Homeಕರ್ನಾಟಕ‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

‘ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ’: ಬಿಜೆಪಿ ಐಟಿ ಸೆಲ್‌ ದಾಳಿ ವಿರುದ್ದ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ಬಲಪಂಥೀಯರಿಂದ ದಾಳಿಗೊಳಗಾದ ಸತೀಶ್‌ ಆಚಾರ್ಯ ಅವರಿಗೆ ಭಾರಿ ಬೆಂಬಲ ವ್ಯಕ್ತವಾಗಿದೆ

- Advertisement -
- Advertisement -

ಕೊರೊನಾ ಲಸಿಕೆಯನ್ನು ರಾಜಕೀಯಕ್ಕೆ ಬಳಸಿರುವ ರಾಜಕಾರಣದ ಕುರಿತು ಬರೆಯಲಾಗಿದ್ದ ವ್ಯಂಗ್ಯಚಿತ್ರದ ಕಾರಣಕ್ಕೆ, ಬಿಜೆಪಿ ಐಟಿ ಸೆಲ್‌ ಮತ್ತು ಬಲಪಂಥೀಯ ಬೆಂಬಲಿಗರು, ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ ಅವರನ್ನು ನಿಂದಿಸುತ್ತಿದ್ದು, ಇದರ ವಿರುದ್ದವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಗಳೆದ್ದಿದೆ.

ಸತೀಶ್ ಆಚಾರ್ಯ ಅವರು ಕೊರೊನಾ ಸೋಂಕನ್ನು ಆಡಳಿತ ಪಕ್ಷಗಳು ಹೇಗೆ ತಮ್ಮ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಹಾಗೂ ಕೊರೊನಾ ಸೋಂಕನ್ನು ಆಡಳಿತವು ನಿರ್ವಹಣೆ ಮಾಡುವಲ್ಲಿ ಆಗಿರುವ ವಿಫಲತೆಯ ಬಗ್ಗೆ ವ್ಯಂಗ್ಯ ಚಿತ್ರವನ್ನು ನಿರಂತರವಾಗಿ ಬರೆಯುತ್ತಲೆ ಬಂದಿದ್ದಾರೆ. ಅದರಲ್ಲೂ ಮುಖ್ಯವಾಗಿ ಕೊರೊನಾ ಲಸಿಕೆಯನ್ನು ಆಡಳಿತ ಪಕ್ಷಗಳು ಹೇಗೆ ತಮ್ಮ ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂಬುವುದರ ಬಗ್ಗೆ ವ್ಯಂಗ್ಯಚಿತ್ರಗಳ ಮೂಲಕ ತೀಕ್ಷ್ಣವಾಗಿ ಟೀಕಿಸುತ್ತಲೆ ಬಂದಿದ್ದರು. ಇದು ಆಡಳಿತ ಪಕ್ಷವಾದ ಬಿಜೆಪಿ ಹಾಗೂ ಬಲಪಂಥೀಯರ ಕಣ್ಣು ಕೆಂಪಾಗಿಸುವಂತಾಗಿದೆ.

ದೇಶದಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾದ ಹಿನ್ನಲೆಯಲ್ಲಿ ಸತೀಶ್ ಅವರು ಲಸಿಕೆಯನ್ನು ಪಡೆದು, ತಾವು ಲಸಿಕೆ ಪಡೆಯುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಈ ಚಿತ್ರವನ್ನು ಹಾಗೂ ಲಸಿಕೆಯನ್ನು ರಾಜಕೀಯಕ್ಕೆ ಬಳಸಿರುವ ಕುರಿತು ಬರೆದಿದ್ದ ವ್ಯಂಗ್ಯ ಚಿತ್ರವನ್ನು ಬಳಸಿಕೊಂಡು ಬಲಪಂಥೀಯರು ಅವರ ನಿಂದನೆಗೆ ಇಳಿದಿದ್ದಾರೆ. ಕೆಲವರು ಅವರ ಜಾತಿಯನ್ನು ಉಲ್ಲೇಖಿಸಿ ಜನಾಂಗೀಯ ನಿಂದನೆಗೆ ಕೂಡಾ ಇಳಿದಿದ್ದಾರೆ.

