Homeಕರ್ನಾಟಕಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಪಬ್ಲಿಕ್‌, ಸುವರ್ಣ, ಟಿವಿ9 ಮತ್ತು ಪಬ್ಲಿಕ್ ಟಿವಿ ಕಚೇರಿ ಮುಂದೆ ಬುಧವಾರ ‘ಆತ್ಮಾವಲೋಕನ ಸತ್ಯಾಗ್ರಹ’

ಮಾಧ್ಯಮಗಳು ಎಷ್ಟು ಮಲಿನ ಆಗಿದೆ ಎಂದು ನಾವೆಲ್ಲಾ ನೋಡುತ್ತಿದ್ದೇವೆ. ಇದಕ್ಕೆಲ್ಲಾ ಆಧಾರಗಳು ಬೇಕಾಗಿಲ್ಲ, ಎಲ್ಲವೂ ಕಣ್ಣೆದುರಲ್ಲಿ ನಡೆಯುತ್ತಿದೆ ಎಂದು ಸತ್ಯಾಗ್ರಹಿಯೊಬ್ಬರು ಹೇಳಿದ್ದಾರೆ

- Advertisement -
- Advertisement -

ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ, ಕನ್ನಡದ ಪ್ರಮುಖ ದೃಶ್ಯ ಮಾಧ್ಯಮಗಳಾದ ಪಬ್ಲಿಕ್ ಟಿವಿ, ಸುವರ್ಣ ಟವಿ, ಟಿವಿ9 ಮತ್ತು ಬಿಟಿವಿ ಕಚೇರಿಗಳ ಮುಂದೆ ‘ಆತ್ಮಾವಲೋಕನ ಸತ್ಯಾಗ್ರಹ’ವನ್ನು ಸಮಾನ ಮನಸ್ಕರ ಗುಂಪೊಂದು ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಬೆಂಗಳೂರಿನಲ್ಲಿ ನಡೆಸಲಿದೆ.

ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್‌ ಟಿವಿ ಕಚೇರಿಯಿಂದ ಪ್ರಾರಂಭವಾಗಲಿದೆ. ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾವು ಯಾವ ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಬಗ್ಗೆ ಒಂದು ಆತ್ಮಾವಲೋಕನ ಮಾಡಿಕೊಳ್ಳುವಂತೆ ಸತ್ಯಾಗ್ರಹಿಗಳು ಕನ್ನಡದ ಮಾಧ್ಯಮಗಳಿಗೆ ವಿನಂತಿಸಲಿದ್ದಾರೆ. ಸತ್ಯಾಗ್ರಹದಲ್ಲಿ ಹಲವು ಹಿರಿಯರು, ಸಮಾನ ಮನಸ್ಕರು ಸೇರಲಿದ್ದಾರೆ ಎಂದು ಸತ್ಯಾಗ್ರಹದ ಸಂಚಾಲಕರು ಹೇಳಿದ್ದಾರೆ.

ಇದನ್ನೂ ಓದಿ: ‘ಬಾಯಿಗೆ ಬಂದಿದ್ದು ಬರೀತೀರಾ?’: ಕೋಮುದ್ವೇಷದ ಸುದ್ದಿಗಾಗಿ ‘ಪಬ್ಲಿಕ್ ಟಿವಿ’ ಪತ್ರಕರ್ತನ ವಿರುದ್ದ ಡಿಸಿಪಿ ಕಿಡಿ

ನಾನುಗೌರಿ.ಕಾಂ ಜೊತೆಗೆ ಮಾನಾಡಿದ ಸಾಮಾಜಿಕ ಕಾರ್ಯಕರ್ತರಾದ ಎಂ. ಯುವರಾಜ್‌‌, “ಸತ್ಯಾಗ್ರಹದಲ್ಲಿ ಮಾಧ್ಯಮಗಳು ಯಾವ ಸುದ್ದಿಯನ್ನು ವಿಜ್ರಂಭಿಸಬೇಕು, ಯಾವ ಸುದ್ದಿಯನ್ನು ನಿರ್ಲಕ್ಷಿಸಬೇಕು ಎಂದು ಅವರಿಗೆ ನೆನಪಿಸಲಿದ್ದೇವೆ. ಮಾಧ್ಯಮಗಳು ಸುದ್ದಿಯನ್ನು ಪ್ರಸಾರ ಮಾಡಬೇಕೆ ಹೊರತು, ಸುದ್ದಿಗಳನ್ನು ಸೃಷ್ಟಿಸಬಾರದು ಎಂಬ ರೀತಿಯ ಕೆಲವು ಮಾಹಿತಿಗಳನ್ನು ಮಾಧ್ಯಮಗಳಿಗೆ ಮನವಿಯಲ್ಲಿ ಹೇಳದ್ದೇವೆ” ಎಂದು ಹೇಳಿದ್ದಾರೆ.

