Homeಮುಖಪುಟಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

- Advertisement -
- Advertisement -

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು” ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತಾವು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆ ವೇಳೆ, ರಾಹುಲ್ ಗಾಂಧಿ ಪರ ಹಿರಿಯ ವಕೀಲ ಮಿಲಿಂದ್ ಪವಾರ್ ನಡೆಸಿದ ಜಿಜ್ಞಾಸೆಯ ಕ್ರಾಸ್-ಪರೀಕ್ಷೆಯಲ್ಲಿ ಸತ್ಯಕಿ ಸಾವರ್ಕರ್ ಈ ಸತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ‘ಲೈವ್ ಲಾ’ (LiveLaw) ವರದಿ ಮಾಡಿದೆ.

‘ದೇವತೆ ಎನ್ನುವುದು ದೈವತ್ವಕ್ಕೆ ಮಾಡುವ ಅವಮಾನ’

ವಿಚಾರಣೆ ವೇಳೆ ವಿ.ಡಿ. ಸಾವರ್ಕರ್ ಅವರ ವೈಚಾರಿಕ ಪ್ರಬಂಧಗಳ ಕುರಿತು ನ್ಯಾಯಾಲಯದಲ್ಲಿ ಚರ್ಚೆ ನಡೆಯಿತು. ಸಾವರ್ಕರ್ ಅವರು ಬರೆದ ʼಸಾವರ್ಕರಾಂಚೆ ವಿಶ್ವಜ್ಞಾನ ವಿನಬಂಧ’ (ಸಾವರ್ಕರ್ ಅವರ ವಿಜ್ಞಾನ ಆಧಾರಿತ ಪ್ರಬಂಧಗಳು) ಪುಸ್ತಕದಲ್ಲಿ ಧಾರ್ಮಿಕ ಮೂಢನಂಬಿಕೆಗಳು, ಗೋಪೂಜೆ ಹಾಗೂ ದೇವರ ಅಸ್ತಿತ್ವದ ಕುರಿತು ತೀವ್ರ ವಿಮರ್ಶಾತ್ಮಕ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂಬುದನ್ನು ಸತ್ಯಕಿ ಸಾವರ್ಕರ್ ಈ ಮುಂಚೆಯೇ ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಇದನ್ನೇ ಆಧರಿಸಿ ರಾಹುಲ್ ಗಾಂಧಿ ಪರ ವಕೀಲರು ಪ್ರಶ್ನಿಸಿದಾಗ ಸತ್ಯಕಿ ಸಾವರ್ಕರ್, “ಹಸು ಕೇವಲ ಒಂದು ಪ್ರಾಣಿ. ಅದನ್ನು ದೇವರು ಅಥವಾ ದೇವತೆ ಎಂದು ಭಾವಿಸುವುದು ಮಾನವೀಯತೆಗೆ ಮಾತ್ರವಲ್ಲ, ಸಾಕ್ಷಾತ್ ದೈವತ್ವದ ಪರಿಕಲ್ಪನೆಗೂ ಮಾಡುವ ಅವಮಾನ ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ” ಎಂದು ನ್ಯಾಯಪೀಠದ ಮುಂದೆ ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡಿದ ಅವರು, “ಮಾನವನಿಗೆ ನಾಯಿ, ಕುದುರೆ ಮತ್ತು ಕತ್ತೆ ಎಷ್ಟು ಉಪಯುಕ್ತ ಪ್ರಾಣಿಗಳೋ, ಹಸುವೂ ಅಷ್ಟೇ. ನಾಯಿ, ಕುದುರೆ, ಕತ್ತೆಗಳನ್ನು ಹೇಗೆ ಉಪಯುಕ್ತತೆಗಾಗಿ ರಕ್ಷಿಸಲಾಗುತ್ತದೆಯೋ, ಹಾಗೆಯೇ ಹಸುವನ್ನೂ ರಕ್ಷಿಸಬೇಕು. ಆದರೆ ಅದನ್ನು ಪೂಜಿಸುವುದು ಮೂಢನಂಬಿಕೆ ಎಂಬುದು ಸಾವರ್ಕರ್ ಅವರ ನಿಲುವಾಗಿತ್ತು” ಎಂದು ಕೋರ್ಟ್‌ಗೆ ತಿಳಿಸಿದರು.

ಸಾವರ್ಕರ್ ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ್ದ ಇತಿಹಾಸದ ಪ್ರಸಂಗವೊಂದನ್ನು ಸತ್ಯಕಿ ಸಾವರ್ಕರ್ ಕೋರ್ಟ್‌ನಲ್ಲಿ ಉಲ್ಲೇಖಿಸಿದರು. “ಮೊಘಲ್ ದಾಳಿಕೋರರು ಹಿಂದೂ ಸೇನೆಗಳ ವಿರುದ್ಧ ಯುದ್ಧ ಮಾಡುವಾಗ ಹಸುಗಳನ್ನು ಮಾನವ ಗುರಾಣಿಯಾಗಿ (Shield) ಬಳಸಿಕೊಳ್ಳುತ್ತಿದ್ದರು. ಹಿಂದೂ ಸೈನಿಕರು ‘ಗೋಹತ್ಯೆ’ ಮಹಾಪಾಪ ಎಂಬ ಧಾರ್ಮಿಕ ನಂಬಿಕೆಯಿಂದಾಗಿ ಯುದ್ಧಭೂಮಿಯಿಂದ ಹಿಂದೆ ಸರಿಯುತ್ತಿದ್ದರು. ಈ ಧಾರ್ಮಿಕ ಕುರುಡುತನವೇ ಹಿಂದುಗಳ ಸೋಲಿಗೆ ಕಾರಣವಾಯಿತು ಎಂದು ಸಾವರ್ಕರ್ ವಿಶ್ಲೇಷಿಸಿದ್ದರು” ಎಂದು ಅವರು ವಿವರಿಸಿದರು.

ಪ್ರಕರಣದ ಹಿನ್ನೆಲೆ ಏನು?

2023ರ ಮಾರ್ಚ್‌ನಲ್ಲಿ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, “ಸಾವರ್ಕರ್ ಮತ್ತು ಅವರ ಸ್ನೇಹಿತರು ಒಮ್ಮೆ ಮುಸ್ಲಿಂ ವ್ಯಕ್ತಿಯೊಬ್ಬನನ್ನು ತೀವ್ರವಾಗಿ ಥಳಿಸಿ ಆನಂದಿಸಿದ್ದರು ಎಂದು ಅವರ ಪುಸ್ತಕದಲ್ಲೇ ಬರೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಯು ಸಂಪೂರ್ಣ ಸುಳ್ಳು ಮತ್ತು ಸಾವರ್ಕರ್ ಅವರಿಗೆ ಮಾಡಿದ ಮಾನಹಾನಿ ಎಂದು ಆರೋಪಿಸಿ ಸತ್ಯಕಿ ಸಾವರ್ಕರ್ ಪುಣೆ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಆದರೆ, ಈ ಮೊಕದ್ದಮೆಯ ವಿಚಾರಣೆಯಲ್ಲೇ ಸಾವರ್ಕರ್ ಅವರ ಗೋಪೂಜೆ ವಿರೋಧಿ ಹಾಗೂ ವೈಜ್ಞಾನಿಕ ವಿಚಾರಗಳ ಕುರಿತು ಅವರ ಕುಟುಂಬಸ್ಥರೇ ಕೋರ್ಟ್‌ನಲ್ಲಿ ಅಧಿಕೃತವಾಗಿ ಒಪ್ಪಿಕೊಂಡಿರುವುದು ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...