Homeಕರ್ನಾಟಕಬೆಳಗಾವಿ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿ ಸೋತುಹೋದ ಬ್ರಾಹ್ಮಣ ಮಹಾಸಭಾ

ಬೆಳಗಾವಿ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿ ಸೋತುಹೋದ ಬ್ರಾಹ್ಮಣ ಮಹಾಸಭಾ

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಸತೀಶ ಜಾರಕಿಹೊಳಿಯಂತಹ ಪ್ರಬುದ್ಧ, ಜನಬೆಂಬಲಿತ ರಾಜಕಾರಣಿಯ ವಿರುದ್ಧ ತಮ್ಮ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಮುನ್ನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸ್ವಲ್ಪ ವಿವೇಚನೆಯಿಂದ ಆಲೋಚಿಸಿದ್ದರೆ ಇಂತಹ ಒಂದು ಮುಜುಗರ ಅನುಭವಿಸುವ ಸಂದರ್ಭವನ್ನು ಎದುರಿಸುತ್ತಿರಲಿಲ್ಲ. ಆದರೆ ಅದರ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅವಸರಕ್ಕೆ ಬಿದ್ದು ಇಡೀ ಸಮುದಾಯ ಸಂಘಟನೆಯೇ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದಾರೆ. ಆದರೆ ಇಂಥ ಒಂದು ಸಂದರ್ಭಕ್ಕೆ ಸಿಲುಕಿಕೊಳ್ಳಲು ಕಾರಣವೇನು ಎಂಬುದನ್ನು ಬ್ರಾಹ್ಮಣ ಮಹಾಸಭಾ ಪರಾಮರ್ಶಿಸಿಕೊಳ್ಳಲೇಬೇಕಿದೆ. ಅಷ್ಟಕ್ಕೂ ನಡೆದ್ದಾದರೂ ಏನು ಎಂಬುದನ್ನು ಕಂಡುಕೊಂಡರೆ ಈ ನಡೆಯ ಹಿಂದಿನ ಅಪ್ರಬುದ್ಧತೆ ಎದ್ದು ಕಾಣುತ್ತದೆ.

ಎಲ್ಲರಿಗೂ ಗೊತ್ತಿರುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಹಾಗು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಸತೀಶ ಜಾರಕಿಹೊಳಿಯವರ ಮೇಲಿದೆ. ಅಣ್ಣ ರಮೇಶ ಜಾರಕಿಹೊಳಿ ಬಿ.ಜೆ.ಪಿಯ ಬಾಗಿಲಲ್ಲಿ ನಿಂತಿರುವುದರಿಂದ ಇವರ ಮೇಲೆ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ. ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು ಮತ್ತು ಬಿ.ಜೆ.ಪಿಯ ಕೋಮು ರಾಜಕಾರಣವನ್ನು ಸೋಲಿಸಬೇಕು ಎಂದು ಹಟಕ್ಕೆ ಬಿದ್ದಿರುವ ಅವರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಹಗಲೂ ರಾತ್ರಿ ಎನ್ನದೇ ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ.

ಹಾಗೆಯೇ ಇದೇ 16 ನೇ ತಾರಿಖು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತ “ಬಿಜೆಪಿ ಸೇನೆಯನ್ನು ಮತ್ತು ಸೇನಾ ಕಾರ್ಯಾಚರಣೆಯನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತಿದೆ. ದಲಿತರು ಅಲ್ಪ ಸಂಖ್ಯಾತರು ಮತ್ತು ಹಿಂದುಳಿದವರ ಭದ್ರ ನೆಲೆ ಹೊಂದಿರುವ ಕಾಂಗ್ರೇಸ್ ಪಕ್ಷ ಎಂದೂ ಕೂಡ ಸೈನಿಕರನ್ನು ಚುನಾವಣಾ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಹಾಗೇ ನೋಡಿದರೇ ದೇಶಕ್ಕಾಗಿ ಹುತಾತ್ಮರಾದ ಸೈನಿಕರಲ್ಲಿ ಬಹುಪಾಲು ಕೆಳವರ್ಗದವರೇ ಆಗಿರುತ್ತಾರೆ. ಕುಲಕರ್ಣಿ, ದೇಸಾಯಿ, ದೇಶಪಾಂಡೆ ಇಂಥ ಅಡ್ಡ ಹೆಸರು ಕೇಳುವುದು ಕಡಿಮೆ. ನಾವು ನಿಜವಾದ ಅರ್ಥದಲ್ಲಿ ದೇಶ ಭಕ್ತರಾದರೂ ಅದನ್ನು ರಾಜಕಾರಣಕ್ಕೆ ಬಳಸಿಕೊಂಡು ಸೇನೆಯ ಘನತೆಗೆ ಕುಂದು ತರುವುದಿಲ್ಲ. ಆದರೇ ಯಾವ ಜನಪರ ಕೆಲಸವನ್ನೂ ಮಾಡದವರು ಇಂದು ಸೇನೆಯ ಹೆಸರಿನಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿದ್ದಾರೆ” ಎಂದು ಮಾತನಾಡಿದ್ದಾರೆ.

