Homeಕರ್ನಾಟಕಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಮಾಧ್ಯಮಗಳು ಎಷ್ಟು ಮಲಿನ ಆಗಿದೆ ಎಂದು ನಾವೆಲ್ಲಾ ನೋಡುತ್ತಿದ್ದೇವೆ. ಇದಕ್ಕೆಲ್ಲಾ ಆಧಾರಗಳು ಬೇಕಾಗಿಲ್ಲ, ಎಲ್ಲವೂ ಕಣ್ಣೆದುರಲ್ಲಿ ನಡೆಯುತ್ತಿದೆ ಎಂದು ಸತ್ಯಾಗ್ರಹಿಯೊಬ್ಬರು ಹೇಳಿದ್ದಾರೆ

- Advertisement -
- Advertisement -

ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ, ಕನ್ನಡದ ಪ್ರಮುಖ ದೃಶ್ಯ ಮಾಧ್ಯಮಗಳಾದ ಪಬ್ಲಿಕ್ ಟಿವಿ, ಸುವರ್ಣ ಟವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ವನ್ನು ಸಮಾನ ಮನಸ್ಕರ ಗುಂಪೊಂದು ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಬೆಂಗಳೂರಿನಲ್ಲಿ ನಡೆಸಲಿದೆ.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಲಿದೆ. ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದಾರೆ. ಸತ್ಯಾಗ್ರಹದಲ್ಲಿ ಹಲವು ಹಿರಿಯರು, ಸಮಾನ ಮನಸ್ಕರು ಸೇರಲಿದ್ದಾರೆ ಎಂದು ಸತ್ಯಾಗ್ರಹದ ಸಂಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ನಾನುಗೌರಿ.ಕಾಂ ಜೊತೆಗೆ ಮಾನಾಡಿದ ಸಾಮಾಜಿಕ ಕಾರ್ಯಕರ್ತರಾದ ಎಂ. ಯುವರಾಜ್‌‌, “ಸತ್ಯಾಗ್ರಹದಲ್ಲಿ ಮಾಧ್ಯಮಗಳು ಯಾವ ಸುದ್ದಿಯನ್ನು ವಿಜ್ರಂಭಿಸಬೇಕು, ಯಾವ ಸುದ್ದಿಯನ್ನು ನಿರ್ಲಕ್ಷಿಸಬೇಕು ಎಂದು ಅವರಿಗೆ ನೆನಪಿಸಲಿದ್ದೇವೆ. ಮಾಧ್ಯಮಗಳು ಸುದ್ದಿಯನ್ನು ಪ್ರಸಾರ ಮಾಡಬೇಕೆ ಹೊರತು, ಸುದ್ದಿಗಳನ್ನು ಸೃಷ್ಟಿಸಬಾರದು ಎಂಬ ರೀತಿಯ ಕೆಲವು ಮಾಹಿತಿಗಳನ್ನು ಮಾಧ್ಯಮಗಳಿಗೆ ಮನವಿಯಲ್ಲಿ ಹೇಳದ್ದೇವೆ” ಎಂದು ಹೇಳಿದ್ದಾರೆ.

