Homeಅಂತರಾಷ್ಟ್ರೀಯಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

- Advertisement -
- Advertisement -

ಈ ವರ್ಷದ ಹಜ್ ಯಾತ್ರೆಗೆ ಮುಂಚಿತವಾಗಿ ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ಸೌದಿ ಅರೇಬಿಯಾ (ಕೆಎಸ್ಎ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಅಂತ್ಯದೊಂದಿಗೆ ಹೊಂದಿಕೆಯಾಗುವ 2025ರ ಜೂನ್ ಮಧ್ಯಭಾಗದವರೆಗೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಭೇಟಿ ವೀಸಾಗಳನ್ನು ನೀಡುವುದಕ್ಕೆ ಸರ್ಕಾರ ತಡೆಯೊಡ್ದಿದೆ ಎಂದು ವರದಿಯಾಗಿದೆ.

ಹಜ್ ಯಾತ್ರೆಯ ವೇಳೆ ಜನದಟ್ಟಣೆಯನ್ನು ನಿರ್ವಹಿಸಲು ಮತ್ತು ಸರಿಯಾದ ನೋಂದಣಿ ಇಲ್ಲದೆ ವ್ಯಕ್ತಿಗಳು ಹಜ್ ಮಾಡಲು ಪ್ರಯತ್ನಿಸುವುದನ್ನು ತಡೆಯಲು ಸೌದಿ ಸರ್ಕಾರ ವೀಸಾ ನಿಷೇಧ ಜಾರಿಗೊಳಿಸಿದೆ.

ಕಳೆದ ವರ್ಷದ ಹಜ್ ಸಮಯದಲ್ಲಿ ತೀವ್ರ ಶಾಖ ಮತ್ತು ನೋಂದಾಯಿಸದ ಯಾತ್ರಿಕರ ದಟ್ಟಣೆಯಿಂದ ಕಾಲ್ತುಳಿತ ಸಂಭವಿಸಿತ್ತು. ಅಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ವೀಸಾ ನಿಯಮಗಳನ್ನು ಬಲಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪರಿಷ್ಕೃತ ನಿಯಮಗಳ ಪ್ರಕಾರ, ಏಪ್ರಿಲ್ 13, 2025 ಉಮ್ರಾ ವೀಸಾಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನಂತರ ಹಜ್ ಮುಗಿಯುವವರೆಗೆ ಯಾವುದೇ ಹೊಸ ಉಮ್ರಾ ವೀಸಾಗಳನ್ನು ನೀಡಲಾಗುವುದಿಲ್ಲ.

ಭಾರತ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಇತರ ದೇಶಗಳು ಸೌದಿ ಅರೇಬಿಯಾದ ವೀಸಾ ನಿಷೇಧಕ್ಕೆ ಒಳಗಾಗಲಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇದು ಉಮ್ರಾ ಯಾತ್ರಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸುರಕ್ಷಿತ ಮತ್ತು ಕಾನೂನುಬದ್ಧ ಹಜ್‌ ಕಾರ್ಯವಿಧಾನಗಳ ಬಗ್ಗೆ ಯಾತ್ರಿಕರಿಗೆ ಮಾಹಿತಿ ನೀಡಲು ಸೌದಿ ಸರ್ಕಾರ 16 ಭಾಷೆಗಳಲ್ಲಿ ಡಿಜಿಟಲ್ ಹಜ್ ಮತ್ತು ಉಮ್ರಾ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಹಜ್ ಸಮಯದಲ್ಲಿ ಯಾರಾದರು ಅಕ್ರಮವಾಗಿ ಉಳಿದುಕೊಂಡರೆ, ಅಂತವರು ಸೌದಿ ಅರೇಬಿಯಾಕ್ಕೆ ಮರು ಪ್ರವೇಶಿಸಲು ಐದು ವರ್ಷಗಳ ನಿಷೇಧ ಮತ್ತು 10,000 ಸೌದಿ ರಿಯಾಲ್‌ಗಳ ದಂಡವನ್ನು ವಿಧಿಸಲಾಗುವುದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಎಲ್ಲಾ ಯಾತ್ರಿಕರು ಹಜ್ ಪರವಾನಗಿಯನ್ನು ಬಳಸಿಕೊಂಡು ಪ್ರವೇಶಿಸಲು ಸಲಹೆ ನೀಡಿದ್ದಾರೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ವೀಸಾ ನಿಷೇಧಕ್ಕೊಳಪಟ್ಟ ರಾಷ್ಟ್ರಗಳು 

ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ.

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...