Homeಅಂತರಾಷ್ಟ್ರೀಯಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

- Advertisement -
- Advertisement -

ಸೌದಿ ಅರೇಬಿಯಾದ ಮಕ್ಕಾದ ಗ್ರ್ಯಾಂಡ್ ಮಸೀದಿಯೊಳಗೆ ಪ್ಯಾಲೆಸ್ತೀನಿಯನ್ ಧ್ವಜವನ್ನು ಎತ್ತಿ ಗಾಜಾ ಪಟ್ಟಿಯಲ್ಲಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಗಮನ ಸೆಳೆಯುವ ಘೋಷಣೆಗಳನ್ನು ಕೂಗಿದ ನಂತರ ಭದ್ರತಾ ಪಡೆಗಳು ಈಜಿಪ್ಟ್ ಯಾತ್ರಿಕನನ್ನು ಬಂಧಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ಘಟನೆಯ 35 ಸೆಕೆಂಡುಗಳ ವೀಡಿಯೊ ಕ್ಲಿಪ್, ಕಾಬಾದ ಮುಂದೆ ಆ ವ್ಯಕ್ತಿ ಧ್ವಜ ಬೀಸುತ್ತಾ ಭಾವನಾತ್ಮಕವಾಗಿ ‘ವಾ ಇಸ್ಲಾಮಾ!’ ಎಂದು ಕೂಗುತ್ತಿರುವುದನ್ನು ಕಾಣಬಹುದು. ಇದು ಐತಿಹಾಸಿಕ ಇಸ್ಲಾಮಿಕ್ ದುಃಖದ ಕೂಗು, ಗಾಜಾದ ಮಕ್ಕಳು ಸಾಯುತ್ತಿದ್ದಾರೆ. ಓ ಮುಸ್ಲಿಮರು! ಎಂದು ಕೂಗಿದ್ದಾರೆ.

ನಂತರ, ಸೌದಿ ಅಧಿಕಾರಿಗಳು ಮಸೀದಿಯೊಳಗೆ ಅವರನ್ನು ಸಮೀಪಿಸಿ ತ್ವರಿತವಾಗಿ ಬಂಧಿಸಿದರು. ಈ ಘಟನೆಯು ಆನ್‌ಲೈನ್ ಟೀಕೆಗೆ ಗುರಿಯಾಗಿದೆ. ಇಸ್ಲಾಮಿಕ್ ಪವಿತ್ರ ತಾಣಗಳಲ್ಲಿ ರಾಜಕೀಯ ಅಭಿವ್ಯಕ್ತಿಯ ಮೇಲೆ ಸೌದಿ ಅರೇಬಿಯಾದ ನಿಷೇಧದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಆಧ್ಯಾತ್ಮಿಕ ಗಮನವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಉಲ್ಲೇಖಿಸಿ ಸೌದಿ ಅರೇಬಿಯಾ ಧ್ವಜ, ಘೋಷಣೆಗಳು ಸೇರಿದಂತೆ ಹಜ್ ಮತ್ತು ಉಮ್ರಾ ಸಮಯದಲ್ಲಿ ಎಲ್ಲ ರಾಜಕೀಯ ಸಂದೇಶಗಳನ್ನು ನಿಷೇಧಿಸಿದೆ. ಆದರೂ, ಪ್ಯಾಲೆಸ್ತೀನಿಯನ್ ಪರ ಧ್ವನಿಗಳನ್ನು ಮೌನಗೊಳಿಸಲು ಈ ನೀತಿಯನ್ನು ಬಳಸಲಾಗುತ್ತಿದೆ ಎಂದು ಕೆಲವರು ವಿಮರ್ಷೆ ಮಾಡಿದ್ದಾರೆ.

ಗಾಜಾದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ಜಾಗತಿಕ ಕಳವಳ ಹೆಚ್ಚುತ್ತಿರುವಂತೆಯೇ ಬಂಧನವಾಗಿದೆ. ಈ ಪ್ರದೇಶವು ದಿಗ್ಬಂಧನದಲ್ಲಿದ್ದು, ನಡೆಯುತ್ತಿರುವ ಮಿಲಿಟರಿ ದಾಳಿಗಳ ನಡುವೆಯೂ ಆಹಾರ, ನೀರು ಮತ್ತು ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸಾಮಗ್ರಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ವಿಶ್ವಾದ್ಯಂತ ಮಾನವೀಯ ಬೆಂಬಲಕ್ಕಾಗಿ ಕರೆಗಳು ತೀವ್ರಗೊಂಡಿವೆ.

ಪಾಲೆಸ್ತೀನ್ ಪರ ಧ್ವನಿ ಎತ್ತಿದ್ದಕ್ಕಾಗಿ ಬಂಧಿಸಿರುವುದು ಇದೇ ಮೊದಲ ಪ್ರಕರಣವಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ, ಪ್ಯಾಲೆಸ್ತೀನಿಯನ್ ಸಂಕೇತಗಳನ್ನು ಹೊಂದಿರುವ ಹೆಡ್‌ಬ್ಯಾಂಡ್ ಧರಿಸಿದ್ದಕ್ಕಾಗಿ ಸೌದಿ ಅಧಿಕಾರಿಗಳು ಟರ್ಕಿಶ್ ಮಹಿಳೆಗೆ ಗ್ರ್ಯಾಂಡ್ ಮಸೀದಿಗೆ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 2024 ರಲ್ಲಿ, ಪ್ಯಾಲೆಸ್ತೀನಿಯನ್ ಧ್ವಜವನ್ನು ಪ್ರದರ್ಶಿಸುವ ಚೀಲವನ್ನು ಹೊತ್ತೊಯ್ದಿದ್ದಕ್ಕಾಗಿ ಮಹಿಳೆಯನ್ನು ಬಂಧಿಸಲಾಯಿತು.

ನಂತರ, ನವೆಂಬರ್‌ನಲ್ಲಿ, ಅಲ್ಜೀರಿಯಾದ ಯಾತ್ರಿಕ ಮತ್ತು ಟರ್ಕಿಶ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳನ್ನು ಅವರ ತೀರ್ಥಯಾತ್ರೆಯ ಸಮಯದಲ್ಲಿ ಗಾಜಾ ಮತ್ತು ಪ್ಯಾಲೆಸ್ತೀನ್‌ಗಾಗಿ ಸಾರ್ವಜನಿಕವಾಗಿ ಬೆಂಬಲಿಸಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿಯಾಗಿದೆ.

ಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...