ಮಾಧ್ಯಮಗಳು ಯಾವ ದಾರಿಯಲ್ಲಿ ಸಾಗುತ್ತಿವೆ ಮತ್ತು ಈ ರೀತಿಯ ದಾರಿ ಸರಿಯೇ ಎಂಬ ಪ್ರಶ್ನೆಗಳನ್ನು ಬಹಳ ಪ್ರೀತಿಯಿಂದ ಮಾಧ್ಯಮಗಳಿಗೆ ಕೇಳುತ್ತೇವೆ. ಸತ್ಯಾಗ್ರಹದ ಸಮಯದಲ್ಲಿ ಮಾಧ್ಯಮ ಲೋಕದ ಕಡೆಯಿಂದ ನಮ್ಮ ನಿರೀಕ್ಷೆಯ ಭಿತ್ತಿಚಿತ್ರಗಳ ಅನಾವರಣ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಸತ್ಯಾಗ್ರಹ ನಡೆಸುವ ಬಗ್ಗೆ ಹತ್ತು ದಿನಗಳ ಹಿಂದೆಯೆ ಮಾಧ್ಯಮಗಳಿಗೆ ಮತ್ತು ಆಯಾ ಮಾಧ್ಯಮಗಳ ಕಚೇರಿ ಇರುವ ವ್ಯಾಪ್ತಿಯ ಪೊಲೀಸ್‌ ಠಾಣೆಗೂ ಮಾಹಿತಿ ನೀಡಿದ್ದೇವೆ ಎಂದು ಯುವರಾಜ್ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಇಂದಿನ ಮಾಧ್ಯಮಗಳು ಎಷ್ಟು ಮಲಿನ ಆಗಿವೆ ಎಂದು ನಾವೆಲ್ಲಾ ನೋಡುತ್ತಿದ್ದೇವೆ. ಇದಕ್ಕೆಲ್ಲಾ ಆಧಾರಗಳು ಬೇಕಾಗಿಲ್ಲ, ಎಲ್ಲವೂ ಕಣ್ಣೆದುರಲ್ಲಿ ನಡೆಯುತ್ತಿದೆ. ಹೀಗಾಗಿ ಮಾಧ್ಯಮಗಳೊಂದಿಗೆ, ನೀವೂ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಅವರಿಗೆ ಸಂವಿಧಾನದ ಪುಸ್ತಕ ಹಾಗೂ ಗುಲಾಬಿ ಕೊಟ್ಟು ಅವರಿಗೆ ಮನವಿ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಮಾಜದಲ್ಲಿ ನಾವು ಇರುವುದರಿಂದ, ಸಮಾಜದ ಆಗುಹೋಗುಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದೇವೆ. ಇಡೀ ಸತ್ಯಾಗ್ರಹ ಗಾಂಧಿ ಮಾರ್ಗದಲ್ಲಿ, ಅತ್ಯಂತ ಶಾಂತಿಯುತವಾಗಿ ನಡೆಯುತ್ತದೆ. ಸತ್ಯಾಗ್ರಹದಲ್ಲಿ ಯಾವುದೆ ರೀತಿಯಾದ ಪ್ರತಿಭಟನೆ, ಆಕ್ರೊಶ ಇರುವುದಿಲ್ಲ. ಒಂದು ವೇಳೆ ಮಾಧ್ಯಮಗಳು ನಮ್ಮೊಂದಿಗೆ ಸಂವಾದ ಮಾಡಲು ಬಂದರೆ ನಾವು ಅವರೊಂದಿಗೆ ಸಂವಾದ ಮಾಡುತ್ತೇವೆ. ಆದರೆ ಯಾವುದೇ ಘರ್ಷಣೆ ನಡೆಯುವ ರೀತಿಯ ಯಾವುದೇ ಘೋಷಣೆಗಳು ಇರುವುದಿಲ್ಲ ಎಂದು ಯುವರಾಜ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಮತ್ತು ಇತರ ವಿಚಾರಕ್ಕೆ ಎಂ. ಯುವರಾಜ್ ಅವರನ್ನು ಸಂಪರ್ಕಿಸಬಹುದು +918050802019

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಜನರಿಗೆ ಸತ್ಯವನ್ನು ತಿಳಿಸಿಕೊಡುವ ಮಾಧ್ಯಮಕ್ಕೆ ನನ್ನ ಕಿರು ಕಾಣಿಕೆ

  2. ಕಮ್ಯೂನಿಸ್ಟ್ ಮಾಧ್ಯಮಗಳಷ್ಟು ಸುಳ್ಳುಗಳನ್ನು ಹೇಳೋ ಮಾಧ್ಯಮಗಳು ಯಾವ ದೇಶದಲ್ಲಿ ಸಹ ಇಲ್ಲವೇ ಇಲ್ಲಾ

  3. You people are totally frustrated and mentally imbalanced and sold out don’t have shame to protest something whenever ur do cald peaceful community does and violated the land and taken law on there hand.

    Do you think u people are doing right, no one believes and faith on you and ur lied principles whole India knows very well do be get fool your self

  4. Dayavittu suddenly madyamagalu, janarige sneha, samdagala bele, naitikate, Satya Paramarsge. Vivechane, raita Mitra. Vidyarthi Mitra, sadakara yashogate, mustafa vicharagalannu tilisi. News Andre worst anno tara agide.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...