ಇದರಲ್ಲಿ ಬ್ರಾಹ್ಮಣ ಮಹಾಸಭಾದವರಿಗೆ ತಮ್ಮ ಸಮುದಾಯವನ್ನು ಅವಹೇಳನ ಮಾಡಿರುವಂತದ್ದು ಏನು ಕಂಡು ಬಂತು ಎಂಬುದು ಎಂಬುದು ಬಹುಮುಖ್ಯವಾದ ಪ್ರಶ್ನೆ. ಆದರೂ ಅದರ ಅಧ್ಯಕ್ಷರಾದ ಕೆ.ಎನ್. ವೆಂಕಟನಾರಾಯಣರವರು ತಮ್ಮ ಸಮುದಾಯದ ಕುರಿತು ಸತೀಶ ಜಾರಕಿಹೊಳಿ ಅವಹೇಳನಕಾರಿಯಾಗಿ ಮಾತಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಸತೀಶ ಜಾರಕಿಹೊಳಿ ಕೇವಲ ಒಬ್ಬ ರಾಜಕಾರಣಿ ಮಾತ್ರವಲ್ಲ. ಅಧಿಕಾರದ ಆಸೆಗಾಗಿ ಸ್ವಾಭಿಮಾನ ಬಿಟ್ಟು ಇನ್ನೊಬ್ಬರ ಹಿಂದೆ ಅಲೆಯುವುದು ಅವರ ಜಾಯಮಾನವಲ್ಲ. ಅವರು ಮಾನವ ಬಂಧುತ್ವ ವೇದಿಕೆಯನ್ನು ಕಟ್ಟಿ ರಾಜ್ಯಾದ್ಯಂತ ಅಂಬೇಡ್ಕರ್ ಸಿದ್ಧಾಂತದ ಆಧಾರದ ಮೇಲೆ ಚಳುವಳಿ ನಡೆಸುತ್ತಿರುವವರು. ಲಕ್ಷಾಂತರ ಜನರನ್ನು ಸ್ಮಶಾನಕ್ಕೆ ಕರೆಸಿ ಹಗಲು-ರಾತ್ರಿ ಮೂಢನಂಬಿಕೆ ವಿರುದ್ಧ ಕಾರ್ಯಕ್ರಮ ಮಾಡುವ ಛಾತಿ ಇರುವ ವ್ಯಕ್ತಿ. ಅವರಿಗಿರುವ ಕಳಕಳಿ, ಬದುಕಿನ ಸರಳ ಸಹಜತೆಯ ಕಾರಣಕ್ಕೆ ನಾಡಿನ ಮೂಲೆ ಮೂಲೆಯಲ್ಲಿ ಕಾರ್ಯಕರ್ತರ ಪಡೆಹೊಂದಿರುವ, ಹಳ್ಳಿಗಳ ಮಟ್ಟದಲ್ಲೂ ಅಂಬೇಡ್ಕರ, ಬುದ್ಧ, ಬಸವಣ್ಣನವರ ವಿಚಾರಗಳ ಕುರಿತು ಚರ್ಚೆ ಹುಟ್ಟು ಹಾಕುತ್ತಿರುವ ಇವರು ಸಹಜವಾಗಿಯೇ ಸಂಘ ಪರಿವಾರದ ಕೋಮುವಾದಿ, ಜಾತಿವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಂತೂ ಮಾನವ ಬಂಧುತ್ವ ವೇದಿಕೆ ಆರ್.ಎಸ್.