ಇದನ್ನೂ ಓದಿ: ‘ಮತ ಎಣಿಕೆ ಮುಂದೂಡಿದರೆ ಸ್ವರ್ಗವೇನು ಬೀಳುವುದಿಲ್ಲ’ – ಯುಪಿ ಚುನಾವಣಾ ಆಯೋಗಕ್ಕೆ ಸುಪ್ರೀಂ ಕಟುನುಡಿ

ಈ ಬಗ್ಗೆ ಸತೀಶ್ ಅವರು ತಮ್ಮ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, “ಸಾರ್ವಜನಿಕವಾಗಿ ನಾನು ಲಸಿಕೆಯನ್ನು ಟೀಕಿಸುತ್ತೇನೆ ಆದರೆ ಖಾಸಗಿಯಾಗಿ ಅದನ್ನು ತೆಗೆದುಕೊಂಡಿದ್ದೇನೆ ಎಂದು ಬಿಜೆಪಿ ಐಟಿ ಸೆಲ್‌ ಹೇಳುತ್ತಿದೆ. ಲಸಿಕೆಯನ್ನು ರಾಜಕೀಯಕ್ಕೆ ಬಳಸಿರುವುದನ್ನು ನಾನು ಟೀಕಿಸುತ್ತಿದ್ದೇನೆ ಎಂದು ತಿಳಿದುಕೊಳ್ಳುವ ಸಾಮಾನ್ಯ ಜ್ಞಾನವಿರುತ್ತಿದ್ದರೆ, ಐಟಿ ಸೆಲ್‌ನ ಈ ಯೋಧರು, ಮೆದುಳಿಲ್ಲದ ಐಟಿ ಸೆಲ್‌ನಲ್ಲಿ ಇರುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ವ್ಯಂಗ್ಯಚಿತ್ರ ಬರೆದಿರುವ ಕಾರಣಕ್ಕೆ ಬಿಜೆಪಿ ಬೆಂಬಲಿಗರು ಮಾತ್ರವಲ್ಲದೆ ಪತ್ರಕರ್ತರು ಕೂಡಾ ಅವರನ್ನು ನಿಂದಿಸುತ್ತಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚಾನೆಲ್‌ನ ನಿರೂಪರಕಾದ ಅಜಿತ್ ಹನುಮಕ್ಕನವರ್‌ ತಮ್ಮ ಟಿವಿ ಕಾರ್ಯಕ್ರಮವೊಂದರಲ್ಲಿ ವ್ಯಂಗ್ಯ ಚಿತ್ರವನ್ನು ಬರೆದ ಸತೀಶ್ ಅವರಿಗೆ ‘ಕೆರೆನೋ, ಬಾವಿನೋ ನೋಡಿಕೊಳ್ಳಿ’ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಅಜಿತ್ ಅವರ ಮಾತಿಗೆ ಫೇಸ್‌‌ಬುಕ್‌ನ ಕಮೆಂಟ್‌ ಒಂದರಲ್ಲಿ ಪ್ರತಿಕ್ರಿಯಿಸಿರುವ ಸತೀಶ್ ಅವರು, “ಸರಕಾರವನ್ನು ಪ್ರಶ್ನಿಸದೆ ಐಟಿ ಸೆಲ್ ಸೇರಿಕೊಂಡ ಇಂತವರಿಗೆ ಜರ್ನಲಿಸಂ ಬರೀ ವ್ಯವಹಾರ. ಇದನ್ನು ಬಿಟ್ಟು ಹುಬ್ಳಿ-ದಾರಾವಾಡದಲ್ಲೋ ರಿಸಾರ್ಟ್ ವ್ಯವಹಾರ ಶುರು ಮಾಡಿದ್ರೆ ದೇಶಕ್ಕೂ ಉಪಕಾರವಾಗುತ್ತೆ. ಇಂತವರನ್ನು ನೋಡಿ ಯುವ ಜನರು ಜರ್ನಲಿಸಂ-ನಿಂದ ದೂರ ಓಡಿ ಹೋಗೋದೂ ನಿಲ್ಲುತ್ತೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೇಖಕಿ ಚೇತನಾ ತೀರ್ಥಹಳ್ಳಿ, “ಸತೀಶ್ ಆಚಾರ್ಯರ ಕಾರ್ಟೂನ್ ಕೂಡಾ ಅರ್ಥವಾಗಲಿಲ್ಲ ಅಂದರೆ…ಅಜಿತ್ ನಿಜವಾಗ್ಲೂ ಪತ್ರಕರ್ತನೇ? ನನಗಂತೂ ಅನುಮಾನ, ಅಥವಾ ಮೆದುಳು ಅಡವಿಟ್ಟ ಪರಿಣಾಮವೆ!” ಎಂದು ಕಿಡಿ ಕಾರಿದ್ದಾರೆ.

