Homeಮುಖಪುಟಸೌದಿ ಅರೇಬಿಯಾ ಉದ್ಯೋಗ ವೀಸಾ : ಭಾರತೀಯ ಕಾರ್ಮಿಕರಿಗೆ ಕಠಿಣ ನಿಯಮಗಳು ಜಾರಿ

ಸೌದಿ ಅರೇಬಿಯಾ ಉದ್ಯೋಗ ವೀಸಾ : ಭಾರತೀಯ ಕಾರ್ಮಿಕರಿಗೆ ಕಠಿಣ ನಿಯಮಗಳು ಜಾರಿ

- Advertisement -
- Advertisement -

ಸೌದಿ ಅರೇಬಿಯಾದ ಉದ್ಯೋಗ ವೀಸಾಕ್ಕೆ ಅರ್ಜಿ ಸಲ್ಲಿಸಲು ಯೋಜಿಸುತ್ತಿರುವ ಭಾರತೀಯ ಕಾರ್ಮಿಕರು ವೃತ್ತಿಪರ ಮತ್ತು ಶೈಕ್ಷಣಿಕ ಅರ್ಹತೆಗಳ ಪೂರ್ವ ಪರಿಶೀಲನೆಯನ್ನು ಪೂರ್ಣಗೊಳಿಸಬೇಕಾಗಿದೆ. ಜನವರಿ 14 ರಿಂದ ಈ ನಿಯಮ ಜಾರಿಗೆ ಬರಲಿದೆ ಎಂದು ವರದಿಯಾಗಿದೆ.

ಸೌದಿ ಅರೇಬಿಯಾದಲ್ಲಿ ಬಾಂಗ್ಲಾದೇಶದ ನಂತರ ಭಾರತೀಯರು ಎರಡನೇ ಅತಿದೊಡ್ಡ ವಲಸಿಗ ಸಮುದಾಯವಾಗಿದ್ದು, 2.4 ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಆರು ತಿಂಗಳ ಹಿಂದೆ ಪ್ರಸ್ತಾಪಿಸಲಾದ ಈ ನಿಯಮಗಳು, ಸೀಮಿತ ಸಂಖ್ಯೆಯ ಅರ್ಹ ತರಬೇತಿ ಕೇಂದ್ರಗಳಿಂದಾಗಿ ಭಾರತೀಯ ಕಾರ್ಮಿಕರ ಒಳಹರಿವನ್ನು ಕಡಿಮೆ ಮಾಡಿ, ಗುಣಮಟ್ಟದ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ವಿಷನ್-2030ಗೆ ಅನುಗುಣವಾಗಿ ಸೌದಿ ಅರೇಬಿಯವು ಕಾರ್ಮಿಕ ವಲಯದಲ್ಲಿ ಹಲವು ಸುಧಾರಣೆಗಳನ್ನು ತರಲು ಮುಂದಾಗಿದೆ. ಈ ಪೈಕಿ ವಲಸಿಗರಿಗೆ ಉದ್ಯೋಗ ಒಪ್ಪಂದ (Employment Contract) ಮಾಡಿಕೊಳ್ಳಲು ಸುಲಭ ವ್ಯವಸ್ಥೆ ಮಾಡಿಕೊಡುವುದು ಮತ್ತು ಕೆಲವು ಉದ್ಯೋಗಗಳಿಗೆ ಕಠಿಣ ಪ್ರಮಾಣೀಕರಣ ಜಾರಿಗೊಳಿಸುವುದು ಸೇರಿದೆ.

ಭಾರತದಲ್ಲಿನ ಸೌದಿ ಮಿಷನ್ ಹೊರಡಿಸಿದ ಸುತ್ತೋಲೆಯ ಪ್ರಕಾರ ಉದ್ಯೋಗ ವೀಸಾಗಳನ್ನು ನೀಡುವ ವೃತ್ತಿಪರ ಪರಿಶೀಲನಾ ಕಾರ್ಯವಿಧಾನಗಳು ಜನವರಿ 14 ರಿಂದ ಜಾರಿಗೆ ಬರಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಆದ್ದರಿಂದ, ಉದ್ಯೋಗ ವೀಸಾಗಳನ್ನು ನೀಡಲು ವೃತ್ತಿಪರ ಪರಿಶೀಲನೆಯು ಕಡ್ಡಾಯ ಅವಶ್ಯಕತೆಗಳಲ್ಲಿ ಒಂದಾಗಲಿದೆ ಎಂದು ಅದು ಹೇಳಿದೆ.

ಸೌದಿ ಅರೇಬಿಯವು ವಲಸಿಗರು ತಮ್ಮ ಇಕಾಮಾ ಅಥವಾ ರೆಸಿಡೆನ್ಸಿ ಪರ್ಮಿಟ್ಸ್‌ ಅನ್ನು ನವೀಕರಿಸುವುದು ಮತ್ತು ನಿರ್ಗಮನ ಮತ್ತು ಮರು-ಪ್ರವೇಶ ವೀಸಾಗಳನ್ನು ( exit and re-entry visas) ವಿಸ್ತರಿಸುವುದಕ್ಕಾಗಿ ನಿಯಮಗಳನ್ನು ಬದಲಾಯಿಸಿದೆ.

ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸೌದಿ ಅರೇಬಿಯಾದ ಪಾಸ್‌ಪೋರ್ಟ್‌ ಜನರಲ್ ಡೈರೆಕ್ಟರೇಟ್, “ವಲಸಿಗರ ಅವಲಂಬಿತರು ಮತ್ತು ದೇಶದ ಹೊರಗೆ ಇರುವ ಗೃಹ ಕಾರ್ಮಿಕರು ಈಗ ತಮ್ಮ ಇಕಾಮಾವನ್ನು ನವೀಕರಿಸಬಹುದು” ಎಂದು ಘೋಷಿಸಿದೆ.

ಸೌದಿಯ ಹೊರಗಿನ ವಲಸಿಗರು ಏಕ ಅಥವಾ ಬಹು ನಿರ್ಗಮನ ಮತ್ತು ಮರು-ಪ್ರವೇಶ ವೀಸಾಗಳ ಅವಧಿಯನ್ನು ವಿಸ್ತರಿಸಬಹುದು.

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...