Homeಕರ್ನಾಟಕಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಮಾಧ್ಯಮಗಳು ಎಷ್ಟು ಮಲಿನ ಆಗಿದೆ ಎಂದು ನಾವೆಲ್ಲಾ ನೋಡುತ್ತಿದ್ದೇವೆ. ಇದಕ್ಕೆಲ್ಲಾ ಆಧಾರಗಳು ಬೇಕಾಗಿಲ್ಲ, ಎಲ್ಲವೂ ಕಣ್ಣೆದುರಲ್ಲಿ ನಡೆಯುತ್ತಿದೆ ಎಂದು ಸತ್ಯಾಗ್ರಹಿಯೊಬ್ಬರು ಹೇಳಿದ್ದಾರೆ

- Advertisement -
- Advertisement -

ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ, ಕನ್ನಡದ ಪ್ರಮುಖ ದೃಶ್ಯ ಮಾಧ್ಯಮಗಳಾದ ಪಬ್ಲಿಕ್ ಟಿವಿ, ಸುವರ್ಣ ಟವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ವನ್ನು ಸಮಾನ ಮನಸ್ಕರ ಗುಂಪೊಂದು ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಬೆಂಗಳೂರಿನಲ್ಲಿ ನಡೆಸಲಿದೆ.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಲಿದೆ. ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದಾರೆ. ಸತ್ಯಾಗ್ರಹದಲ್ಲಿ ಹಲವು ಹಿರಿಯರು, ಸಮಾನ ಮನಸ್ಕರು ಸೇರಲಿದ್ದಾರೆ ಎಂದು ಸತ್ಯಾಗ್ರಹದ ಸಂಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ನಾನುಗೌರಿ.ಕಾಂ ಜೊತೆಗೆ ಮಾನಾಡಿದ ಸಾಮಾಜಿಕ ಕಾರ್ಯಕರ್ತರಾದ ಎಂ. ಯುವರಾಜ್‌‌, “ಸತ್ಯಾಗ್ರಹದಲ್ಲಿ ಮಾಧ್ಯಮಗಳು ಯಾವ ಸುದ್ದಿಯನ್ನು ವಿಜ್ರಂಭಿಸಬೇಕು, ಯಾವ ಸುದ್ದಿಯನ್ನು ನಿರ್ಲಕ್ಷಿಸಬೇಕು ಎಂದು ಅವರಿಗೆ ನೆನಪಿಸಲಿದ್ದೇವೆ. ಮಾಧ್ಯಮಗಳು ಸುದ್ದಿಯನ್ನು ಪ್ರಸಾರ ಮಾಡಬೇಕೆ ಹೊರತು, ಸುದ್ದಿಗಳನ್ನು ಸೃಷ್ಟಿಸಬಾರದು ಎಂಬ ರೀತಿಯ ಕೆಲವು ಮಾಹಿತಿಗಳನ್ನು ಮಾಧ್ಯಮಗಳಿಗೆ ಮನವಿಯಲ್ಲಿ ಹೇಳದ್ದೇವೆ” ಎಂದು ಹೇಳಿದ್ದಾರೆ.