ಅಷ್ಟೇ ಅಲ್ಲದೆ ಚಿರು ಭಟ್ ಎಂಬವರು ಸತೀಶ್ ಅವರನ್ನು ನಿಂದಿಸಿ ಹಾಕಿದ್ದ ಪೋಸ್ಟ್‌ ಒಂದಕ್ಕೆ ಜಯರಾಜ ಸಿ.ಎಂ. ಎಂಬವರೊಬ್ಬರು, “ಹುಟ್ಟಿನಿಂದ ಅವನು ಆಚಾರ್ಯನಾಗಿರಬಹುದು ಆದರೆ ಅವನು ಶೂದ್ರನಿಗಿಂತ ಕೆಟ್ಟವನು” ಎಂದು ಜನಾಂಗೀಯ ನಿಂದನೆ ಕೂಡಾ ಮಾಡಿದ್ದಾರೆ. ಇದರ ಆರ್ಕೈವ್ ಇಲ್ಲಿದೆ.

ಅಷ್ಟೇ ಅಲ್ಲದೆ ಅವರ ಜಾತಿ ವಿಚಾರದಲ್ಲಿ ಹಲವರು ಜನಾಂಗಿಯ ನಿಂದನೆ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇದನ್ನೂ ಓದಿ: ಫೇಸ್‌ಬುಕ್‌ನಲ್ಲಿ ಮೋದಿ ಫೋಟೊಗಳಿಗೆ ಹೆಚ್ಚುತ್ತಿರುವ #ResignModi ಕಮೆಂಟ್‌ಗಳು: ಹಳೆ ಫೋಟೊಗಳನ್ನು ಬಿಡದ ನೆಟ್ಟಿಗರು!

ಅವರ ಮೇಲೆ ಬಿಜೆಪಿ ಐಟಿ ಸೆಲ್ ದಾಳಿ ಹೆಚ್ಚುತ್ತಿದ್ದಂತೆ ಸಾಮಾಜಿಕ ಹೋರಾಟಗಾರು ಸೇರಿದಂತೆ ಹಲವಾರು ಗಣ್ಯರು ಸತೀಶ್ ಆಚಾರ್ಯ ಅವರನ್ನು ಬೆಂಬಲಿಸಿ ಅವರ ಬೆನ್ನಿಗೆ ನಿಂತಿದ್ದಾರೆ.

ವ್ಯಂಗ್ಯ ಚಿತ್ರಕಾರ ಪಿ. ಮೊಹಮ್ಮದ್ ಅವರು, “ಕೆಲವು ದಿನಗಳಿಂದ ಕೆಲವು ಬಿಜೆಪಿ ಬೆಂಬಲಿಗರು ಕಾರ್ಟೂನಿಸ್ಟ್ ಗೆಳೆಯ ಸತೀಶ್‌ ಆಚಾರ್ಯ ಅವರ ಹಿಂದೆ ಬಿದ್ದಿದ್ದಾರೆ. ಮೊನ್ನೆ ಟ್ವಿಟ್ಟರಲ್ಲಿ ಕೆಲವರು ಸತೀಶರ ಜಾತಿಯನ್ನು ಪ್ರಸ್ತಾಪಿಸಿ ಹೀಗಳೆಯುವುದು ಕಂಡು ಆಘಾತಪಟ್ಟೆ!. ನನಗೆ ಸತೀಶ್ ಮೂರು ದಶಕಗಳಿಗಿಂತಲೂ ಹೆಚ್ಚು ಪರಿಚಯ. ಆದರೆ ಅವರು ಯಾವ ಜಾತಿ ಎಂದು ಕೆದಕದೆಯೇ ನಮ್ಮ ಗೆಳೆತನ ಬೆಳೆದು ಬಂದಿದೆ. ಆದರೆ ಈಗಿನ ಕೆಲವು ‘ಹಿಂದೂ ಧರ್ಮ ರಕ್ಷಕ’ರಿಗೆ ಅವರ ಜಾತಿ ಪತ್ತೆ ಮಾಡಬೇಕು. ನಂತರ ಅದನ್ನು ಎತ್ತಿ ಹೇಳಿ ಅವಮಾನಮಾಡಬೇಕು!! ಆ ಟ್ರೋಲಿಂಗ್ ಮಾಡುತ್ತಿದ್ದ ಹೆಸರುಗಳೆಲ್ಲ ಮೇಲ್ಜಾತಿಯನ್ನು ಸೂಚಿಸುತ್ತಿದ್ದವು.
ಸತೀಶ್, ಇದು ನಿಮಗೆ ಹೊಸ ಅನುಭವವೇನೂ ಅಲ್ಲ. ಇಂಥ ವೈರಸಗಳಿಗೆ ಕಳೆದ ಕೆಲವು ವರ್ಷಗಳಿಂದ ನಮ್ಮೊಳಗೆಯೇ anti-bodies ನಿರ್ಮಾಣ ಆಗಿವೆ. ಟ್ರೋಲ್ ವೈರಸಗಳ ಕಾಲ ಮುಗಿಯುತ್ತಾ ಬಂತು!! take care.” ಎಂದು ಧೈರ್ಯ ತುಂಬಿದ್ದಾರೆ.

