Homeಕರ್ನಾಟಕಬೆಳಗಾವಿ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿ ಸೋತುಹೋದ ಬ್ರಾಹ್ಮಣ ಮಹಾಸಭಾ

ಬೆಳಗಾವಿ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿ ಸೋತುಹೋದ ಬ್ರಾಹ್ಮಣ ಮಹಾಸಭಾ

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಸತೀಶ ಜಾರಕಿಹೊಳಿಯಂತಹ ಪ್ರಬುದ್ಧ, ಜನಬೆಂಬಲಿತ ರಾಜಕಾರಣಿಯ ವಿರುದ್ಧ ತಮ್ಮ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಮುನ್ನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸ್ವಲ್ಪ ವಿವೇಚನೆಯಿಂದ ಆಲೋಚಿಸಿದ್ದರೆ ಇಂತಹ ಒಂದು ಮುಜುಗರ ಅನುಭವಿಸುವ ಸಂದರ್ಭವನ್ನು ಎದುರಿಸುತ್ತಿರಲಿಲ್ಲ. ಆದರೆ ಅದರ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅವಸರಕ್ಕೆ ಬಿದ್ದು ಇಡೀ ಸಮುದಾಯ ಸಂಘಟನೆಯೇ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದಾರೆ. ಆದರೆ ಇಂಥ ಒಂದು ಸಂದರ್ಭಕ್ಕೆ ಸಿಲುಕಿಕೊಳ್ಳಲು ಕಾರಣವೇನು ಎಂಬುದನ್ನು ಬ್ರಾಹ್ಮಣ ಮಹಾಸಭಾ ಪರಾಮರ್ಶಿಸಿಕೊಳ್ಳಲೇಬೇಕಿದೆ. ಅಷ್ಟಕ್ಕೂ ನಡೆದ್ದಾದರೂ ಏನು ಎಂಬುದನ್ನು ಕಂಡುಕೊಂಡರೆ ಈ ನಡೆಯ ಹಿಂದಿನ ಅಪ್ರಬುದ್ಧತೆ ಎದ್ದು ಕಾಣುತ್ತದೆ.

ಎಲ್ಲರಿಗೂ ಗೊತ್ತಿರುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಹಾಗು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಸತೀಶ ಜಾರಕಿಹೊಳಿಯವರ ಮೇಲಿದೆ. ಅಣ್ಣ ರಮೇಶ ಜಾರಕಿಹೊಳಿ ಬಿ.ಜೆ.ಪಿಯ ಬಾಗಿಲಲ್ಲಿ ನಿಂತಿರುವುದರಿಂದ ಇವರ ಮೇಲೆ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ. ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು ಮತ್ತು ಬಿ.ಜೆ.ಪಿಯ ಕೋಮು ರಾಜಕಾರಣವನ್ನು ಸೋಲಿಸಬೇಕು ಎಂದು ಹಟಕ್ಕೆ ಬಿದ್ದಿರುವ ಅವರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಹಗಲೂ ರಾತ್ರಿ ಎನ್ನದೇ ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ.

ಹಾಗೆಯೇ ಇದೇ 16 ನೇ ತಾರಿಖು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತ “ಬಿಜೆಪಿ ಸೇನೆಯನ್ನು ಮತ್ತು ಸೇನಾ ಕಾರ್ಯಾಚರಣೆಯನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತಿದೆ. ದಲಿತರು ಅಲ್ಪ ಸಂಖ್ಯಾತರು ಮತ್ತು ಹಿಂದುಳಿದವರ ಭದ್ರ ನೆಲೆ ಹೊಂದಿರುವ ಕಾಂಗ್ರೇಸ್ ಪಕ್ಷ ಎಂದೂ ಕೂಡ ಸೈನಿಕರನ್ನು ಚುನಾವಣಾ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಹಾಗೇ ನೋಡಿದರೇ ದೇಶಕ್ಕಾಗಿ ಹುತಾತ್ಮರಾದ ಸೈನಿಕರಲ್ಲಿ ಬಹುಪಾಲು ಕೆಳವರ್ಗದವರೇ ಆಗಿರುತ್ತಾರೆ. ಕುಲಕರ್ಣಿ, ದೇಸಾಯಿ, ದೇಶಪಾಂಡೆ ಇಂಥ ಅಡ್ಡ ಹೆಸರು ಕೇಳುವುದು ಕಡಿಮೆ. ನಾವು ನಿಜವಾದ ಅರ್ಥದಲ್ಲಿ ದೇಶ ಭಕ್ತರಾದರೂ ಅದನ್ನು ರಾಜಕಾರಣಕ್ಕೆ ಬಳಸಿಕೊಂಡು ಸೇನೆಯ ಘನತೆಗೆ ಕುಂದು ತರುವುದಿಲ್ಲ. ಆದರೇ ಯಾವ ಜನಪರ ಕೆಲಸವನ್ನೂ ಮಾಡದವರು ಇಂದು ಸೇನೆಯ ಹೆಸರಿನಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿದ್ದಾರೆ” ಎಂದು ಮಾತನಾಡಿದ್ದಾರೆ.

