Homeಅಂತರಾಷ್ಟ್ರೀಯಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

ಕೇರಳದ ಅಬ್ದುಲ್ ರಹೀಂಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ಕೋರ್ಟ್

19 ವರ್ಷ ಜೈಲಿನಲ್ಲಿ ಕಳೆದ ರಹೀಂ ಬಿಡುಗಡೆ ಇನ್ನೂ ಒಂದು ವರ್ಷ ವಿಳಂಬ

- Advertisement -

ಮರಣದಂಡನೆಯಿಂದ ಪಾರಾಗಿರುವ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಫರೂಕ್ ನಿವಾಸಿ ಅಬ್ದುಲ್ ರಹೀಂ ಅವರಿಗೆ ಸೌದಿ ಅರೇಬಿಯಾದ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ 19 ವರ್ಷಗಳನ್ನು ಜೈಲಿನಲ್ಲಿ ಕಳೆದಿರುವ ಅಬ್ದುಲ್ ರಹೀಂ ಮುಂದಿನ ವರ್ಷ (2026) ಡಿಸೆಂಬರ್‌ ತಿಂಗಳಲ್ಲಿ ರಿಯಾದ್ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಲಿದ್ದಾರೆ mathrubhumi.com ವರದಿ ಹೇಳಿದೆ.

ಸೌದಿ ಅರೇಬಿಯಾದ ಬಾಲಕನ ಸಾವಿನ ಪ್ರಕರಣದಲ್ಲಿ ಬಂಧನಕ್ಕೊಳಗಾದ ರಹೀಂ, ನವೆಂಬರ್ 2006ರಿಂದ ಜೈಲಿನಲ್ಲಿದ್ದಾರೆ. ಆರಂಭದಲ್ಲಿ ರಿಯಾದ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತ್ತು. ನಂತರ ಮೃತ ಬಾಲಕನ ಕುಟುಂಬ 1.5 ಕೋಟಿ ಮೊತ್ತದ ಸೌದಿ ರಿಯಾಲ್‌ಗಳ (ಸುಮಾರು 34 ಕೋಟಿಗಿಂತ ರೂ.ಗಿಂತ ಹೆಚ್ಚು) ಬ್ಲಡ್ ಮನಿ ಪಡೆದು ಅವರಿಗೆ ಕ್ಷಮಾಧಾನ ನೀಡಲು ಒಪ್ಪಿಕೊಂಡಿತ್ತು. ಹಾಗಾಗಿ, ರಹೀಂ ಅವರ ಮರಣದಂಡನೆಯನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಅಬ್ದುಲ್ ರಹೀಂ ಅವರು ನವೆಂಬರ್ 28, 2006ರಂದು ತನ್ನ 26ನೇ ವಯಸ್ಸಿನಲ್ಲಿ ಹೌಸ್ ಡ್ರೈವರ್ ವೀಸಾದಲ್ಲಿ ರಿಯಾದ್‌ಗೆ ತೆರಳಿದ್ದರು. ಅಲ್ಲಿ ಅವರನ್ನು ಪ್ರಾಯೋಜಕ ಫಯೀಝ್ ಅಬ್ದುಲ್ಲಾ ಅಬ್ದುರಹ್ಮಾನ್ ಅಲ್-ಶಹ್ರಿ ತನ್ನ ಮಗ ಅನಸ್ ಅನ್ನು ನೋಡಿಕೊಳ್ಳಲು ನೇಮಿಸಿದ್ದರು. ಕುತ್ತಿಗೆಯ ಕೆಳಗೆ ಪಾರ್ಶ್ವವಾಯುವಿಗೆ ಒಳಗಾಗಿದ್ದ ಅನಸ್, ಆಹಾರ ಮತ್ತು ನೀರಿಗಾಗಿ ವಿಶೇಷ ಸಾಧನವನ್ನು ಅವಲಂಬಿಸಿದ್ದರು.

