Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...