ಎಸ್ ಮತ್ತು ಅದರ ಪರಿವಾರಕ್ಕಿಂತಲೂ ಬಲಿಷ್ಟವಾಗಿ ಬೆಳೆದು ನಿಂತಿದೆ. ಇದು ಬ್ರಾಹ್ಮಣ ಮಹಾಸಭಾದ ವೆಂಕಟನಾರಾಯಣರನ್ನು ಸತೀಶ ಜಾರಕಿಹೊಳಿಯವರ ವಿರುದ್ಧ ದೂರು ನೀಡುವ ಅವಸರಕ್ಕೆ ದೂಡಿತೇ? ಅಥವಾ ಬಿಜೆಪಿ, ಸಂಘ ಪರಿವಾರದ ಅನತಿಯಂತೆ ಹಗೆತನಕ್ಕೆ ಇಳಿದರಾ? ಸಮುದಾಯದ ಸಂಘಟನೆಯೊಂದು ಪಕ್ಷಾತೀತವಾಗಿರಬೇಕು ಆದರೆ ಅದರ ಅಧ್ಯಕ್ಷರು ಸಮುದಾಯ ಸಂಘಟನೆಯನ್ನು ವೈಯಕ್ತಿಕ ರಾಜಕಾರಣಕ್ಕೆ ಬಳಸಿಕೊಂಡರಾ? ಇದನ್ನೆಲ್ಲ ಗಮನಿಸಬೇಕಾದದ್ದು ಸಂಘಟನೆಯ ಹೊಣೆಗಾರಿಕೆ. ಇವರು ನೀಡಿದ ದೂರನ್ನು ಕೂಲಂಕುಷವಾಗಿ ಪರಿಶೀಲಿಸಿದ ಚುನಾವಣಾ ಆಯೋಗ ಸತೀಶ ಜಾರಕಿಹೊಳಿಯವರು ಮಾಡಿದ ಇಡೀ ಭಾಷಣದಲ್ಲಿ ಯಾವುದೇ ಸಮುದಾಯದ ಕುರಿತು ಅವಹೇಳನಕಾರಿಯಾದ ಯಾವುದೇ ಮಾತುಗಳೂ ಇಲ್ಲ ಎಂದು ತಿಳಿಸಿದೆ. ಸುಳ್ಳು ಆರೋಪ ಮಾಡಿ ಪ್ರಚಾರ ಮಾಡಿ ತೇಜೋವಧೆ ಮಾಡಿದ ಸ್ಥಾನದಲ್ಲೀಗ ಬ್ರಾಹ್ಮಣ ಮಹಾಸಭಾ ಬಂದು ನಿಂತಿದೆ. ಅದಕ್ಕಾಗಿ ಅದರ ಅಧ್ಯಕ್ಷ ವೆಂಕಟನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಪ್ರಕರಣ ದಾಖಲಿಸುತ್ತಾರೋ ಇಲ್ಲವೋ ಏಕೆಂದರೆ ಬ್ರಾಹ್ಮಣ ಸಮುದಾಯದಲ್ಲೂ ಬಹಳಷ್ಟು ಜನ ಅವರ ಬೆಂಬಲಿಗರಿದ್ದಾರೆ. ಆದರೆ ಸಮುದಾಯವೊಂದನ್ನು ಪ್ರತಿನಿಧಿಸುವ ಸಂಘಟನೆಯ ಅಧ್ಯಕ್ಷನ ಅವಸರ ಮತ್ತು ಅವಿವೇಕದ ನಡೆಯಿಂದಾಗಿ ಕೆಳಸಮುದಾಯಗಳ ಆಕ್ರೋಶಕ್ಕೆ ತುತ್ತಾಗಿದ್ದು ಮಾತ್ರ ಸತ್ಯ. ಕೋಮುರಾಜಕಾರಣದ ಸುಳಿಗೆ ಬಲಿಯಾಗಿ ಜನರ ವಿರೋಧವನ್ನು ಎದರಿಸುವ ಮುನ್ನ ಇಂಥ ಸಂಘಟನೆಗಳು ಮತ್ತೇ ಮತ್ತೇ ಯೋಚಿಸುವ ಅಗತ್ಯವಿದೆ.

