುರಿತು ಪ್ರಕಟಿಸಿದ್ದ ಸಿಲಬಸ್ ನೋಡಿದ ನಂತರ ಈ ಪರೀಕ್ಷೆಗೆ ಹಾಜರಾಗಲೇಬೇಕು ಅನಿಸಿತು’ ಎಂದು ಧಾರವಾಡದ ವಂದನಾ ಹೇಳಿದ್ದಾರೆ.

‘ಹಸುವಿನ ಸೆಗಣಿಯಲ್ಲಿ ವಿಕಿರಣ ಶಕ್ತಿ ಇರುವ ಬಗ್ಗೆ ನಮ್ಮ ಕಣ್ಣು ತೆರೆಸಿದ ಕಾಮಧೇನು ಆಯೋಗಕ್ಕೆ ನಾವು ಋಣಿಯಾಗಿದ್ದೇವೆ. ಈ ಸಲ ನನ್ನ ಮಗ ಗೋವಿಂದನ ಜೊತೆಗೆ ನಾನೂ ಪರೀಕ್ಷೆಗೆ ನೊಂದಾಯಿಸಿದ್ದೆ. ಆದರೆ ದೇಶದ್ರೋಹಿಗಳ ಅಪಪ್ರಚಾರದಿಂದ ಈ ಐತಿಹಾಸಿಕ ಪರೀಕ್ಷೆ ರದ್ದಾಗಿದ್ದನ್ನು ನಾನು ಖಂಡಿಸುತ್ತೇನೆ’ ಎಂದು ದಾವಣಗೆರೆಯ ಗೃಹಿಣಿ ಬಿಂದಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏನೇನು ಪ್ರಶ್ನೆ ಬರಬಹುದು ಎಂದೆಲ್ಲ ಗೆಸ್ ಮಾಡಿದ್ದ ನಾವು ಅದಕ್ಕಾಗಿ ತಯ್ಯಾರಿ ನಡೆಸಿದ್ದೆವು. ನಮ್ಮ ಯುನಿವರ್ಸಿಟಿಯ ಖಾಲಿ ಜಾಗಗಳಲ್ಲಿ ಮಲಗುವ ಹಸುಗಳ ಬಳಿ ಹೋಗಿ ಸ್ಟಡಿ ಮಾಡಿದ್ದೆವು. ಮೊದಲೆಲ್ಲ ಸೆಗಣಿ ಹಸಿರು ಬಣ್ಣದ್ದು ಎಂದು ತಿಳಿದಿದ್ದೆವು. ಪರೀಕ್ಷೆ ಮಾಡಿದಾಗ, ಸೆಗಣಿ ಕಂದು ಮಿಶ್ರಿತ ಹಸಿರು, ಹಸಿರು ಮಿಶ್ರಿತ ಕಪ್ಪು… ಹೀಗೆ ಡಿಫರಂಟ್ ಕಲರ್ ಹೊಂದಿರುವುದನ್ನು ಗಮನಿಸಿದೆವು’ ಎಂದು ಬೆಂಗಳೂರು ವಿವಿಯ ಮನಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಗ್ಯಾ ಹೇಳಿದ್ದಾರೆ.

‘ಪಂಚಗವ್ಯ-ಅಂದರೆ ಹಸುವಿನ ಸೆಗಣಿ, ಮೂತ್ರ ಇವೆಲ್ಲ ಆರೋಗ್ಯವರ್ಧಕ ಎನ್ನಲಾಗಿದೆ. ನಿಮ್ಮ ಸ್ವಂತ ಅಭಿಪ್ರಾಯವೇನು?’ ಎಂದು ಹಲವರನ್ನು COW-ACTION ಪ್ರಶ್ನಿಸಿದೆ.
‘ಖಂಡಿತ, ಆರೋಗ್ಯವರ್ಧಕಗಳು.. ನಾನು ಟೆಸ್ಟ್ ಮಾಡಲು 15 ದಿನದಿಂದ ದಿನಕ್ಕೆ ಮೂರು ಹೊತ್ತು 10 ಎಂಎಲ್ ಗೋಮೂತ್ರ ಸೇವಿಸುತ್ತಿದ್ದೇನೆ… ಫುಲ್ ರಿಲ್ಯಾಕ್ಸ್ ಆಗಿದ್ದೇನೆ’ ಎಂದು ಸುಳ್ಯದ ರಾಮಚಂದ್ರಭಟ್ಟರು ತಿಳಿಸಿದ್ದಾರೆ.

‘ಸೂರ್ಯನ ಕಿರಣಗಳನ್ನು ಡುಬ್ಬದಲ್ಲಿ ಹಿಡಿದು ಇಟ್ಟುಕೊಂಡು ಚಿನ್ನವನ್ನೇ ಉತ್ಪಾದಿಸುವ ಹಸುವಿನ ಪಂಚಗವ್ಯ ಅದ್ಭುತ… ಹಸುವಿನ ಮೂತ್ರ ನೋಡಿದ್ದೀರಾ? ಅದು ಹಳದಿ ಬಣ್ಣ ಇರಲು ಕಾರಣ, ಅದರಲ್ಲಿ ಚಿನ್ನದ ಅಂಶವಿರುತ್ತದೆ’ ಎಂದು ಮೈಸೂರಿನ ಬಿಎಸ್‌ಸಿ ವಿದ್ಯಾರ್ಥಿ ಅಕುಲ್ ಅಭಿಪ್ರಾಯಪಟ್ಟಿದ್ದಾರೆ,