ಲೇಖಕ ನಾ. ದಿವಾಕರ ಅವರು, “ಅಜಿತ್ ಹನುಮಕ್ಕನವರೆ, ಮೊದಲು ನಿಮಗೆ ಒಂದು ಮಾತನ್ನು ಸ್ಪಷ್ಟಪಡಿಸುತ್ತೇನೆ. ಯಾವ ರೀತಿಯಿಂದ ನೋಡಿದರೂ, ಯಾವ ಮಗ್ಗುಲಿನಿಂದ‌ ನೋಡಿದರೂ ನಿಮ್ಮನ್ನು ಪತ್ರಕರ್ತ ಎಂದು ಭಾವಿಸಲಾಗುವುದಿಲ್ಲ ಎನಿಸುತ್ತದೆ. ಆದರೂ ನೀವು ಒಂದು ಪ್ರತಿಷ್ಠಿತ ಸುದ್ದಿಮನೆಯಲ್ಲಿ ಕುಳಿತು ಅಧಿಕೃತವಾಗಿ ಸುದ್ದಿ ಸಂಪಾದಕತ್ವ ಮತ್ತು ನಿರೂಪಣೆ, ವಾಚನ (ಕ್ಷಮಿಸಿ ನಿಮ್ಮ ಅರಚಾಟದ ಹೊರತಾಗಿಯೂ ಅದನ್ನು ವಾಚನ ಎಂದೇ ಕರೆಯಬೇಕು, ಶಿಷ್ಟಾಚಾರ) ಮಾಡುತ್ತಿರುವುದರಿಂದ ನಿಮ್ಮನ್ನು ಮಾಧ್ಯಮ ಪ್ರತಿನಿಧಿ – ಪತ್ರಕರ್ತ ಎಂದೇ ತಾಂತ್ರಿಕವಾಗಿ ಪರಿಗಣಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

“ಒಬ್ಬ ಪತ್ರಕರ್ತನಿಗೆ, ಅದರಲ್ಲೂ ಸುದ್ದಿ ಸಂಪಾದಕನಿಗೆ ಮೂಲತಃ ಭಾಷಾ ಸೌಜನ್ಯ, ಭಾಷಾ ಸಭ್ಯತೆ ಮತ್ತು ಸಂಯಮ ಇರಬೇಕು. ಇದು ಪತ್ರಿಕೋದ್ಯಮದ ಮೂಲ‌ಮಂತ್ರ. ಇತ್ತೀಚಿನ ದಿನಗಳಲ್ಲಿ ಮೌಲ್ಯಗಳೇ ಇಲ್ಲದ ಮಾಧ್ಯಮಗಳು ಹೆಚ್ಚಾಗುತ್ತಿರುವುದರಿಂದ‌ ನಿಮ್ಮಿಂದ ಇದನ್ನು ನಿರೀಕ್ಷಿಸುವುದೂ ಸರಿಯಲ್ಲ ಎನಿಸುತ್ತದೆ. ಆದರೂ ನಿಮ್ಮ ಮಾತು, ನೀವು ಬಳಸುವ ಭಾಷೆ, ಪರಿಭಾಷೆ ಇವೆಲ್ಲವೂ ಲಕ್ಷಾಂತರ ಜನರನ್ನು ನೇರವಾಗಿ ತಲುಪುತ್ತದೆ. ಅಷ್ಟೇ ಪ್ರಭಾವವನ್ನೂ ಬೀರುತ್ತದೆ. ಇದು ದೃಶ್ಯ ಮಾಧ್ಯಮದ ವೈಶಿಷ್ಟ್ಯ. ಹಾಗಾಗಿ ನಿಮ್ಮ ಭಾಷಾ ಬಳಕೆಯನ್ನು ನೀವೇ ಒಮ್ಮೆ ಕುಳಿತು, ಕೇಳುಗನಾಗಿ ಆಲಿಸಿನೋಡಿ. ನಿಮ್ಮಲ್ಲಿ ಸಹಜ ಪ್ರಜ್ಞೆ ಇದ್ದರೆ ಕೇಳಿದ ನಂತರ ಕನ್ನಡಿಯ ಮುಂದೆ ನಿಲ್ಲಲಾರಿರಿ” ಎಂದು ಎಂದು ದಿವಾಕರ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಪರ ಹೋರಾಟಗಾರ, ದಿನೇಶ್ ಕುಮಾರ್‌ ಅವರು, “ಸತೀಶ್ ಆಚಾರ್ಯ ಅವರೇ, ನೀವು ಆನೆಯಂತೆ‌ ನಡೆಯಿರಿ. ನಿಮ್ಮ ಕಾರ್ಟೂನು ನಮಗೆ ಬೇಕು ಮತ್ತು ಬೇಕೇ ಬೇಕು” ಎಂದು ಹೇಳಿದ್ದಾರೆ.

