Homeಕರ್ನಾಟಕಬೆಳಗಾವಿ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿ ಸೋತುಹೋದ ಬ್ರಾಹ್ಮಣ ಮಹಾಸಭಾ

ಬೆಳಗಾವಿ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿ ಸೋತುಹೋದ ಬ್ರಾಹ್ಮಣ ಮಹಾಸಭಾ

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |

ಸತೀಶ ಜಾರಕಿಹೊಳಿಯಂತಹ ಪ್ರಬುದ್ಧ, ಜನಬೆಂಬಲಿತ ರಾಜಕಾರಣಿಯ ವಿರುದ್ಧ ತಮ್ಮ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಮುನ್ನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸ್ವಲ್ಪ ವಿವೇಚನೆಯಿಂದ ಆಲೋಚಿಸಿದ್ದರೆ ಇಂತಹ ಒಂದು ಮುಜುಗರ ಅನುಭವಿಸುವ ಸಂದರ್ಭವನ್ನು ಎದುರಿಸುತ್ತಿರಲಿಲ್ಲ. ಆದರೆ ಅದರ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ ಅವಸರಕ್ಕೆ ಬಿದ್ದು ಇಡೀ ಸಮುದಾಯ ಸಂಘಟನೆಯೇ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದ್ದಾರೆ. ಆದರೆ ಇಂಥ ಒಂದು ಸಂದರ್ಭಕ್ಕೆ ಸಿಲುಕಿಕೊಳ್ಳಲು ಕಾರಣವೇನು ಎಂಬುದನ್ನು ಬ್ರಾಹ್ಮಣ ಮಹಾಸಭಾ ಪರಾಮರ್ಶಿಸಿಕೊಳ್ಳಲೇಬೇಕಿದೆ. ಅಷ್ಟಕ್ಕೂ ನಡೆದ್ದಾದರೂ ಏನು ಎಂಬುದನ್ನು ಕಂಡುಕೊಂಡರೆ ಈ ನಡೆಯ ಹಿಂದಿನ ಅಪ್ರಬುದ್ಧತೆ ಎದ್ದು ಕಾಣುತ್ತದೆ.

ಎಲ್ಲರಿಗೂ ಗೊತ್ತಿರುವಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಹಾಗು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಸತೀಶ ಜಾರಕಿಹೊಳಿಯವರ ಮೇಲಿದೆ. ಅಣ್ಣ ರಮೇಶ ಜಾರಕಿಹೊಳಿ ಬಿ.ಜೆ.ಪಿಯ ಬಾಗಿಲಲ್ಲಿ ನಿಂತಿರುವುದರಿಂದ ಇವರ ಮೇಲೆ ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ. ಎರಡೂ ಕ್ಷೇತ್ರಗಳನ್ನು ಗೆಲ್ಲಲೇಬೇಕು ಮತ್ತು ಬಿ.ಜೆ.ಪಿಯ ಕೋಮು ರಾಜಕಾರಣವನ್ನು ಸೋಲಿಸಬೇಕು ಎಂದು ಹಟಕ್ಕೆ ಬಿದ್ದಿರುವ ಅವರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಹಗಲೂ ರಾತ್ರಿ ಎನ್ನದೇ ಹಳ್ಳಿ ಹಳ್ಳಿ ಸುತ್ತುತ್ತಿದ್ದಾರೆ.

