Homeಅಂತರಾಷ್ಟ್ರೀಯಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ - ಇಸ್ರೇಲ್‌ ಪ್ರಧಾನಿ

ಶನಿವಾರದೊಳಗೆ ಒತ್ತೆಯಾಳುಗಳ ಬಿಡುಗಡೆಯಾಗದಿದ್ದರೆ ಕದನ ವಿರಾಮ ಕೊನೆ – ಇಸ್ರೇಲ್‌ ಪ್ರಧಾನಿ

- Advertisement -
- Advertisement -

ಶನಿವಾರ ಮಧ್ಯಾಹ್ನದೊಳಗೆ ನಿಗದಿತ ಸಮಯಕ್ಕೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಪ್ಯಾಲೆಸ್ತೀನಿ ಹೋರಾಟಗಾರರ ಪ್ರತಿರೋಧ ಸಂಘಟನೆಯಾದ ಹಮಾಸ್‌ನೊಂದಿಗಿನ ಕದನ ವಿರಾಮ ಕೊನೆಗೊಳ್ಳುತ್ತದೆ ಮತ್ತು  ಗಾಜಾದಲ್ಲಿ ತಮ್ಮ ಮಿಲಿಟರಿ ದಾಳಿಯನ್ನು ಇಸ್ರೇಲ್ ಪಡೆಗಳು  ಪುನರಾರಂಭಿಸುತ್ತವೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ಹೇಳಿದ್ದಾರೆ. ಶನಿವಾರದೊಳಗೆ

“ಶನಿವಾರ ಮಧ್ಯಾಹ್ನದೊಳಗೆ ಹಮಾಸ್ ನಮ್ಮ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ, ಕದನ ವಿರಾಮ ಕೊನೆಗೊಳ್ಳುತ್ತದೆ. ಜೊತೆಗೆ ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಹಮಾಸ್ ಅನ್ನು ಅಂತಿಮವಾಗಿ ಸೋಲಿಸುವವರೆಗೆ ತೀವ್ರ ಹೋರಾಟಕ್ಕೆ ಇಳಿಯುತ್ತದೆ” ಎಂದು ಅವರು ದೇಶದ ಭದ್ರತಾ ಸಂಪುಟ ಸಭೆಯ ನಂತರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕದನ ವಿರಾಮವನ್ನು “ಇಸ್ರೇಲ್ ಉಲ್ಲಂಘನೆ” ಮಾಡಿದೆ ಎಂದು ಪ್ರತಿಪಾದಿಸಿ ಶನಿವಾರ ಯೋಜಿಸಲಾದ ಒತ್ತೆಯಾಳುಗಳ ಬಿಡುಗಡೆಯನ್ನು ಮುಂದಿನ ಸೂಚನೆ ಬರುವವರೆಗೆ ವಿಳಂಬಗೊಳಿಸುವುದಾಗಿ ಹಮಾಸ್ ಹೇಳಿದ ಒಂದು ದಿನದ ನಂತರ ಇಸ್ರೇಲ್ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. ಕದನ ವಿರಾಮವನ್ನು ಉಲ್ಲಂಘಿಸಿ ಗಾಜಾ ನಿವಾಸಿಗಳ ಮೇಲೆ ಇಸ್ರೇಲ್ ದಾಳಿ ಮಾಡಿದೆ ಎಂದು ಹಮಾಸ್ ಆರೋಪಿಸಿದೆ. ಶನಿವಾರದೊಳಗೆ

ಶನಿವಾರ ಮಧ್ಯಾಹ್ನದ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಯನ್ನು ಇಸ್ರೇಲ್ ಭದ್ರತಾ ಸಂಪುಟ ಸ್ವಾಗತಿಸಿದೆ ಎಂದು ನೆತನ್ಯಾಹು ಹೇಳಿದ್ದು, “ಮತ್ತು ಗಾಜಾದ ಭವಿಷ್ಯಕ್ಕಾಗಿ ಅಮೆರಿಕಾ ಅಧ್ಯಕ್ಷರ ಕ್ರಾಂತಿಕಾರಿ ದೃಷ್ಟಿಕೋನವನ್ನು ನಾವೆಲ್ಲರೂ ಸ್ವಾಗತಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಗಾಜಾ ಬಗ್ಗೆ ಟ್ರಂಪ್ ಹೇಳಿಕೆ

ಶನಿವಾರದೊಳಗೆ ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮವನ್ನು ರದ್ದುಗೊಳಿಸುವ ಪ್ರಸ್ತಾಪವನ್ನು ಮಂಡಿಸುವುದಾಗಿ ಟ್ರಂಪ್ ಸೋಮವಾರ ಹೇಳಿದ್ದರು.