ಸಂಘಕ್ಕೆ ಎದುರು ನಿಂತ ಯುವ ಪಡೆ.
ಬೆಳಗಾವಿ ಜಿಲ್ಲೆ ತುಂಬ ತನ್ನ ಬೇರುಗಳನ್ನು ಚಾಚಲು ಸಂಘಪರಿವಾರದ ಸಂಘಟನೆಗಳು ಕೆಳಸಮುದಾಯದ ಅಮಾಯಕ ಯುವಕರನ್ನು ಬಳಸಿಕೊಂಡು ಕೈಬಿಡುವುದು ಹೆಚ್ಚಾಗುತ್ತಿದ್ದ ಸಮಯದಲ್ಲಿಯೇ ಯುವಕರನ್ನು ಸಂಘಪರಿವಾರಕ್ಕೆ ಬಲಿಯಾಗದಂತೆ ತಡೆದು ಅವರನ್ನು ಅಂಬೇಡ್ಕರ, ಬುದ್ಧ, ಬಸವಣ್ಣನವರ ಆದರ್ಶ ಮಾರ್ಗದಲ್ಲಿ ಮುನ್ನಡೆಸುತ್ತೇವೆ ಎಂದು ಐದು ವರ್ಷಗಳ ಹಿಂದೇ ಆರಂಭವಾದ ಮಾನವ ಬಂಧುತ್ವ ವೇದಿಕೆ ಇಂದು ಸಂಘಪರಿವಾರವನ್ನು ಎದುರಿಸುವ ಮಟ್ಟದಲ್ಲಿ ಬೆಳೆದು ನಿಂತಿದೆ.
ಯಾವುದೇ ಕೋಮು, ಜಾತಿ ಗಲಭೆಗಳಿಗೆ ಪ್ರಚೋಧಿಸದೇ ಅಂಬೇಡ್ಕರ್ ತತ್ವಗಳನ್ನು ಹರಡುತ್ತ, ಯುವ ಜನರು ಬದುಕು ಕಟ್ಟಿಕೊಳ್ಳಲು ವ್ಯಾಪಾರ ಮಾಡುವ, ಸಣ್ಣ ಪುಟ್ಟ ಉದ್ಯಮಗಳನ್ನು ಸ್ಥಾಪಿಸಿ ಕೆಲಸ ನೀಡುವ ಕುರಿತು ತರಬೇತಿ ನೀಡುತ್ತ ಅದು ಬೆಳೆದು ನಿಂತ ಪರಿ ಸಂಘಪರಿವಾರಕ್ಕೆ ಸವಾಲಾಗಿದೆ. ಇದರಿಂದಾಗಿ ಕೆಳಸಮುದಾಯಗಳಲ್ಲಿ ಅದರ ಆಟ ನಿಂತು ಹೋಗುವ ಮಟ್ಟಕ್ಕೆ ಬಂದು ನಿಂತಿದೆ. ಮೂಢ ನಂಬಿಕೆಯ ವಿರುದ್ಧದ ಹೋರಾಟವಂತೂ ಕೆಸರಿ ಪಡೆಗಳ ನಿದ್ದೆಗೆಡಿಸಿದೆ. ಚಕ್ರವರ್ತಿ ಸೂಲಿಬೆಲಿಯಂತಹ ಕೋಮು ದ್ವೇಷದ ಭಾಷಣಕಾರರನ್ನು ಜಿಲ್ಲೆಗೆ ಕಾಲಿಡದಂತೆ ತಡೆಯುವ ತಾಕತ್ತು ಅವರನ್ನು ಚಿಂತೆಗೀಡು ಮಾಡಿರುವುದು ಕೂಡ ಜಾರಕಿಹೊಳಿಯವರ ಮೇಲೆ ಹಗೇ ಸಾಧಿಸಿ ತೇಜೋವಧೆಗಿಳಿಯುವ ಕೆಲಸಕ್ಕೆ ಕಾರಣವಾಯಿತೇ……ಎಲ್ಲಕ್ಕೂ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳೇ ಉತ್ತರಿಸಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...