ಹಾಗೆಯೇ ಇದೇ 16 ನೇ ತಾರಿಖು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತ “ಬಿಜೆಪಿ ಸೇನೆಯನ್ನು ಮತ್ತು ಸೇನಾ ಕಾರ್ಯಾಚರಣೆಯನ್ನು ಚುನಾವಣೆಗಾಗಿ ಬಳಸಿಕೊಳ್ಳುತ್ತಿದೆ. ದಲಿತರು ಅಲ್ಪ ಸಂಖ್ಯಾತರು ಮತ್ತು ಹಿಂದುಳಿದವರ ಭದ್ರ ನೆಲೆ ಹೊಂದಿರುವ ಕಾಂಗ್ರೇಸ್ ಪಕ್ಷ ಎಂದೂ ಕೂಡ ಸೈನಿಕರನ್ನು ಚುನಾವಣಾ ರಾಜಕಾರಣಕ್ಕೆ ಬಳಸಿಕೊಂಡಿಲ್ಲ. ಹಾಗೇ ನೋಡಿದರೇ ದೇಶಕ್ಕಾಗಿ ಹುತಾತ್ಮರಾದ ಸೈನಿಕರಲ್ಲಿ ಬಹುಪಾಲು ಕೆಳವರ್ಗದವರೇ ಆಗಿರುತ್ತಾರೆ. ಕುಲಕರ್ಣಿ, ದೇಸಾಯಿ, ದೇಶಪಾಂಡೆ ಇಂಥ ಅಡ್ಡ ಹೆಸರು ಕೇಳುವುದು ಕಡಿಮೆ. ನಾವು ನಿಜವಾದ ಅರ್ಥದಲ್ಲಿ ದೇಶ ಭಕ್ತರಾದರೂ ಅದನ್ನು ರಾಜಕಾರಣಕ್ಕೆ ಬಳಸಿಕೊಂಡು ಸೇನೆಯ ಘನತೆಗೆ ಕುಂದು ತರುವುದಿಲ್ಲ. ಆದರೇ ಯಾವ ಜನಪರ ಕೆಲಸವನ್ನೂ ಮಾಡದವರು ಇಂದು ಸೇನೆಯ ಹೆಸರಿನಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿದ್ದಾರೆ” ಎಂದು ಮಾತನಾಡಿದ್ದಾರೆ.