ಮಾಧ್ಯಮಗಳು ಯಾವ ದಾರಿಯಲ್ಲಿ ಸಾಗುತ್ತಿವೆ ಮತ್ತು ಈ ರೀತಿಯ ದಾರಿ ಸರಿಯೇ ಎಂಬ ಪ್ರಶ್ನೆಗಳನ್ನು ಬಹಳ ಪ್ರೀತಿಯಿಂದ ಮಾಧ್ಯಮಗಳಿಗೆ ಕೇಳುತ್ತೇವೆ. ಸತ್ಯಾಗ್ರಹದ ಸಮಯದಲ್ಲಿ ಮಾಧ್ಯಮ ಲೋಕದ ಕಡೆಯಿಂದ ನಮ್ಮ ನಿರೀಕ್ಷೆಯ ಭಿತ್ತಿಚಿತ್ರಗಳ ಅನಾವರಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಸತ್ಯಾಗ್ರಹ ನಡೆಸುವ ಬಗ್ಗೆ ಹತ್ತು ದಿನಗಳ ಹಿಂದೆಯೆ ಮಾಧ್ಯಮಗಳಿಗೆ ಮತ್ತು ಆಯಾ ಮಾಧ್ಯಮಗಳ ಕಚೇರಿ ಇರುವ ವ್ಯಾಪ್ತಿಯ ಪೊಲೀಸ್‌ ಠಾಣೆಗೂ ಮಾಹಿತಿ ನೀಡಿದ್ದೇವೆ ಎಂದು ಯುವರಾಜ್ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಇಂದಿನ ಮಾಧ್ಯಮಗಳು ಎಷ್ಟು ಮಲಿನ ಆಗಿವೆ ಎಂದು ನಾವೆಲ್ಲಾ ನೋಡುತ್ತಿದ್ದೇವೆ. ಇದಕ್ಕೆಲ್ಲಾ ಆಧಾರಗಳು ಬೇಕಾಗಿಲ್ಲ, ಎಲ್ಲವೂ ಕಣ್ಣೆದುರಲ್ಲಿ ನಡೆಯುತ್ತಿದೆ. ಹೀಗಾಗಿ ಮಾಧ್ಯಮಗಳೊಂದಿಗೆ, ನೀವೂ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಅವರಿಗೆ ಸಂವಿಧಾನದ ಪುಸ್ತಕ ಹಾಗೂ ಗುಲಾಬಿ ಕೊಟ್ಟು ಅವರಿಗೆ ಮನವಿ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಾಜದಲ್ಲಿ ನಾವು ಇರುವುದರಿಂದ, ಸಮಾಜದ ಆಗುಹೋಗುಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದೇವೆ. ಇಡೀ ಸತ್ಯಾಗ್ರಹ ಗಾಂಧಿ ಮಾರ್ಗದಲ್ಲಿ, ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ. ಸತ್ಯಾಗ್ರಹದಲ್ಲಿ ಯಾವುದೆ ರೀತಿಯಾದ ಪ್ರತಿಭಟನೆ, ಆಕ್ರೊಶ ಇರುವುದಿಲ್ಲ. ಒಂದು ವೇಳೆ ಮಾಧ್ಯಮಗಳು ನಮ್ಮೊಂದಿಗೆ ಸಂವಾದ ಮಾಡಲು ಬಂದರೆ ನಾವು ಅವರೊಂದಿಗೆ ಸಂವಾದ ಮಾಡುತ್ತೇವೆ. ಆದರೆ ಯಾವುದೇ ಘರ್ಷಣೆ ನಡೆಯುವ ರೀತಿಯ ಯಾವುದೇ ಘೋಷಣೆಗಳು ಇರುವುದಿಲ್ಲ ಎಂದು ಯುವರಾಜ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮತ್ತು ಇತರ ವಿಚಾರಕ್ಕೆ ಎಂ. ಯುವರಾಜ್ ಅವರನ್ನು ಸಂಪರ್ಕಿಸಬಹುದು +918050802019

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಜನರಿಗೆ ಸತ್ಯವನ್ನು ತಿಳಿಸಿಕೊಡುವ ಮಾಧ್ಯಮಕ್ಕೆ ನನ್ನ ಕಿರು ಕಾಣಿಕೆ

  2. ಕಮ್ಯೂನಿಸ್ಟ್ ಮಾಧ್ಯಮಗಳಷ್ಟು ಸುಳ್ಳುಗಳನ್ನು ಹೇಳೋ ಮಾಧ್ಯಮಗಳು ಯಾವ ದೇಶದಲ್ಲಿ ಸಹ ಇಲ್ಲವೇ ಇಲ್ಲಾ

  3. You people are totally frustrated and mentally imbalanced and sold out don’t have shame to protest something whenever ur do cald peaceful community does and violated the land and taken law on there hand.

    Do you think u people are doing right, no one believes and faith on you and ur lied principles whole India knows very well do be get fool your self

  4. Dayavittu suddenly madyamagalu, janarige sneha, samdagala bele, naitikate, Satya Paramarsge. Vivechane, raita Mitra. Vidyarthi Mitra, sadakara yashogate, mustafa vicharagalannu tilisi. News Andre worst anno tara agide.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...