Homeಅಂತರಾಷ್ಟ್ರೀಯಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

ಸೌದಿ ಅರೇಬಿಯಾ: ಮಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ಪ್ಯಾಲೆಸ್ತೀನಿಯನ್ ಧ್ವಜ ಹಾರಿಸಿದ ಯಾತ್ರಿಕನ ಬಂಧನ

- Advertisement -
- Advertisement -

ಸೌದಿ ಅರೇಬಿಯಾದ ಮಕ್ಕಾದ ಗ್ರ್ಯಾಂಡ್ ಮಸೀದಿಯೊಳಗೆ ಪ್ಯಾಲೆಸ್ತೀನಿಯನ್ ಧ್ವಜವನ್ನು ಎತ್ತಿ ಗಾಜಾ ಪಟ್ಟಿಯಲ್ಲಿರುವ ಮಾನವೀಯ ಬಿಕ್ಕಟ್ಟಿನ ಬಗ್ಗೆ ಗಮನ ಸೆಳೆಯುವ ಘೋಷಣೆಗಳನ್ನು ಕೂಗಿದ ನಂತರ ಭದ್ರತಾ ಪಡೆಗಳು ಈಜಿಪ್ಟ್ ಯಾತ್ರಿಕನನ್ನು ಬಂಧಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ಘಟನೆಯ 35 ಸೆಕೆಂಡುಗಳ ವೀಡಿಯೊ ಕ್ಲಿಪ್, ಕಾಬಾದ ಮುಂದೆ ಆ ವ್ಯಕ್ತಿ ಧ್ವಜ ಬೀಸುತ್ತಾ ಭಾವನಾತ್ಮಕವಾಗಿ ‘ವಾ ಇಸ್ಲಾಮಾ!’ ಎಂದು ಕೂಗುತ್ತಿರುವುದನ್ನು ಕಾಣಬಹುದು. ಇದು ಐತಿಹಾಸಿಕ ಇಸ್ಲಾಮಿಕ್ ದುಃಖದ ಕೂಗು, ಗಾಜಾದ ಮಕ್ಕಳು ಸಾಯುತ್ತಿದ್ದಾರೆ. ಓ ಮುಸ್ಲಿಮರು! ಎಂದು ಕೂಗಿದ್ದಾರೆ.

ನಂತರ, ಸೌದಿ ಅಧಿಕಾರಿಗಳು ಮಸೀದಿಯೊಳಗೆ ಅವರನ್ನು ಸಮೀಪಿಸಿ ತ್ವರಿತವಾಗಿ ಬಂಧಿಸಿದರು. ಈ ಘಟನೆಯು ಆನ್‌ಲೈನ್ ಟೀಕೆಗೆ ಗುರಿಯಾಗಿದೆ. ಇಸ್ಲಾಮಿಕ್ ಪವಿತ್ರ ತಾಣಗಳಲ್ಲಿ ರಾಜಕೀಯ ಅಭಿವ್ಯಕ್ತಿಯ ಮೇಲೆ ಸೌದಿ ಅರೇಬಿಯಾದ ನಿಷೇಧದ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

ಆಧ್ಯಾತ್ಮಿಕ ಗಮನವನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಉಲ್ಲೇಖಿಸಿ ಸೌದಿ ಅರೇಬಿಯಾ ಧ್ವಜ, ಘೋಷಣೆಗಳು ಸೇರಿದಂತೆ ಹಜ್ ಮತ್ತು ಉಮ್ರಾ ಸಮಯದಲ್ಲಿ ಎಲ್ಲ ರಾಜಕೀಯ ಸಂದೇಶಗಳನ್ನು ನಿಷೇಧಿಸಿದೆ. ಆದರೂ, ಪ್ಯಾಲೆಸ್ತೀನಿಯನ್ ಪರ ಧ್ವನಿಗಳನ್ನು ಮೌನಗೊಳಿಸಲು ಈ ನೀತಿಯನ್ನು ಬಳಸಲಾಗುತ್ತಿದೆ ಎಂದು ಕೆಲವರು ವಿಮರ್ಷೆ ಮಾಡಿದ್ದಾರೆ.

