Homeಮುಖಪುಟಸತ್ಯ ಪಾಲ್ ಮಲಿಕ್, ಜಗದೀಪ್ ಧನಕರ್ ಕುರಿತು ಧ್ವನಿ ಎತ್ತಿದ ಬಿಜೆಪಿ ವಕ್ತಾರ ಜಾನು: ಪಕ್ಷದಿಂದ...

ಸತ್ಯ ಪಾಲ್ ಮಲಿಕ್, ಜಗದೀಪ್ ಧನಕರ್ ಕುರಿತು ಧ್ವನಿ ಎತ್ತಿದ ಬಿಜೆಪಿ ವಕ್ತಾರ ಜಾನು: ಪಕ್ಷದಿಂದ ಉಚ್ಚಾಟನೆ

- Advertisement -
- Advertisement -

ಬೆಂಗಳೂರು: ಬಿಜೆಪಿ ವಕ್ತಾರ ಕೃಷ್ಣ ಕುಮಾರ್ ಜಾನು ಅವರನ್ನು ಪಕ್ಷದ ವಿರುದ್ಧ ಬಹಿರಂಗವಾಗಿ ಟೀಕಿಸಿದ ಕಾರಣಕ್ಕೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ಜಾನು, ದಿವಂಗತ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಬಗ್ಗೆ ಸರ್ಕಾರ ತೋರಿದ “ಅನಾದರ” (ನಿರ್ಲಕ್ಷ್ಯ) ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಇಬ್ಬರು ಪ್ರಮುಖ ಜಾಟ್ ನಾಯಕರ ಬಗ್ಗೆ ಪಕ್ಷದ ನಡವಳಿಕೆ ಜಾಟ್ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅವರು ವಿಡಿಯೋದಲ್ಲಿ ಹೇಳಿದ್ದರು.

ವಿಡಿಯೋದಲ್ಲಿ, ಮಾಜಿ ರಾಜ್ಯಪಾಲರು ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿದ್ದ ಸತ್ಯ ಪಾಲ್ ಮಲಿಕ್ ಅವರ ಅಂತಿಮ ಸಂಸ್ಕಾರದಲ್ಲಿ ಸರ್ಕಾರ ತೋರಿದ “ತಿರಸ್ಕಾರ” (ಅವಜ್ಞೆ) ತಮಗೆ ತೀವ್ರ ನೋವುಂಟು ಮಾಡಿದೆ ಎಂದು ಜಾನು ಹೇಳಿದ್ದಾರೆ. ಇದೇ ವೇಳೆ, ಪಕ್ಷದಲ್ಲಿರುವ ಜಾಟ್ ಸಮುದಾಯದ ಸಂಸದರು, ಶಾಸಕರು ಮತ್ತು ಇತರ ಪದಾಧಿಕಾರಿಗಳನ್ನು ಪ್ರಶ್ನಿಸಿದ ಜಾನು, “ಮಲಿಕ್ ಅವರಿಗೆ ಏನಾಯಿತೋ ಅದು ತಮಗೂ ಆಗುವುದಿಲ್ಲ ಎಂದು ನೀವು ಹೇಗೆ ಭಾವಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. ಈ ರೀತಿಯ ಗೌರವಯುತವಲ್ಲದ ನಡವಳಿಕೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಾನು ಆ ವಿಡಿಯೋದಲ್ಲಿ ಒತ್ತಿ ಹೇಳಿದ್ದಾರೆ.

ಪಕ್ಷದ ವಕ್ತಾರರಾಗಿದ್ದ ಕೃಷ್ಣ ಕುಮಾರ್ ಜಾನು ಹಿರಿಯ ನಾಯಕರನ್ನು ಬಿಜೆಪಿ ನಿರ್ಲಕ್ಷಿಸುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶವಂತ ಸಿನ್ಹಾ, ಪ್ರವೀಣ್ ತೊಗಾಡಿಯಾ, ಸಂಜಯ್ ಜೋಶಿ ಮತ್ತು ವಸುಂಧರಾ ರಾಜೇ ಅವರಂತಹ ನಾಯಕರನ್ನು ಪಕ್ಷವು ಮೂಲೆಗುಂಪು ಮಾಡಿದೆ. ಇದೀಗ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈಗೊಂಬೆಯನ್ನಾಗಿ ಮಾಡಿದೆ ಎಂದು ಆರೋಪಿಸಿದ್ದಾರೆ. “ನೆಲಮಟ್ಟದಲ್ಲಿ ಜನಪ್ರಿಯರಾಗಿರುವ ಜನ ನಾಯಕರೊಂದಿಗೆ ಬಿಜೆಪಿ ವರ್ತಿಸುತ್ತಿರುವ ರೀತಿ ಬಹಳ ನೋವಿನ ಸಂಗತಿ. ಪಕ್ಷವು ತಪ್ಪು ಹಾದಿಯಲ್ಲಿ ಸಾಗುತ್ತಿದೆ,” ಎಂದು ಅವರು ಆ ವಿಡಿಯೋದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಜಾಟ್ ನಾಯಕರು ಸನಾತನ ಧರ್ಮದೊಳಗಿನ ವಿಸಂಗತಿಗಳ (ಅಸಂಗತತೆಗಳು) ಬಗ್ಗೆ ಮಾತನಾಡುವ ಸಮುದಾಯದಿಂದ ಬಂದವರು. ಹಿಂದಿನ ಕಾಲದಲ್ಲಿ ಅವರು ಗುರು ನಾನಕ್ ದೇವ್, ಜಂಭೋಜಿ ಮಹಾರಾಜ್ ಮತ್ತು ದಯಾನಂದ ಸರಸ್ವತಿ ಅವರೊಂದಿಗೆ ನಿಂತಿದ್ದರು. ಹಾಗಿದ್ದ ಮೇಲೆ, ಈಗ ಯಾಕೆ ಮಾತನಾಡಲು ಹಿಂಜರಿಯುತ್ತಿದ್ದಾರೆ ಎಂದು ಅವರು ಹೇಳಿದರು.ಎಂದು ಅವರು ಪ್ರಶ್ನಿಸಿದ್ದಾರೆ.

ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ಅಂತಿಮ ಸಂಸ್ಕಾರದ ಸಮಯದಲ್ಲಿ ಯಾವುದೇ ರಾಜ್ಯ ಗೌರವದ ಅಂತ್ಯಸಂಸ್ಕಾರವನ್ನು ನೀಡದಿರುವುದು “ಸರ್ಕಾರವು ಪೂರ್ವಾಗ್ರಹ ಪೀಡಿತವಾಗಿದೆ ಮತ್ತು ಭಯದಿಂದ ವರ್ತಿಸುತ್ತಿದೆ” ಎಂಬುದರ ಸಂಕೇತ ಎಂದು ಜಾನು ಹೇಳಿದ್ದಾರೆ. ಭಯದಿಂದ ತಮ್ಮ ತತ್ವಗಳನ್ನು ರಾಜಿ ಮಾಡಿಕೊಳ್ಳುವವನು ಜಾಟ್ ಆಗಲು ಸಾಧ್ಯವಿಲ್ಲ ಎಂದು ಜಾನು ತಮ್ಮ ಸಮುದಾಯದ ನಾಯಕರನ್ನು ಎಚ್ಚರಿಸಿದ್ದಾರೆ.

ಅಲ್ಲದೆ, ಜಗದೀಪ್ ಧನಕರ್ ಅವರ ಉಪರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸುವ ಸಂದರ್ಭದಲ್ಲಿ ಯಾವುದೇ ಬೀಳ್ಕೊಡುಗೆ ಭಾಷಣ ಅಥವಾ ಬೀಳ್ಕೊಡುಗೆ ಸಮಾರಂಭ ಇರಲಿಲ್ಲ ಎಂದು ಜಾನು ಪ್ರಶ್ನಿಸಿದ್ದಾರೆ. “ಅಹಂಕಾರಿ ಸರ್ಕಾರದೊಂದಿಗೆ ಘರ್ಷಣೆ ಮಾಡುವುದು ಜಾಟ್ ಸಂಸ್ಕೃತಿ,” ಎಂದು ಹೇಳುವ ಮೂಲಕ ಬಿಜೆಪಿಯಲ್ಲಿರುವ ಜಾಟ್ ನಾಯಕರು ತಪ್ಪಿನ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆದರೆ, ಪಕ್ಷವು ಕೃಷ್ಣ ಕುಮಾರ್ ಜಾನು ಅವರನ್ನು ಉಚ್ಚಾಟಿಸಲು ಅಧಿಕೃತವಾಗಿ ನೀಡಿದ ಕಾರಣವು ವಿಭಿನ್ನವಾಗಿದೆ. ಜೂನ್ ತಿಂಗಳಲ್ಲಿ, ಜುಂಜುನು ಜಿಲ್ಲಾಧ್ಯಕ್ಷರನ್ನಾಗಿ ಹರ್ಷಿಣಿ ಕುಲ್ಹರಿ ಅವರನ್ನು ನೇಮಕ ಮಾಡಿದ ಬಗ್ಗೆ ಜಾನು ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ, ಜೂನ್ 20 ರಂದು ಜಾನು ಅವರಿಗೆ ಶೋ-ಕಾಸ್ ನೋಟಿಸ್ ನೀಡಲಾಗಿತ್ತು. ಇದಕ್ಕೆ ಸಮರ್ಪಕ ವಿವರಣೆ ನೀಡದ ಕಾರಣ, ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಓಂಕಾರ್ ಸಿಂಗ್ ಲಖಾವತ್ ಅವರು, ಜಾನು ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಬಿಹಾರ: ಮತದಾರರ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೆ ಕಾರಣ ನೀಡುವುದು ಆಯೋಗಕ್ಕೆ ಕಡ್ಡಾಯವಲ್ಲ; ಸುಪ್ರೀಂ ಕೋರ್ಟ್‌ಗೆ ಇಸಿಐ ಅಫಿಡವಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...