Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...