ಇದರಲ್ಲಿ ಬ್ರಾಹ್ಮಣ ಮಹಾಸಭಾದವರಿಗೆ ತಮ್ಮ ಸಮುದಾಯವನ್ನು ಅವಹೇಳನ ಮಾಡಿರುವಂತದ್ದು ಏನು ಕಂಡು ಬಂತು ಎಂಬುದು ಎಂಬುದು ಬಹುಮುಖ್ಯವಾದ ಪ್ರಶ್ನೆ. ಆದರೂ ಅದರ ಅಧ್ಯಕ್ಷರಾದ ಕೆ.ಎನ್. ವೆಂಕಟನಾರಾಯಣರವರು ತಮ್ಮ ಸಮುದಾಯದ ಕುರಿತು ಸತೀಶ ಜಾರಕಿಹೊಳಿ ಅವಹೇಳನಕಾರಿಯಾಗಿ ಮಾತಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಸತೀಶ ಜಾರಕಿಹೊಳಿ ಕೇವಲ ಒಬ್ಬ ರಾಜಕಾರಣಿ ಮಾತ್ರವಲ್ಲ. ಅಧಿಕಾರದ ಆಸೆಗಾಗಿ ಸ್ವಾಭಿಮಾನ ಬಿಟ್ಟು ಇನ್ನೊಬ್ಬರ ಹಿಂದೆ ಅಲೆಯುವುದು ಅವರ ಜಾಯಮಾನವಲ್ಲ. ಅವರು ಮಾನವ ಬಂಧುತ್ವ ವೇದಿಕೆಯನ್ನು ಕಟ್ಟಿ ರಾಜ್ಯಾದ್ಯಂತ ಅಂಬೇಡ್ಕರ್ ಸಿದ್ಧಾಂತದ ಆಧಾರದ ಮೇಲೆ ಚಳುವಳಿ ನಡೆಸುತ್ತಿರುವವರು. ಲಕ್ಷಾಂತರ ಜನರನ್ನು ಸ್ಮಶಾನಕ್ಕೆ ಕರೆಸಿ ಹಗಲು-ರಾತ್ರಿ ಮೂಢನಂಬಿಕೆ ವಿರುದ್ಧ ಕಾರ್ಯಕ್ರಮ ಮಾಡುವ ಛಾತಿ ಇರುವ ವ್ಯಕ್ತಿ. ಅವರಿಗಿರುವ ಕಳಕಳಿ, ಬದುಕಿನ ಸರಳ ಸಹಜತೆಯ ಕಾರಣಕ್ಕೆ ನಾಡಿನ ಮೂಲೆ ಮೂಲೆಯಲ್ಲಿ ಕಾರ್ಯಕರ್ತರ ಪಡೆಹೊಂದಿರುವ, ಹಳ್ಳಿಗಳ ಮಟ್ಟದಲ್ಲೂ ಅಂಬೇಡ್ಕರ, ಬುದ್ಧ, ಬಸವಣ್ಣನವರ ವಿಚಾರಗಳ ಕುರಿತು ಚರ್ಚೆ ಹುಟ್ಟು ಹಾಕುತ್ತಿರುವ ಇವರು ಸಹಜವಾಗಿಯೇ ಸಂಘ ಪರಿವಾರದ ಕೋಮುವಾದಿ, ಜಾತಿವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಂತೂ ಮಾನವ ಬಂಧುತ್ವ ವೇದಿಕೆ ಆರ್.ಎಸ್.