Homeಮುಖಪುಟಸತ್ಯ ಪಾಲ್ ಮಲಿಕ್, ಜಗದೀಪ್ ಧನಕರ್ ಕುರಿತು ಧ್ವನಿ ಎತ್ತಿದ ಬಿಜೆಪಿ ವಕ್ತಾರ ಜಾನು: ಪಕ್ಷದಿಂದ...

ಸತ್ಯ ಪಾಲ್ ಮಲಿಕ್, ಜಗದೀಪ್ ಧನಕರ್ ಕುರಿತು ಧ್ವನಿ ಎತ್ತಿದ ಬಿಜೆಪಿ ವಕ್ತಾರ ಜಾನು: ಪಕ್ಷದಿಂದ ಉಚ್ಚಾಟನೆ

- Advertisement -
- Advertisement -

ಬೆಂಗಳೂರು: ಬಿಜೆಪಿ ವಕ್ತಾರ ಕೃಷ್ಣ ಕುಮಾರ್ ಜಾನು ಅವರನ್ನು ಪಕ್ಷದ ವಿರುದ್ಧ ಬಹಿರಂಗವಾಗಿ ಟೀಕಿಸಿದ ಕಾರಣಕ್ಕೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಇತ್ತೀಚೆಗೆ ವೈರಲ್ ಆದ ವಿಡಿಯೋದಲ್ಲಿ ಜಾನು, ದಿವಂಗತ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಬಗ್ಗೆ ಸರ್ಕಾರ ತೋರಿದ “ಅನಾದರ” (ನಿರ್ಲಕ್ಷ್ಯ) ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಇಬ್ಬರು ಪ್ರಮುಖ ಜಾಟ್ ನಾಯಕರ ಬಗ್ಗೆ ಪಕ್ಷದ ನಡವಳಿಕೆ ಜಾಟ್ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಅವರು ವಿಡಿಯೋದಲ್ಲಿ ಹೇಳಿದ್ದರು.

ವಿಡಿಯೋದಲ್ಲಿ, ಮಾಜಿ ರಾಜ್ಯಪಾಲರು ಹಾಗೂ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿದ್ದ ಸತ್ಯ ಪಾಲ್ ಮಲಿಕ್ ಅವರ ಅಂತಿಮ ಸಂಸ್ಕಾರದಲ್ಲಿ ಸರ್ಕಾರ ತೋರಿದ “ತಿರಸ್ಕಾರ” (ಅವಜ್ಞೆ) ತಮಗೆ ತೀವ್ರ ನೋವುಂಟು ಮಾಡಿದೆ ಎಂದು ಜಾನು ಹೇಳಿದ್ದಾರೆ. ಇದೇ ವೇಳೆ, ಪಕ್ಷದಲ್ಲಿರುವ ಜಾಟ್ ಸಮುದಾಯದ ಸಂಸದರು, ಶಾಸಕರು ಮತ್ತು ಇತರ ಪದಾಧಿಕಾರಿಗಳನ್ನು ಪ್ರಶ್ನಿಸಿದ ಜಾನು, “ಮಲಿಕ್ ಅವರಿಗೆ ಏನಾಯಿತೋ ಅದು ತಮಗೂ ಆಗುವುದಿಲ್ಲ ಎಂದು ನೀವು ಹೇಗೆ ಭಾವಿಸುತ್ತೀರಿ?” ಎಂದು ಪ್ರಶ್ನಿಸಿದ್ದಾರೆ. ಈ ರೀತಿಯ ಗೌರವಯುತವಲ್ಲದ ನಡವಳಿಕೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಾನು ಆ ವಿಡಿಯೋದಲ್ಲಿ ಒತ್ತಿ ಹೇಳಿದ್ದಾರೆ.

ಪಕ್ಷದ ವಕ್ತಾರರಾಗಿದ್ದ ಕೃಷ್ಣ ಕುಮಾರ್ ಜಾನು ಹಿರಿಯ ನಾಯಕರನ್ನು ಬಿಜೆಪಿ ನಿರ್ಲಕ್ಷಿಸುತ್ತಿರುವ ಬಗ್ಗೆಯೂ ಮಾತನಾಡಿದ್ದಾರೆ. ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಯಶವಂತ ಸಿನ್ಹಾ, ಪ್ರವೀಣ್ ತೊಗಾಡಿಯಾ, ಸಂಜಯ್ ಜೋಶಿ ಮತ್ತು ವಸುಂಧರಾ ರಾಜೇ ಅವರಂತಹ ನಾಯಕರನ್ನು ಪಕ್ಷವು ಮೂಲೆಗುಂಪು ಮಾಡಿದೆ. ಇದೀಗ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕೈಗೊಂಬೆಯನ್ನಾಗಿ ಮಾಡಿದೆ ಎಂದು ಆರೋಪಿಸಿದ್ದಾರೆ. “ನೆಲಮಟ್ಟದಲ್ಲಿ ಜನಪ್ರಿಯರಾಗಿರುವ ಜನ ನಾಯಕರೊಂದಿಗೆ ಬಿಜೆಪಿ ವರ್ತಿಸುತ್ತಿರುವ ರೀತಿ ಬಹಳ ನೋವಿನ ಸಂಗತಿ. ಪಕ್ಷವು ತಪ್ಪು ಹಾದಿಯಲ್ಲಿ ಸಾಗುತ್ತಿದೆ,” ಎಂದು ಅವರು ಆ ವಿಡಿಯೋದಲ್ಲಿ ವಿಷಾದ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಜಾಟ್ ನಾಯಕರು ಸನಾತನ ಧರ್ಮದೊಳಗಿನ ವಿಸಂಗತಿಗಳ (ಅಸಂಗತತೆಗಳು) ಬಗ್ಗೆ ಮಾತನಾಡುವ ಸಮುದಾಯದಿಂದ ಬಂದವರು. ಹಿಂದಿನ ಕಾಲದಲ್ಲಿ ಅವರು ಗುರು ನಾನಕ್ ದೇವ್, ಜಂಭೋಜಿ ಮಹಾರಾಜ್ ಮತ್ತು ದಯಾನಂದ ಸರಸ್ವತಿ ಅವರೊಂದಿಗೆ ನಿಂತಿದ್ದರು. ಹಾಗಿದ್ದ ಮೇಲೆ, ಈಗ ಯಾಕೆ ಮಾತನಾಡಲು ಹಿಂಜರಿಯುತ್ತಿದ್ದಾರೆ ಎಂದು ಅವರು ಹೇಳಿದರು.ಎಂದು ಅವರು ಪ್ರಶ್ನಿಸಿದ್ದಾರೆ.

ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರ ಅಂತಿಮ ಸಂಸ್ಕಾರದ ಸಮಯದಲ್ಲಿ ಯಾವುದೇ ರಾಜ್ಯ ಗೌರವದ ಅಂತ್ಯಸಂಸ್ಕಾರವನ್ನು ನೀಡದಿರುವುದು “ಸರ್ಕಾರವು ಪೂರ್ವಾಗ್ರಹ ಪೀಡಿತವಾಗಿದೆ ಮತ್ತು ಭಯದಿಂದ ವರ್ತಿಸುತ್ತಿದೆ” ಎಂಬುದರ ಸಂಕೇತ ಎಂದು ಜಾನು ಹೇಳಿದ್ದಾರೆ. ಭಯದಿಂದ ತಮ್ಮ ತತ್ವಗಳನ್ನು ರಾಜಿ ಮಾಡಿಕೊಳ್ಳುವವನು ಜಾಟ್ ಆಗಲು ಸಾಧ್ಯವಿಲ್ಲ ಎಂದು ಜಾನು ತಮ್ಮ ಸಮುದಾಯದ ನಾಯಕರನ್ನು ಎಚ್ಚರಿಸಿದ್ದಾರೆ.

ಅಲ್ಲದೆ, ಜಗದೀಪ್ ಧನಕರ್ ಅವರ ಉಪರಾಷ್ಟ್ರಪತಿ ಸ್ಥಾನದಿಂದ ನಿರ್ಗಮಿಸುವ ಸಂದರ್ಭದಲ್ಲಿ ಯಾವುದೇ ಬೀಳ್ಕೊಡುಗೆ ಭಾಷಣ ಅಥವಾ ಬೀಳ್ಕೊಡುಗೆ ಸಮಾರಂಭ ಇರಲಿಲ್ಲ ಎಂದು ಜಾನು ಪ್ರಶ್ನಿಸಿದ್ದಾರೆ. “ಅಹಂಕಾರಿ ಸರ್ಕಾರದೊಂದಿಗೆ ಘರ್ಷಣೆ ಮಾಡುವುದು ಜಾಟ್ ಸಂಸ್ಕೃತಿ,” ಎಂದು ಹೇಳುವ ಮೂಲಕ ಬಿಜೆಪಿಯಲ್ಲಿರುವ ಜಾಟ್ ನಾಯಕರು ತಪ್ಪಿನ ವಿರುದ್ಧ ಧ್ವನಿ ಎತ್ತಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆದರೆ, ಪಕ್ಷವು ಕೃಷ್ಣ ಕುಮಾರ್ ಜಾನು ಅವರನ್ನು ಉಚ್ಚಾಟಿಸಲು ಅಧಿಕೃತವಾಗಿ ನೀಡಿದ ಕಾರಣವು ವಿಭಿನ್ನವಾಗಿದೆ. ಜೂನ್ ತಿಂಗಳಲ್ಲಿ, ಜುಂಜುನು ಜಿಲ್ಲಾಧ್ಯಕ್ಷರನ್ನಾಗಿ ಹರ್ಷಿಣಿ ಕುಲ್ಹರಿ ಅವರನ್ನು ನೇಮಕ ಮಾಡಿದ ಬಗ್ಗೆ ಜಾನು ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ಸಂಬಂಧ, ಜೂನ್ 20 ರಂದು ಜಾನು ಅವರಿಗೆ ಶೋ-ಕಾಸ್ ನೋಟಿಸ್ ನೀಡಲಾಗಿತ್ತು. ಇದಕ್ಕೆ ಸಮರ್ಪಕ ವಿವರಣೆ ನೀಡದ ಕಾರಣ, ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷರಾದ ಓಂಕಾರ್ ಸಿಂಗ್ ಲಖಾವತ್ ಅವರು, ಜಾನು ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

ಬಿಹಾರ: ಮತದಾರರ ಪಟ್ಟಿಯಿಂದ ಹೊರಗಿಟ್ಟಿರುವುದಕ್ಕೆ ಕಾರಣ ನೀಡುವುದು ಆಯೋಗಕ್ಕೆ ಕಡ್ಡಾಯವಲ್ಲ; ಸುಪ್ರೀಂ ಕೋರ್ಟ್‌ಗೆ ಇಸಿಐ ಅಫಿಡವಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...