‘ಜ್ವರಪೀಡಿಯ ಮನುಷ್ಯನ ಮೂತ್ರವೂ ಹಳದಿ ಇರುತ್ತಲ್ಲ’ ಎಂದು ಕೊಂಕು ನುಡಿಯುವವರ ಬಗ್ಗೆ ಕಿಡಿ ಕಾರಿರುವ ಬೀದರ್‌ನ ಗಂಗಾ, ‘ಛೇ, ಮಾನವ ಮೂತ್ರವನ್ನು ನಮ್ಮ ಗೋಮಾತೆಯ ಮೂತ್ರಕ್ಕೆ ಹೋಲಿಸಿತ್ತಾರಲ್ಲ? ದೆಹಲಿ ಆಗಿದ್ದರೆ ದೇಶದ್ರೋಹ ಕೇಸ್ ಜಡಿದು ಒಳಗೆ ಹಾಕುತ್ತಿದ್ದರು’ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ, ಈಗ ಕಾಮಧೇನು ಆಯೋಗ್‌ನ ಅಧ್ಯಕ್ಷ ವಲ್ಲಭ್‌ಭಾಯ್ ಕಥಿರಿಯಾ ಯಾರ ಫೋನನ್ನು ರಿಸೀವ್ ಮಾಡುತ್ತಿಲ್ಲ. ‘ಗಾಯ್‌ವಾಲಾ ಗಾಯಬ್’ ಎಂಬ ಟೀಕೆಗೆ ಸ್ಪಷ್ಟೀಕರಣ ನೀಡಿರುವ COW-ACTION ಪೋರ್ಟಲ್, ಕಥಿರಿಯಾ ಅವಧಿ ಫೆ. 20ಕ್ಕೆ ಮುಗಿದಿದೆ. ಗಾಯ್ ಪರೀಕ್ಷಾ ರದ್ದಾಗಿದ್ದಕ್ಕೆ ನೊಂದಿರುವ ಅವರು, ಹಿಮಾಲಯದ ತಪ್ಪಲಿನಲ್ಲಿ ಐದಾರು ಗೋಮಾತೆಯರೊಂದಿಗೆ ಗೋ-ತಪಸ್ ನಡೆಸುತ್ತಿದ್ದಾರೆ ಎಂದು ಹೇಳಿದೆ.

‘ಎರಡು ವರ್ಷದಲ್ಲಿ 750 ಕೋಟಿ ಬಜೆಟ್ ಅನ್ನು ಕಾಮಧೇನು ಆಯೋಗ್ ಏನು ಮಾಡಿತು?’ ಎಂದು ಹಿರಿಯ ನಾಗರಿಕರೊಬ್ಬರು ಕೇಳಿದ ಪ್ರಶ್ನೆಗೆ COW-ACTION ಉತ್ತರಿಸಿದ್ದು, ‘ನೋಡಿ ತಾತ, ಗೋಮಾತೆಯ ಬಗ್ಗೆ ಎಷ್ಟೊಂದು ಪ್ರಚಾರ ಮಾಡಲಾಗಿದೆ…. ಎಷ್ಟೊಂದು ಜಾಹಿರಾತು ನೀಡಲಾಗಿದೆ… ಎಷ್ಟೋ ಗೋರಕ್ಷಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ವಿವರಿಸಿದೆ.
ಆಯೋಗ್‌ನ ಕಚೇರಿಯಿಂದ ನಾವು ಎಗರಿಸಿದ ಡಾಕ್ಯುಮೆಂಟ್ ಒಂದರ ಪ್ರಕಾರ, ಗೋ-ಪರೀಕ್ಷೆಗೆ ಸಿದ್ಧವಾಗಿದ್ದ ಪ್ರಶ್ನೆಗಳ ಸ್ಯಾಂಪಲ್ ಹೀಗಿವೆ:

1. ಮಗುವೊಂದು ಹೇಳುವ ವಾಕ್ಯವಿದು. ಇದರಲ್ಲಿ ಯಾವುದು ಸರಿ?
ಎ. ‘ಯವ್ವಾ ಆಕಳ ಸೆಗಣಿ ಹಾಕೈತಿ ನೋಡ್ಬೆ’
ಬಿ. ’ಅಮ್ಮಾ, ಹಸು ಸೆಗಣಿ ಹಾಕಿದೆ’
ಸಿ. ‘ಅಮ್ಮ, ಗೋಮಾತೆ ಪಂಚಗವ್ಯದ ಘನ ಪದಾರ್ಥವನ್ನು ಧರೆಗೆ ಇಳಿಸಿದ್ದಾಳೆ. ವಿಕಿರಣ ಹೊರಹೊಮ್ಮುತ್ತಿದೆ ಅಮ್ಮ’
ಡಿ. ‘ಬೇ ಯವ್ವಾ ಆಕ್ಳ ಹೇತೈತಿ ನೋಡು’

ಪರೀಕ್ಷೆ ರದ್ದಾಗಿದ್ದರೂ ಮುಂದೆ ನಡೆಯಲಿದೆಯಂತೆ. ಈಗಲೇ ತಯ್ಯಾರಿ ಶುರು ಮಾಡಿ ಭಕ್ತರೇ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...