ಎಸ್ ಮತ್ತು ಅದರ ಪರಿವಾರಕ್ಕಿಂತಲೂ ಬಲಿಷ್ಟವಾಗಿ ಬೆಳೆದು ನಿಂತಿದೆ. ಇದು ಬ್ರಾಹ್ಮಣ ಮಹಾಸಭಾದ ವೆಂಕಟನಾರಾಯಣರನ್ನು ಸತೀಶ ಜಾರಕಿಹೊಳಿಯವರ ವಿರುದ್ಧ ದೂರು ನೀಡುವ ಅವಸರಕ್ಕೆ ದೂಡಿತೇ? ಅಥವಾ ಬಿಜೆಪಿ, ಸಂಘ ಪರಿವಾರದ ಅನತಿಯಂತೆ ಹಗೆತನಕ್ಕೆ ಇಳಿದರಾ? ಸಮುದಾಯದ ಸಂಘಟನೆಯೊಂದು ಪಕ್ಷಾತೀತವಾಗಿರಬೇಕು ಆದರೆ ಅದರ ಅಧ್ಯಕ್ಷರು ಸಮುದಾಯ ಸಂಘಟನೆಯನ್ನು ವೈಯಕ್ತಿಕ ರಾಜಕಾರಣಕ್ಕೆ ಬಳಸಿಕೊಂಡರಾ? ಇದನ್ನೆಲ್ಲ ಗಮನಿಸಬೇಕಾದದ್ದು ಸಂಘಟನೆಯ ಹೊಣೆಗಾರಿಕೆ. ಇವರು ನೀಡಿದ ದೂರನ್ನು ಕೂಲಂಕುಷವಾಗಿ ಪರಿಶೀಲಿಸಿದ ಚುನಾವಣಾ ಆಯೋಗ ಸತೀಶ ಜಾರಕಿಹೊಳಿಯವರು ಮಾಡಿದ ಇಡೀ ಭಾಷಣದಲ್ಲಿ ಯಾವುದೇ ಸಮುದಾಯದ ಕುರಿತು ಅವಹೇಳನಕಾರಿಯಾದ ಯಾವುದೇ ಮಾತುಗಳೂ ಇಲ್ಲ ಎಂದು ತಿಳಿಸಿದೆ. ಸುಳ್ಳು ಆರೋಪ ಮಾಡಿ ಪ್ರಚಾರ ಮಾಡಿ ತೇಜೋವಧೆ ಮಾಡಿದ ಸ್ಥಾನದಲ್ಲೀಗ ಬ್ರಾಹ್ಮಣ ಮಹಾಸಭಾ ಬಂದು ನಿಂತಿದೆ. ಅದಕ್ಕಾಗಿ ಅದರ ಅಧ್ಯಕ್ಷ ವೆಂಕಟನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಪ್ರಕರಣ ದಾಖಲಿಸುತ್ತಾರೋ ಇಲ್ಲವೋ ಏಕೆಂದರೆ ಬ್ರಾಹ್ಮಣ ಸಮುದಾಯದಲ್ಲೂ ಬಹಳಷ್ಟು ಜನ ಅವರ ಬೆಂಬಲಿಗರಿದ್ದಾರೆ. ಆದರೆ ಸಮುದಾಯವೊಂದನ್ನು ಪ್ರತಿನಿಧಿಸುವ ಸಂಘಟನೆಯ ಅಧ್ಯಕ್ಷನ ಅವಸರ ಮತ್ತು ಅವಿವೇಕದ ನಡೆಯಿಂದಾಗಿ ಕೆಳಸಮುದಾಯಗಳ ಆಕ್ರೋಶಕ್ಕೆ ತುತ್ತಾಗಿದ್ದು ಮಾತ್ರ ಸತ್ಯ. ಕೋಮುರಾಜಕಾರಣದ ಸುಳಿಗೆ ಬಲಿಯಾಗಿ ಜನರ ವಿರೋಧವನ್ನು ಎದರಿಸುವ ಮುನ್ನ ಇಂಥ ಸಂಘಟನೆಗಳು ಮತ್ತೇ ಮತ್ತೇ ಯೋಚಿಸುವ ಅಗತ್ಯವಿದೆ.