“ನನ್ನ ಮಟ್ಟಿಗೆ ಹೇಳುವುದಾದರೆ, ಶನಿವಾರ [ಫೆಬ್ರವರಿ 15] 12 ಗಂಟೆಯೊಳಗೆ ಎಲ್ಲಾ ಒತ್ತೆಯಾಳುಗಳನ್ನು ಹಿಂತಿರುಗಿಸದಿದ್ದರೆ ಒಪ್ಪಂದವನ್ನು ರದ್ದು ಮಾಡಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ಒಪ್ಪಂದವನ್ನು ರದ್ದುಗೊಳಿಸಿ, ಎಲ್ಲಾ ಸ್ಪರ್ಧೆಗಳು ಮುಗಿದಿದ್ದು, ನರಕ ದರ್ಶನವಾಗಲಿ ಎಂದು ನಾನು ಹೇಳುತ್ತೇನೆ” ಎಂದು ಟ್ರಂಪ್ ಶ್ವೇತಭವನದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ಗಾಜಾದಲ್ಲಿ ವಾಸಿಸುವ ಪ್ಯಾಲೆಸ್ತೀನಿಯನ್ನರನ್ನು ಶಾಶ್ವತವಾಗಿ ಸ್ವೀಕರಿಸುವ ಅಮೆರಿಕದ ಬೇಡಿಕೆಯನ್ನು ಈಜಿಪ್ಟ್ ಮತ್ತು ಜೋರ್ಡಾನ್‌ ವಿರೋಧಿಸಿದರೆ, ಅವರಿಗೆ ನೀಡುವ ಸಹಾಯವನ್ನು ಕಡಿತಗೊಳಿಸಲಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ. ಜೋರ್ಡಾನ್ ಮತ್ತು ಈಜಿಪ್ಟ್‌ನ ನಾಯಕರು ಗಾಜಾದಿಂದ ಪ್ಯಾಲೆಸ್ತೀನಿಯನ್ನರನ್ನು ಸ್ವೀಕರಿಸುವಂತೆ ಟ್ರಂಪ್ ಒತ್ತಾಯಿಸಿದ್ದರು ಮತ್ತು ಗಾಜಾವನ್ನು ತಾವು ಸಂಪೂರ್ಣವಾಗಿ ಸ್ವಚ್ಛಗೊಳಿಸುತ್ತೇವೆ ಎಂದು ಹೇಳಿದ್ದರು.

ಅದಾಗ್ಯೂ, ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಈ ಪ್ರಸ್ತಾವನೆಯನ್ನು ಜೋರ್ಡಾನ್ ಮತ್ತು ಈಜಿಫ್ಟ್‌, ಪಶ್ಚಿಮ ದಂಡೆ ಪ್ರದೇಶವನ್ನು ನಿಯಂತ್ರಿಸುವ ಪ್ಯಾಲೆಸ್ತೀನಿ ಪ್ರಾಧಿಕಾರ ಮತ್ತು ಹಮಾಸ್ ತಿರಸ್ಕರಿಸಿವೆ.

ಮಂಗಳವಾರ ಟ್ರಂಪ್ ಅವರನ್ನು ಭೇಟಿಯಾದ ನಂತರ ಪ್ರತಿಕ್ರಿಯಿಸಿದ ಜೋರ್ಡಾನ್ ರಾಜ ಅಬ್ದುಲ್ಲಾ II ಬಿನ್ ಅಲ್-ಹುಸೇನ್, ಗಾಜಾ ಮತ್ತು ಪಶ್ಚಿಮ ದಂಡೆಯಿಂದ ಪ್ಯಾಲೆಸ್ತೀನಿಯನ್ನರ ಸ್ಥಳಾಂತರದ ವಿರುದ್ಧ ಜೋರ್ಡಾನ್ ನಿಲುವು ಮತ್ತು “ಏಕೀಕೃತ ಅರಬ್ ನಿಲುವು” ಒಂದೇ ಆಗಿದೆ ಎಂದು ಪುನರುಚ್ಚರಿಸಿದ್ದೇನೆ ಎಂದು ಹೇಳಿದ್ದಾರೆ. “ಪ್ಯಾಲೆಸ್ತೀನಿಯನ್ನರನ್ನು ಸ್ಥಳಾಂತರಿಸದೆ ಗಾಜಾವನ್ನು ಪುನರ್ನಿರ್ಮಿಸುವುದು ಮತ್ತು ಭೀಕರ ಮಾನವೀಯ ಪರಿಸ್ಥಿತಿಯನ್ನು ಪರಿಹರಿಸುವುದು ಎಲ್ಲರಿಗೂ ಆದ್ಯತೆಯಾಗಿರಬೇಕು” ಎಂದು ಅವರು ಹೇಳಿದ್ದಾರೆ.

