Homeಮುಖಪುಟಸೌದಿ : ಸರ್ಕಾರವನ್ನು ಟೀಕಿಸಿದ್ದ ವ್ಯಕ್ತಿಗೆ 30 ವರ್ಷ ಜೈಲು

ಸೌದಿ : ಸರ್ಕಾರವನ್ನು ಟೀಕಿಸಿದ್ದ ವ್ಯಕ್ತಿಗೆ 30 ವರ್ಷ ಜೈಲು

- Advertisement -
- Advertisement -

ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರವನ್ನು ಟೀಕಿಸಿದ ನಿವೃತ್ತ ಶಿಕ್ಷಕನಿಗೆ ಸೌದಿ ಅರೇಬಿಯಾದ ನ್ಯಾಯಾಲಯ 30 ವರ್ಷ ಜೈಲುಶಿಕ್ಷೆ ವಿಧಿಸಿರುವುದಾಗಿ ವರದಿಯಾಗಿದೆ.

ಮುಹಮ್ಮದ್ ಅಲ್-ಘಮ್ಡಿ ಶಿಕ್ಷೆಗೊಳಗಾದ ವ್ಯಕ್ತಿ. ಇವರನ್ನು 2022ರ ಜೂನ್‍ನಲ್ಲಿ ಬಂಧಿಸಲಾಗಿತ್ತು. ಸೌದಿ ನಾಯಕತ್ವದ ವಿರುದ್ಧ ಪಿತೂರಿ, ಸರ್ಕಾರಿ ಸಂಸ್ಥೆಗಳನ್ನು ದುರ್ಬಲಗೊಳಿಸುವುದು ಮತ್ತು ಭಯೋತ್ಪಾದಕ ಸಿದ್ಧಾಂತಕ್ಕೆ ಬೆಂಬಲ ಇತ್ಯಾದಿ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಘಮ್ಡಿ ಅವರಿಗೆ 2023ರ ಜುಲೈಯಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಆದರೆ, ಶಿಕ್ಷೆಯ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. 2023ರ ಸೆಪ್ಟೆಂಬರ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ್ದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್, ನ್ಯಾಯಾಲಯ ಶಿಕ್ಷೆಯನ್ನು ಬದಲಾಯಿಸುವ ನಿರೀಕ್ಷೆಯಿದೆ ಎಂದಿದ್ದರು.

ಬಳಿಕ ಆರೋಪಿ ಮರಣದಂಡನೆ ಶಿಕ್ಷೆಯ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಕಳೆದ ಆಗಸ್ಟ್‌ನಲ್ಲಿ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿ 30 ವರ್ಷದ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ ಎಂದು ಆರೋಪಿಯ ಸಹೋದರನನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಇದೇ ಪ್ರಕರಣದಲ್ಲಿ ಮುಹಮ್ಮದ್ ಘಮ್ದಿಯ ಸಹೋದರ, 47 ವರ್ಷದ ಅಸಾದ್ ಅಲ್-ಘಮ್ಡಿಗೆ ಕೂಡ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರ ಶಿಕ್ಷೆಯನ್ನು ಮರುಪರಿಶೀಲಿಸಲಾಗುತ್ತದೆಯೇ? ಎಂಬುದರ ಕುರಿತು ಮಾಹಿತಿ ಇಲ್ಲ ಎಂದು ದಿ ಡೈಲಿ ಗಾರ್ಡಿಯನ್ ವರದಿ ಮಾಡಿದೆ.

ಸೌದಿಯ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ದೇಶವನ್ನು ಪ್ರವಾಸೋದ್ಯಮ ಮತ್ತು ವ್ಯಾಪಾರದ ಜಾಗತಿಕ ಕೇಂದ್ರವಾಗಿ ಪರಿವರ್ತಿಸುವ ಗುರಿಯೊಂದಿಗೆ ವಿಷನ್-2030 ಸುಧಾರಣಾ ಉಪಕ್ರಮವನ್ನು ಕೈಗೊಂಡಿದ್ದಾರೆ. ಆದರೆ, ದೇಶದಲ್ಲಿ ಮಾನವ ಹಕ್ಕುಗಳು ಈಗಲೂ ಚರ್ಚಾ ವಿಷಯವಾಗಿ ಉಳಿದಿದೆ. ವಿಶೇಷವಾಗಿ ವಾಕ್ ಸ್ವಾತಂತ್ರ್ಯದ ವಿಚಾರದಲ್ಲಿ ಸೌದಿ ಸರ್ಕಾರ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗುತ್ತಲೇ ಇದೆ.

ಇದನ್ನೂ ಓದಿ : ತಮಟೆ ಬಡಿಯಲು ನಿರಾಕರಿಸಿದ ದಲಿತ ಕುಟುಂಬಕ್ಕೆ ಬಹಿಷ್ಕಾರ; 19 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...