ಡಿಸೆಂಬರ್ 24,2006ರಂದು ರಿಯಾದ್‌ನ ಶಿಫಾ ಪ್ರದೇಶದ ಮನೆಯಿಂದ ಜಿಎಂಸಿ ವ್ಯಾನ್‌ನಲ್ಲಿ ಅನಸ್ ಅವರನ್ನು ಕರೆದೊಯ್ಯುತ್ತಿದ್ದಾಗ, ಆಕಸ್ಮಿಕವಾಗಿ ರಹೀಂ ಅವರ ಕೈ ಅನಸ್‌ನ ಕುತ್ತಿಗೆಗೆ ಅಳವಡಿಸಲಾಗಿದ್ದ ಸಾಧನಕ್ಕೆ ತಾಗಿದೆ. ಇದರಿಂದ ಆ ಸಾಧನ ಕಳಚಿ ಬಿದ್ದು ಅನಸ್ ಪ್ರಜ್ಞೆ ಕಳೆದುಕೊಂಡಿದ್ದ. ಇದರ ಅರಿವಿಲ್ಲದೆ ಪ್ರಯಾಣ ಮುಂದುವರಿಸಿದ್ದ ರಹೀಂ ಸ್ವಲ್ಪ ಹೊತ್ತಿನ ಬಳಿಕ ಬಾಲಕ ಪ್ರತಿಕ್ರಿಯಿಸದಿರುವುದನ್ನು ಗಮನಿಸಿದಾಗ ಆತ ಸಾವನ್ನಪ್ಪಿದ್ದ ಎಂದು ಹೇಳಲಾಗ್ತಿದೆ.

ಅನಸ್ ಸಾವಿನ ನಂತರ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾದ ರಹೀಂ ಎರಡು ದಶಕಗಳಲ್ಲಿ ಹಲವಾರು ನ್ಯಾಯಾಲಯಗಳ ತೀರ್ಪುಗಳನ್ನು ಎದುರಿಸಿದ್ದಾರೆ. ಅವರಿಗೆ ಮೂರು ಬಾರಿ ಮರಣದಂಡನೆ ವಿಧಿಸಲಾಗಿತ್ತು. ಬಾಲಕ ಅನಸ್ ಕುಟುಂಬವು ಆರಂಭದಲ್ಲಿ ಮರಣದಂಡನೆಗೆ ಒತ್ತಾಯಿಸಿತ್ತು. ಆದರೆ, ಮಧ್ಯಸ್ಥಿಕೆಯ ಪ್ರಯತ್ನಗಳ ನಂತರ ಬ್ಲಡ್‌ ಮನಿಗೆ ಬದಲಾಗಿ ರಹೀಂಗೆ ಕ್ಷಮೆ ನೀಡಲು ಒಪ್ಪಿಕೊಂಡಿತು.

ಸೌದಿಯಲ್ಲಿ ಅತ್ಯಂತ ಸೂಕ್ಷ್ಮವೆಂದು ಪರಿಗಣಿಸಲಾದ ಈ ಪ್ರಕರಣವು ನ್ಯಾಯಾಂಗ ವಿಚಾರಣೆಯಲ್ಲಿ ಪದೇ ಪದೇ ವಿಳಂಬವನ್ನು ಕಂಡಿತ್ತು. ಸುಮಾರು 12 ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು.

ರಹೀಂ ಜೈಲಿನಲ್ಲಿದ್ದಾಗ ‘ರಿಯಾದ್‌ ರಹೀಮ್ ಸಪೋರ್ಟ್‌ ಕಮಿಟಿ’ ಅವರಿಗೆ ಕಾನೂನು ಹೋರಾಟದಲ್ಲಿ ದೊಡ್ಡ ಬೆಂಬಲವನ್ನು ನೀಡಿತ್ತು. ಇದೇ ಕಮಿಟಿ ಈಗ ರಹೀಂ ಅವರ ಬಿಡುಗಡೆಯ ಹೊಸ ದಿನಾಂಕವನ್ನು ದೃಢಪಡಿಸಿದೆ ಮತ್ತು ಅವರ ವಾಪಸಾತಿ ಹಾಗೂ ಅಂತಿಮ ಕಾನೂನು ವಿಧಿವಿಧಾನಗಳ ಕುರಿತು ಹೆಚ್ಚಿನ ವಿವರಗಳನ್ನು ಸರಿಯಾದ ಸಮಯದಲ್ಲಿ ಹಂಚಿಕೊಳ್ಳಲಾಗುವುದು ಎಂಬುವುದಾಗಿ ಹೇಳಿದೆ ಎಂದು english.mathrubhumi.com ವರದಿ ತಿಳಿಸಿದೆ.

ಸಮುದ್ರ ತೀರಕ್ಕೆ ಬರಲಾರಂಭಿಸಿದ ಮುಳುಗಿದ ಹಡಗಿನ ಕಂಟೇನರ್‌ಗಳು: ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...