ಗಾಜಾದಲ್ಲಿ ಪರಿಸ್ಥಿತಿ ಹದಗೆಡುತ್ತಿರುವುದರ ಬಗ್ಗೆ ಜಾಗತಿಕ ಕಳವಳ ಹೆಚ್ಚುತ್ತಿರುವಂತೆಯೇ ಬಂಧನವಾಗಿದೆ. ಈ ಪ್ರದೇಶವು ದಿಗ್ಬಂಧನದಲ್ಲಿದ್ದು, ನಡೆಯುತ್ತಿರುವ ಮಿಲಿಟರಿ ದಾಳಿಗಳ ನಡುವೆಯೂ ಆಹಾರ, ನೀರು ಮತ್ತು ವೈದ್ಯಕೀಯ ನೆರವು ಸೇರಿದಂತೆ ಅಗತ್ಯ ಸಾಮಗ್ರಿಗಳ ತೀವ್ರ ಕೊರತೆಯನ್ನು ಎದುರಿಸುತ್ತಿದೆ. ವಿಶ್ವಾದ್ಯಂತ ಮಾನವೀಯ ಬೆಂಬಲಕ್ಕಾಗಿ ಕರೆಗಳು ತೀವ್ರಗೊಂಡಿವೆ.

ಪಾಲೆಸ್ತೀನ್ ಪರ ಧ್ವನಿ ಎತ್ತಿದ್ದಕ್ಕಾಗಿ ಬಂಧಿಸಿರುವುದು ಇದೇ ಮೊದಲ ಪ್ರಕರಣವಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ, ಪ್ಯಾಲೆಸ್ತೀನಿಯನ್ ಸಂಕೇತಗಳನ್ನು ಹೊಂದಿರುವ ಹೆಡ್‌ಬ್ಯಾಂಡ್ ಧರಿಸಿದ್ದಕ್ಕಾಗಿ ಸೌದಿ ಅಧಿಕಾರಿಗಳು ಟರ್ಕಿಶ್ ಮಹಿಳೆಗೆ ಗ್ರ್ಯಾಂಡ್ ಮಸೀದಿಗೆ ಪ್ರವೇಶವನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 2024 ರಲ್ಲಿ, ಪ್ಯಾಲೆಸ್ತೀನಿಯನ್ ಧ್ವಜವನ್ನು ಪ್ರದರ್ಶಿಸುವ ಚೀಲವನ್ನು ಹೊತ್ತೊಯ್ದಿದ್ದಕ್ಕಾಗಿ ಮಹಿಳೆಯನ್ನು ಬಂಧಿಸಲಾಯಿತು.

ನಂತರ, ನವೆಂಬರ್‌ನಲ್ಲಿ, ಅಲ್ಜೀರಿಯಾದ ಯಾತ್ರಿಕ ಮತ್ತು ಟರ್ಕಿಶ್ ಶೇಖ್ ಎಂಬ ಇಬ್ಬರು ವ್ಯಕ್ತಿಗಳನ್ನು ಅವರ ತೀರ್ಥಯಾತ್ರೆಯ ಸಮಯದಲ್ಲಿ ಗಾಜಾ ಮತ್ತು ಪ್ಯಾಲೆಸ್ತೀನ್‌ಗಾಗಿ ಸಾರ್ವಜನಿಕವಾಗಿ ಬೆಂಬಲಿಸಿದ್ದಕ್ಕಾಗಿ ಬಂಧಿಸಲಾಯಿತು ಎಂದು ವರದಿಯಾಗಿದೆ.

ಗಾಝಾ | ಹಸಿವಿನಿಂದ ಮತ್ತೆ ಐವರು ಸಾವು: ಆಹಾರ ಖರೀದಿಸಲು ಕ್ಯಾಮರಾ, ಪ್ರೆಸ್ ಶೀಲ್ಡ್ ಮಾರಾಟಕ್ಕಿಟ್ಟ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...