ಗಾಜಾ ಕದನ ವಿರಾಮದ ಮೊದಲ ಆರು ವಾರಗಳ ಹಂತವು ಜನವರಿ 19 ರಂದು ಪ್ರಾರಂಭವಾಯಿತು. ಇದು ಇಸ್ರೇಲ್‌ನಲ್ಲಿರುವ ನೂರಾರು ಪ್ಯಾಲೆಸ್ತೀನಿ ಬಂಧಿತರಿಗೆ ಬದಲಾಗಿ ಹಮಾಸ್ ಬಳಿಯಿರುವ 33 ಒತ್ತೆಯಾಳುಗಳ ವಿನಿಮಯವನ್ನು ಒಳಗೊಂಡಿದೆ. ಹಮಾಸ್ ಇಲ್ಲಿಯವರೆಗೆ 16 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ್ದು, ಇಸ್ರೇಲ್ 566 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿದೆ.

ಹಮಾಸ್ ದಕ್ಷಿಣ ಇಸ್ರೇಲ್‌ಗೆ ಆಕ್ರಮಣ ಮಾಡಿ 1,200 ಜನರನ್ನು ಕೊಂದು 200 ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳನ್ನಾಗಿ ತೆಗೆದುಕೊಂಡು ಹೋಗಿತ್ತು. ಇದರ ನಂತರ ಅಕ್ಟೋಬರ್ 7, 2023 ರಂದು ಗಾಜಾ ವಿರುದ್ಧ ಇಸ್ರೇಲ್‌ ಮಿಲಿಟರಿ ದಾಳಿ ಪ್ರಾರಂಭ ಮಾಡಿತ್ತು. ಅಂದಿನಿಂದ ಗಾಜಾದಲ್ಲಿ 17,400 ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ 47,700 ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಕೊಂದಿದೆ. ಈ ಸಂಘರ್ಷದಲ್ಲಿ ಸುಮಾರು 400 ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ.

ಕೆಲವು ಒತ್ತೆಯಾಳುಗಳನ್ನು ನವೆಂಬರ್ 2023 ರಲ್ಲಿ ಸಂಕ್ಷಿಪ್ತ ಕದನ ವಿರಾಮ ಒಪ್ಪಂದದ ಭಾಗವಾಗಿ ಬಿಡುಗಡೆ ಮಾಡಲಾಯಿತು ಮತ್ತು ಕೆಲವರು ಯುದ್ಧದ ಪರಿಣಾಮವಾಗಿ ಕೊಲ್ಲಲ್ಪಟ್ಟರು.

ಪ್ರಸ್ತುತ ಕದನ ವಿರಾಮದ ಒಪ್ಪಂದವು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರು ಗಾಜಾದಲ್ಲಿನ ತಮ್ಮ ಪ್ರದೇಶಗಳಿಗೆ ಮರಳಲು ಅವಕಾಶ ನೀಡುತ್ತದೆ. ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ನಿರಾಶ್ರಿತರ ಸಂಸ್ಥೆಯ ಪ್ರಕಾರ, ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಸುಮಾರು 19 ಲಕ್ಷ ಮಿಲಿಯನ್ ಜನರು ಸ್ಥಳಾಂತರಗೊಂಡಿದ್ದಾರೆ. ಅಲ್ಲದೆ, ಇಸ್ರೇಲಿ ದಾಳಿಯಲ್ಲಿ ಗಾಜಾದಲ್ಲಿನ 92% ವಸತಿ ಘಟಕಗಳು ನಾಶವಾಗಿವೆ ಅಥವಾ ಹಾನಿಗೊಳಗಾಗಿವೆ ಎಂದು ವಿಶ್ವಸಂಸ್ಥೆ ಹೇಳಿದೆ.

ಇದನ್ನೂಓದಿ:  ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ

ಮತ್ತೊಂದು ಮಸೀದಿ ‘ಅಕ್ರಮ’ ನಿರ್ಮಾಣ ಎಂದ ಬಜರಂಗದಳ: ತನಿಖೆಗೆ ಯೋಗಿ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...