Homeಅಂತರಾಷ್ಟ್ರೀಯಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

ಭಾರತ ಸೇರಿದಂತೆ 14 ದೇಶಗಳಿಗೆ ವೀಸಾ ನಿಷೇಧಿಸಿದ ಸೌದಿ ಅರೇಬಿಯಾ

- Advertisement -
- Advertisement -

ಈ ವರ್ಷದ ಹಜ್ ಯಾತ್ರೆಗೆ ಮುಂಚಿತವಾಗಿ ಭಾರತ ಸೇರಿದಂತೆ 14 ದೇಶಗಳ ನಾಗರಿಕರಿಗೆ ವೀಸಾ ನೀಡುವುದನ್ನು ಸೌದಿ ಅರೇಬಿಯಾ (ಕೆಎಸ್ಎ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹಜ್ ಅಂತ್ಯದೊಂದಿಗೆ ಹೊಂದಿಕೆಯಾಗುವ 2025ರ ಜೂನ್ ಮಧ್ಯಭಾಗದವರೆಗೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಭೇಟಿ ವೀಸಾಗಳನ್ನು ನೀಡುವುದಕ್ಕೆ ಸರ್ಕಾರ ತಡೆಯೊಡ್ದಿದೆ ಎಂದು ವರದಿಯಾಗಿದೆ.

ಹಜ್ ಯಾತ್ರೆಯ ವೇಳೆ ಜನದಟ್ಟಣೆಯನ್ನು ನಿರ್ವಹಿಸಲು ಮತ್ತು ಸರಿಯಾದ ನೋಂದಣಿ ಇಲ್ಲದೆ ವ್ಯಕ್ತಿಗಳು ಹಜ್ ಮಾಡಲು ಪ್ರಯತ್ನಿಸುವುದನ್ನು ತಡೆಯಲು ಸೌದಿ ಸರ್ಕಾರ ವೀಸಾ ನಿಷೇಧ ಜಾರಿಗೊಳಿಸಿದೆ.

ಕಳೆದ ವರ್ಷದ ಹಜ್ ಸಮಯದಲ್ಲಿ ತೀವ್ರ ಶಾಖ ಮತ್ತು ನೋಂದಾಯಿಸದ ಯಾತ್ರಿಕರ ದಟ್ಟಣೆಯಿಂದ ಕಾಲ್ತುಳಿತ ಸಂಭವಿಸಿತ್ತು. ಅಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರು ವೀಸಾ ನಿಯಮಗಳನ್ನು ಬಲಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪರಿಷ್ಕೃತ ನಿಯಮಗಳ ಪ್ರಕಾರ, ಏಪ್ರಿಲ್ 13, 2025 ಉಮ್ರಾ ವೀಸಾಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ನಂತರ ಹಜ್ ಮುಗಿಯುವವರೆಗೆ ಯಾವುದೇ ಹೊಸ ಉಮ್ರಾ ವೀಸಾಗಳನ್ನು ನೀಡಲಾಗುವುದಿಲ್ಲ.

ಭಾರತ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಇತರ ದೇಶಗಳು ಸೌದಿ ಅರೇಬಿಯಾದ ವೀಸಾ ನಿಷೇಧಕ್ಕೆ ಒಳಗಾಗಲಿವೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಇದು ಉಮ್ರಾ ಯಾತ್ರಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸುರಕ್ಷಿತ ಮತ್ತು ಕಾನೂನುಬದ್ಧ ಹಜ್‌ ಕಾರ್ಯವಿಧಾನಗಳ ಬಗ್ಗೆ ಯಾತ್ರಿಕರಿಗೆ ಮಾಹಿತಿ ನೀಡಲು ಸೌದಿ ಸರ್ಕಾರ 16 ಭಾಷೆಗಳಲ್ಲಿ ಡಿಜಿಟಲ್ ಹಜ್ ಮತ್ತು ಉಮ್ರಾ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ. ಹಜ್ ಸಮಯದಲ್ಲಿ ಯಾರಾದರು ಅಕ್ರಮವಾಗಿ ಉಳಿದುಕೊಂಡರೆ, ಅಂತವರು ಸೌದಿ ಅರೇಬಿಯಾಕ್ಕೆ ಮರು ಪ್ರವೇಶಿಸಲು ಐದು ವರ್ಷಗಳ ನಿಷೇಧ ಮತ್ತು 10,000 ಸೌದಿ ರಿಯಾಲ್‌ಗಳ ದಂಡವನ್ನು ವಿಧಿಸಲಾಗುವುದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಎಲ್ಲಾ ಯಾತ್ರಿಕರು ಹಜ್ ಪರವಾನಗಿಯನ್ನು ಬಳಸಿಕೊಂಡು ಪ್ರವೇಶಿಸಲು ಸಲಹೆ ನೀಡಿದ್ದಾರೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ.

ವೀಸಾ ನಿಷೇಧಕ್ಕೊಳಪಟ್ಟ ರಾಷ್ಟ್ರಗಳು 

ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ.

ಟ್ರಂಪ್‌ ವಿರುದ್ಧ ಅಮೆರಿಕನ್ನರಿಂದ ‘ಹ್ಯಾಂಡ್ಸ್ ಆಫ್’ ಚಳವಳಿ; ನ್ಯೂಯಾರ್ಕ್‌ನಿಂದ ಅಲಾಸ್ಕಾವರೆಗೆ ಪ್ರತಿಭಟನಾ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...