Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...