ವ್ಯಂಗ್ಯ ಚಿತ್ರಕಾರ ದಿನೇಶ್‌ ಕುಕ್ಕುಜಡ್ಕ ಅವರು, “ಕಳೆದ ಆರೇಳು ವರ್ಷಗಳಿಂದ ಇಡೀ ದೇಶದಲ್ಲೇ ಕಾರ್ಟೂನಿಸ್ಟ್‌ಗಳ ಮೇಲೆ ಸೋಷಿಯಲ್ ಮೀಡಿಯಾ ಗುಂಪು ದಾಳಿಗಳು, ಫಿಸಿಕಲ್ ಅಟ್ಯಾಕ್ ಗಳೂ ನಡೆಯುವುದು ಸಾಮಾನ್ಯ ಎನಿಸಿಬಿಟ್ಟಿವೆ. ಎಷ್ಟೋ ಬಾರಿ ನಾನಂದುಕೊಂಡದ್ದು ಇದೆ. ಕಾರ್ಟೂನ್ ನೋಡುವುದು ಹೇಗೆ ಎಂಬ ಕುರಿತೇ ಜನರಿಗೆ ಪಠ್ಯ ಅಥವಾ ಸೆಮಿನಾರ್ ಮಾಡಬೇಕಾದ ಅಗತ್ಯವಿದೆ” ಎಂದು ಬರೆದಿದ್ದಾರೆ.

“ಅಂದಿನ ಬಸವಣ್ಣನಿಂದ ಹಿಡಿದು, ಮೊನ್ನೆ ಮೊನ್ನೆಯ ಗಾಂಧಿ, ದಾಬೋಲ್ಕರ್, ಗೌರಿಯರವರೆಗೆ…. ಇದೇ ಮೇಲ್ವರ್ಗದ ಸಂಚಿಗೆ ಬಲಿಯಾದ ದಕ್ಷಿಣ ಕನ್ನಡ ದ ಆರಾಧ್ಯ ದೈವಗಳಾದ ಕಲ್ಕುಡ ಕಲ್ಲುರ್ಟಿಯರಿಂದ ಹಿಡಿದು ಕೋಟಿ ಚೆನ್ನಯರವರೆಗೆ ಈ ನೆಲದಲ್ಲಿ ಪುರಾಣ ಇತಿಹಾಸಗಳ ಏಳುಬೀಳುಗಳ ಹಸಿಹಸಿ ನೆನಪು ನೆನವರಿಕೆಗಳಿವೆ. ಆ ನೆನಪುಗಳಲ್ಲಿ ಜೀವ ಪುಟಿಯುವ ಎದೆಯ ಉತ್ತೇಜಕ ದ್ರವ್ಯಗಳಿವೆ. ನನ್ನ ಚಿತ್ರ ನನ್ನದು. Always with you ಸತೀಶಣ್ಣ. ನಮ್ಮೆಲ್ಲರದೂ ಒಂದೇ ಧರ್ಮ- ಅದು ಮನುಷ್ಯ ಧರ್ಮ! Cheers!” ಎಂದು ದಿನೇಶ್‌ ಅವರು ಬರೆದಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...