ಇದರಲ್ಲಿ ಬ್ರಾಹ್ಮಣ ಮಹಾಸಭಾದವರಿಗೆ ತಮ್ಮ ಸಮುದಾಯವನ್ನು ಅವಹೇಳನ ಮಾಡಿರುವಂತದ್ದು ಏನು ಕಂಡು ಬಂತು ಎಂಬುದು ಎಂಬುದು ಬಹುಮುಖ್ಯವಾದ ಪ್ರಶ್ನೆ. ಆದರೂ ಅದರ ಅಧ್ಯಕ್ಷರಾದ ಕೆ.ಎನ್. ವೆಂಕಟನಾರಾಯಣರವರು ತಮ್ಮ ಸಮುದಾಯದ ಕುರಿತು ಸತೀಶ ಜಾರಕಿಹೊಳಿ ಅವಹೇಳನಕಾರಿಯಾಗಿ ಮಾತಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಇಲ್ಲಿ ಗಮನಿಸಬೇಕಾದ ವಿಷಯವೆಂದರೆ ಸತೀಶ ಜಾರಕಿಹೊಳಿ ಕೇವಲ ಒಬ್ಬ ರಾಜಕಾರಣಿ ಮಾತ್ರವಲ್ಲ. ಅಧಿಕಾರದ ಆಸೆಗಾಗಿ ಸ್ವಾಭಿಮಾನ ಬಿಟ್ಟು ಇನ್ನೊಬ್ಬರ ಹಿಂದೆ ಅಲೆಯುವುದು ಅವರ ಜಾಯಮಾನವಲ್ಲ. ಅವರು ಮಾನವ ಬಂಧುತ್ವ ವೇದಿಕೆಯನ್ನು ಕಟ್ಟಿ ರಾಜ್ಯಾದ್ಯಂತ ಅಂಬೇಡ್ಕರ್ ಸಿದ್ಧಾಂತದ ಆಧಾರದ ಮೇಲೆ ಚಳುವಳಿ ನಡೆಸುತ್ತಿರುವವರು. ಲಕ್ಷಾಂತರ ಜನರನ್ನು ಸ್ಮಶಾನಕ್ಕೆ ಕರೆಸಿ ಹಗಲು-ರಾತ್ರಿ ಮೂಢನಂಬಿಕೆ ವಿರುದ್ಧ ಕಾರ್ಯಕ್ರಮ ಮಾಡುವ ಛಾತಿ ಇರುವ ವ್ಯಕ್ತಿ. ಅವರಿಗಿರುವ ಕಳಕಳಿ, ಬದುಕಿನ ಸರಳ ಸಹಜತೆಯ ಕಾರಣಕ್ಕೆ ನಾಡಿನ ಮೂಲೆ ಮೂಲೆಯಲ್ಲಿ ಕಾರ್ಯಕರ್ತರ ಪಡೆಹೊಂದಿರುವ, ಹಳ್ಳಿಗಳ ಮಟ್ಟದಲ್ಲೂ ಅಂಬೇಡ್ಕರ, ಬುದ್ಧ, ಬಸವಣ್ಣನವರ ವಿಚಾರಗಳ ಕುರಿತು ಚರ್ಚೆ ಹುಟ್ಟು ಹಾಕುತ್ತಿರುವ ಇವರು ಸಹಜವಾಗಿಯೇ ಸಂಘ ಪರಿವಾರದ ಕೋಮುವಾದಿ, ಜಾತಿವಾದಿ ರಾಜಕಾರಣವನ್ನು ವಿರೋಧಿಸುತ್ತ ಬಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಂತೂ ಮಾನವ ಬಂಧುತ್ವ ವೇದಿಕೆ ಆರ್.ಎಸ್.ಎಸ್ ಮತ್ತು ಅದರ ಪರಿವಾರಕ್ಕಿಂತಲೂ ಬಲಿಷ್ಟವಾಗಿ ಬೆಳೆದು ನಿಂತಿದೆ. ಇದು ಬ್ರಾಹ್ಮಣ ಮಹಾಸಭಾದ ವೆಂಕಟನಾರಾಯಣರನ್ನು ಸತೀಶ ಜಾರಕಿಹೊಳಿಯವರ ವಿರುದ್ಧ ದೂರು ನೀಡುವ ಅವಸರಕ್ಕೆ ದೂಡಿತೇ? ಅಥವಾ ಬಿಜೆಪಿ, ಸಂಘ ಪರಿವಾರದ ಅನತಿಯಂತೆ ಹಗೆತನಕ್ಕೆ ಇಳಿದರಾ? ಸಮುದಾಯದ ಸಂಘಟನೆಯೊಂದು ಪಕ್ಷಾತೀತವಾಗಿರಬೇಕು ಆದರೆ ಅದರ ಅಧ್ಯಕ್ಷರು ಸಮುದಾಯ ಸಂಘಟನೆಯನ್ನು ವೈಯಕ್ತಿಕ ರಾಜಕಾರಣಕ್ಕೆ ಬಳಸಿಕೊಂಡರಾ? ಇದನ್ನೆಲ್ಲ ಗಮನಿಸಬೇಕಾದದ್ದು ಸಂಘಟನೆಯ ಹೊಣೆಗಾರಿಕೆ. ಇವರು ನೀಡಿದ ದೂರನ್ನು ಕೂಲಂಕುಷವಾಗಿ ಪರಿಶೀಲಿಸಿದ ಚುನಾವಣಾ ಆಯೋಗ ಸತೀಶ ಜಾರಕಿಹೊಳಿಯವರು ಮಾಡಿದ ಇಡೀ ಭಾಷಣದಲ್ಲಿ ಯಾವುದೇ ಸಮುದಾಯದ ಕುರಿತು ಅವಹೇಳನಕಾರಿಯಾದ ಯಾವುದೇ ಮಾತುಗಳೂ ಇಲ್ಲ ಎಂದು ತಿಳಿಸಿದೆ. ಸುಳ್ಳು ಆರೋಪ ಮಾಡಿ ಪ್ರಚಾರ ಮಾಡಿ ತೇಜೋವಧೆ ಮಾಡಿದ ಸ್ಥಾನದಲ್ಲೀಗ ಬ್ರಾಹ್ಮಣ ಮಹಾಸಭಾ ಬಂದು ನಿಂತಿದೆ. ಅದಕ್ಕಾಗಿ ಅದರ ಅಧ್ಯಕ್ಷ ವೆಂಕಟನಾರಾಯಣ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮಾನನಷ್ಟ ಪ್ರಕರಣ ದಾಖಲಿಸುವುದಾಗಿ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಪ್ರಕರಣ ದಾಖಲಿಸುತ್ತಾರೋ ಇಲ್ಲವೋ ಏಕೆಂದರೆ ಬ್ರಾಹ್ಮಣ ಸಮುದಾಯದಲ್ಲೂ ಬಹಳಷ್ಟು ಜನ ಅವರ ಬೆಂಬಲಿಗರಿದ್ದಾರೆ. ಆದರೆ ಸಮುದಾಯವೊಂದನ್ನು ಪ್ರತಿನಿಧಿಸುವ ಸಂಘಟನೆಯ ಅಧ್ಯಕ್ಷನ ಅವಸರ ಮತ್ತು ಅವಿವೇಕದ ನಡೆಯಿಂದಾಗಿ ಕೆಳಸಮುದಾಯಗಳ ಆಕ್ರೋಶಕ್ಕೆ ತುತ್ತಾಗಿದ್ದು ಮಾತ್ರ ಸತ್ಯ. ಕೋಮುರಾಜಕಾರಣದ ಸುಳಿಗೆ ಬಲಿಯಾಗಿ ಜನರ ವಿರೋಧವನ್ನು ಎದರಿಸುವ ಮುನ್ನ ಇಂಥ ಸಂಘಟನೆಗಳು ಮತ್ತೇ ಮತ್ತೇ ಯೋಚಿಸುವ ಅಗತ್ಯವಿದೆ.