ಸಂಘಕ್ಕೆ ಎದುರು ನಿಂತ ಯುವ ಪಡೆ.
ಬೆಳಗಾವಿ ಜಿಲ್ಲೆ ತುಂಬ ತನ್ನ ಬೇರುಗಳನ್ನು ಚಾಚಲು ಸಂಘಪರಿವಾರದ ಸಂಘಟನೆಗಳು ಕೆಳಸಮುದಾಯದ ಅಮಾಯಕ ಯುವಕರನ್ನು ಬಳಸಿಕೊಂಡು ಕೈಬಿಡುವುದು ಹೆಚ್ಚಾಗುತ್ತಿದ್ದ ಸಮಯದಲ್ಲಿಯೇ ಯುವಕರನ್ನು ಸಂಘಪರಿವಾರಕ್ಕೆ ಬಲಿಯಾಗದಂತೆ ತಡೆದು ಅವರನ್ನು ಅಂಬೇಡ್ಕರ, ಬುದ್ಧ, ಬಸವಣ್ಣನವರ ಆದರ್ಶ ಮಾರ್ಗದಲ್ಲಿ ಮುನ್ನಡೆಸುತ್ತೇವೆ ಎಂದು ಐದು ವರ್ಷಗಳ ಹಿಂದೇ ಆರಂಭವಾದ ಮಾನವ ಬಂಧುತ್ವ ವೇದಿಕೆ ಇಂದು ಸಂಘಪರಿವಾರವನ್ನು ಎದುರಿಸುವ ಮಟ್ಟದಲ್ಲಿ ಬೆಳೆದು ನಿಂತಿದೆ.
ಯಾವುದೇ ಕೋಮು, ಜಾತಿ ಗಲಭೆಗಳಿಗೆ ಪ್ರಚೋಧಿಸದೇ ಅಂಬೇಡ್ಕರ್ ತತ್ವಗಳನ್ನು ಹರಡುತ್ತ, ಯುವ ಜನರು ಬದುಕು ಕಟ್ಟಿಕೊಳ್ಳಲು ವ್ಯಾಪಾರ ಮಾಡುವ, ಸಣ್ಣ ಪುಟ್ಟ ಉದ್ಯಮಗಳನ್ನು ಸ್ಥಾಪಿಸಿ ಕೆಲಸ ನೀಡುವ ಕುರಿತು ತರಬೇತಿ ನೀಡುತ್ತ ಅದು ಬೆಳೆದು ನಿಂತ ಪರಿ ಸಂಘಪರಿವಾರಕ್ಕೆ ಸವಾಲಾಗಿದೆ. ಇದರಿಂದಾಗಿ ಕೆಳಸಮುದಾಯಗಳಲ್ಲಿ ಅದರ ಆಟ ನಿಂತು ಹೋಗುವ ಮಟ್ಟಕ್ಕೆ ಬಂದು ನಿಂತಿದೆ. ಮೂಢ ನಂಬಿಕೆಯ ವಿರುದ್ಧದ ಹೋರಾಟವಂತೂ ಕೆಸರಿ ಪಡೆಗಳ ನಿದ್ದೆಗೆಡಿಸಿದೆ. ಚಕ್ರವರ್ತಿ ಸೂಲಿಬೆಲಿಯಂತಹ ಕೋಮು ದ್ವೇಷದ ಭಾಷಣಕಾರರನ್ನು ಜಿಲ್ಲೆಗೆ ಕಾಲಿಡದಂತೆ ತಡೆಯುವ ತಾಕತ್ತು ಅವರನ್ನು ಚಿಂತೆಗೀಡು ಮಾಡಿರುವುದು ಕೂಡ ಜಾರಕಿಹೊಳಿಯವರ ಮೇಲೆ ಹಗೇ ಸಾಧಿಸಿ ತೇಜೋವಧೆಗಿಳಿಯುವ ಕೆಲಸಕ್ಕೆ ಕಾರಣವಾಯಿತೇ……ಎಲ್ಲಕ್ಕೂ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳೇ ಉತ್ತರಿಸಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...