ಮಾಧ್ಯಮಗಳು ಯಾವ ದಾರಿಯಲ್ಲಿ ಸಾಗುತ್ತಿವೆ ಮತ್ತು ಈ ರೀತಿಯ ದಾರಿ ಸರಿಯೇ ಎಂಬ ಪ್ರಶ್ನೆಗಳನ್ನು ಬಹಳ ಪ್ರೀತಿಯಿಂದ ಮಾಧ್ಯಮಗಳಿಗೆ ಕೇಳುತ್ತೇವೆ. ಸತ್ಯಾಗ್ರಹದ ಸಮಯದಲ್ಲಿ ಮಾಧ್ಯಮ ಲೋಕದ ಕಡೆಯಿಂದ ನಮ್ಮ ನಿರೀಕ್ಷೆಯ ಭಿತ್ತಿಚಿತ್ರಗಳ ಅನಾವರಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಸತ್ಯಾಗ್ರಹ ನಡೆಸುವ ಬಗ್ಗೆ ಹತ್ತು ದಿನಗಳ ಹಿಂದೆಯೆ ಮಾಧ್ಯಮಗಳಿಗೆ ಮತ್ತು ಆಯಾ ಮಾಧ್ಯಮಗಳ ಕಚೇರಿ ಇರುವ ವ್ಯಾಪ್ತಿಯ ಪೊಲೀಸ್‌ ಠಾಣೆಗೂ ಮಾಹಿತಿ ನೀಡಿದ್ದೇವೆ ಎಂದು ಯುವರಾಜ್ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಇಂದಿನ ಮಾಧ್ಯಮಗಳು ಎಷ್ಟು ಮಲಿನ ಆಗಿವೆ ಎಂದು ನಾವೆಲ್ಲಾ ನೋಡುತ್ತಿದ್ದೇವೆ. ಇದಕ್ಕೆಲ್ಲಾ ಆಧಾರಗಳು ಬೇಕಾಗಿಲ್ಲ, ಎಲ್ಲವೂ ಕಣ್ಣೆದುರಲ್ಲಿ ನಡೆಯುತ್ತಿದೆ. ಹೀಗಾಗಿ ಮಾಧ್ಯಮಗಳೊಂದಿಗೆ, ನೀವೂ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಅವರಿಗೆ ಸಂವಿಧಾನದ ಪುಸ್ತಕ ಹಾಗೂ ಗುಲಾಬಿ ಕೊಟ್ಟು ಅವರಿಗೆ ಮನವಿ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಾಜದಲ್ಲಿ ನಾವು ಇರುವುದರಿಂದ, ಸಮಾಜದ ಆಗುಹೋಗುಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದೇವೆ. ಇಡೀ ಸತ್ಯಾಗ್ರಹ ಗಾಂಧಿ ಮಾರ್ಗದಲ್ಲಿ, ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ. ಸತ್ಯಾಗ್ರಹದಲ್ಲಿ ಯಾವುದೆ ರೀತಿಯಾದ ಪ್ರತಿಭಟನೆ, ಆಕ್ರೊಶ ಇರುವುದಿಲ್ಲ. ಒಂದು ವೇಳೆ ಮಾಧ್ಯಮಗಳು ನಮ್ಮೊಂದಿಗೆ ಸಂವಾದ ಮಾಡಲು ಬಂದರೆ ನಾವು ಅವರೊಂದಿಗೆ ಸಂವಾದ ಮಾಡುತ್ತೇವೆ. ಆದರೆ ಯಾವುದೇ ಘರ್ಷಣೆ ನಡೆಯುವ ರೀತಿಯ ಯಾವುದೇ ಘೋಷಣೆಗಳು ಇರುವುದಿಲ್ಲ ಎಂದು ಯುವರಾಜ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮತ್ತು ಇತರ ವಿಚಾರಕ್ಕೆ ಎಂ. ಯುವರಾಜ್ ಅವರನ್ನು ಸಂಪರ್ಕಿಸಬಹುದು +918050802019

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಜನರಿಗೆ ಸತ್ಯವನ್ನು ತಿಳಿಸಿಕೊಡುವ ಮಾಧ್ಯಮಕ್ಕೆ ನನ್ನ ಕಿರು ಕಾಣಿಕೆ

  2. ಕಮ್ಯೂನಿಸ್ಟ್ ಮಾಧ್ಯಮಗಳಷ್ಟು ಸುಳ್ಳುಗಳನ್ನು ಹೇಳೋ ಮಾಧ್ಯಮಗಳು ಯಾವ ದೇಶದಲ್ಲಿ ಸಹ ಇಲ್ಲವೇ ಇಲ್ಲಾ

  3. You people are totally frustrated and mentally imbalanced and sold out don’t have shame to protest something whenever ur do cald peaceful community does and violated the land and taken law on there hand.

    Do you think u people are doing right, no one believes and faith on you and ur lied principles whole India knows very well do be get fool your self

  4. Dayavittu suddenly madyamagalu, janarige sneha, samdagala bele, naitikate, Satya Paramarsge. Vivechane, raita Mitra. Vidyarthi Mitra, sadakara yashogate, mustafa vicharagalannu tilisi. News Andre worst anno tara agide.

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...