ಸಂಘಕ್ಕೆ ಎದುರು ನಿಂತ ಯುವ ಪಡೆ.
ಬೆಳಗಾವಿ ಜಿಲ್ಲೆ ತುಂಬ ತನ್ನ ಬೇರುಗಳನ್ನು ಚಾಚಲು ಸಂಘಪರಿವಾರದ ಸಂಘಟನೆಗಳು ಕೆಳಸಮುದಾಯದ ಅಮಾಯಕ ಯುವಕರನ್ನು ಬಳಸಿಕೊಂಡು ಕೈಬಿಡುವುದು ಹೆಚ್ಚಾಗುತ್ತಿದ್ದ ಸಮಯದಲ್ಲಿಯೇ ಯುವಕರನ್ನು ಸಂಘಪರಿವಾರಕ್ಕೆ ಬಲಿಯಾಗದಂತೆ ತಡೆದು ಅವರನ್ನು ಅಂಬೇಡ್ಕರ, ಬುದ್ಧ, ಬಸವಣ್ಣನವರ ಆದರ್ಶ ಮಾರ್ಗದಲ್ಲಿ ಮುನ್ನಡೆಸುತ್ತೇವೆ ಎಂದು ಐದು ವರ್ಷಗಳ ಹಿಂದೇ ಆರಂಭವಾದ ಮಾನವ ಬಂಧುತ್ವ ವೇದಿಕೆ ಇಂದು ಸಂಘಪರಿವಾರವನ್ನು ಎದುರಿಸುವ ಮಟ್ಟದಲ್ಲಿ ಬೆಳೆದು ನಿಂತಿದೆ.
ಯಾವುದೇ ಕೋಮು, ಜಾತಿ ಗಲಭೆಗಳಿಗೆ ಪ್ರಚೋಧಿಸದೇ ಅಂಬೇಡ್ಕರ್ ತತ್ವಗಳನ್ನು ಹರಡುತ್ತ, ಯುವ ಜನರು ಬದುಕು ಕಟ್ಟಿಕೊಳ್ಳಲು ವ್ಯಾಪಾರ ಮಾಡುವ, ಸಣ್ಣ ಪುಟ್ಟ ಉದ್ಯಮಗಳನ್ನು ಸ್ಥಾಪಿಸಿ ಕೆಲಸ ನೀಡುವ ಕುರಿತು ತರಬೇತಿ ನೀಡುತ್ತ ಅದು ಬೆಳೆದು ನಿಂತ ಪರಿ ಸಂಘಪರಿವಾರಕ್ಕೆ ಸವಾಲಾಗಿದೆ. ಇದರಿಂದಾಗಿ ಕೆಳಸಮುದಾಯಗಳಲ್ಲಿ ಅದರ ಆಟ ನಿಂತು ಹೋಗುವ ಮಟ್ಟಕ್ಕೆ ಬಂದು ನಿಂತಿದೆ. ಮೂಢ ನಂಬಿಕೆಯ ವಿರುದ್ಧದ ಹೋರಾಟವಂತೂ ಕೆಸರಿ ಪಡೆಗಳ ನಿದ್ದೆಗೆಡಿಸಿದೆ. ಚಕ್ರವರ್ತಿ ಸೂಲಿಬೆಲಿಯಂತಹ ಕೋಮು ದ್ವೇಷದ ಭಾಷಣಕಾರರನ್ನು ಜಿಲ್ಲೆಗೆ ಕಾಲಿಡದಂತೆ ತಡೆಯುವ ತಾಕತ್ತು ಅವರನ್ನು ಚಿಂತೆಗೀಡು ಮಾಡಿರುವುದು ಕೂಡ ಜಾರಕಿಹೊಳಿಯವರ ಮೇಲೆ ಹಗೇ ಸಾಧಿಸಿ ತೇಜೋವಧೆಗಿಳಿಯುವ ಕೆಲಸಕ್ಕೆ ಕಾರಣವಾಯಿತೇ……ಎಲ್ಲಕ್ಕೂ ಬ್ರಾಹ್ಮಣ ಮಹಾಸಭಾದ ಪದಾಧಿಕಾರಿಗಳೇ ಉತ್ತರಿಸಬೇಕು.

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...