Homeಅಂತರಾಷ್ಟ್ರೀಯಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

ಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

- Advertisement -
- Advertisement -

ವಾಷಿಂಗ್ಟನ್‌‌ ಪೋಸ್ಟ್‌‌ ಪತ್ರಕರ್ತ ಜಮಾಲ್ ಖಶೋಗಿ ಅವರ ಹತ್ಯೆಗೆ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೇ ಹೊಣೆಗಾರರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶುಕ್ರವಾರ ಹೇಳಿದ್ದಾರೆ. ಅವರು ಸೌದಿ ಅರೇಬಿಯಾದ ಉಪಪ್ರಧಾನಿಯೂ ಆಗಿರುವ ರಾಜಕುಮಾರನೊಂದಿಗೆ ಮಾತುಕತೆ ನಡೆಸಿದ ಸ್ವಲ್ಪ ಸಮಯದ ನಂತರವೇ ಈ ಹೇಳಿಕೆ ನೀಡಿದ್ದಾರೆ.

ಜೋ ಬಿಡೆನ್ ಅವರು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಕೊಲೆಯಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸಿದ್ದು, ಆದರೆ ಕೊಲೆಯ ಹೊಣೆಗಾರಿಕೆಯನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಖಶೋಗಿ ಹತ್ಯೆಗೆ ಸಂಬಂಧಿಸಿದ ವಿಚಾರವನ್ನು ನಾನು ಸಭೆಯ ಮುಂದೆ ಎತ್ತಿದ್ದೇನೆ. ಆ ಸಮಯದಲ್ಲಿ ನಾನು ಅದರ ಬಗ್ಗೆ ಏನು ಯೋಚಿಸಿದೆ ಮತ್ತು ಈಗ ಅದರ ಬಗ್ಗೆ ನಾನು ಏನು ಯೋಚಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ” ಎಂದು ಬಿಡೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾನು ನೇರವಾಗಿ ಚರ್ಚಿಸುತ್ತಾ ನನ್ನ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದ್ದೇನೆ. ನಾನು ನೇರವಾಗಿ ಹೇಳಿದ್ದೇನೆ, ಅಮೆರಿಕಾದ ಅಧ್ಯಕ್ಷರಾಗಿ ಮಾನವ ಹಕ್ಕುಗಳ ವಿಷಯದ ಬಗ್ಗೆ ಮೌನವಾಗಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇಸ್ತಾನ್‌ಬುಲ್‌ನಲ್ಲಿರುವ ಸೌದಿ ಅರೇಬಿಯಾದ ದೂತಾವಾಸದಲ್ಲಿ ಸೌದಿ ಏಜೆಂಟರಿಂದ ಹತ್ಯೆಗೀಡಾದ, ಸೌದಿ ಮೂಲದ ಪತ್ರಕರ್ತ ಖಶೋಗಿಯನ್ನು ಸೆರೆಹಿಡಿಯಲು ಅಥವಾ ಕೊಲ್ಲುವ ಕಾರ್ಯಾಚರಣೆಯನ್ನು ರಾಜಕುಮಾರ ಸಲ್ಮಾನ್‌‌ ಅನುಮೋದಿಸಿದ್ದಾರೆ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಖಶೋಗಿ ಕೊಲೆಯು ಅಘಾತಕಾರಿ ಎಂದು ಎಂದು ಬಿಡೆನ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

“ಸೌದಿ ರಾಜಕುಮಾರ ಕೊಲೆಗೆ ತಾನು ವೈಯಕ್ತಿಕವಾಗಿ ಜವಾಬ್ದಾರನಲ್ಲ ಎಂದು ಹೇಳಿದ್ದಾರೆ. ಆದರೆ ನಾನು ಕೊಲೆಗೆ ನೀವೇ ಕಾರಣ ಎಂದು ಭಾವಿಸಿದ್ದೇನೆ ಎಂದು ಸೂಚಿಸಿದೆ” ಎಂದು ಎಂದು ಬಿಡೆನ್ ತಮ್ಮ ಸಭೆಯ ಸಮಯದಲ್ಲಿ ರಾಜಕುಮಾರನ ಪ್ರತಿಕ್ರಿಯೆಯ ಬಗ್ಗೆ ಹೇಳಿದ್ದಾರೆ.

ಜೊ ಬಿಡೆನ್‌ ಅವರು ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ, ಖಶೋಗಿಯ ಹತ್ಯೆಯ ಕಾರಣಕ್ಕೆ ಸೌದಿ ಅರೇಬಿಯಾವನ್ನು ವಿಶ್ವ ವೇದಿಕೆಯಲ್ಲಿ ಏಕಾಂಗಿ(ಪರಿಯಾ) ಮಾಡಬೇಕೆಂದು ಹೇಳಿದ್ದರು. ಈ ಹೇಳಿಕೆಗೆ ತಾನು ವಿಷಾದಿಸುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಈ ನಡವೆ ಸೌದಿ ರಾಜಕುಮಾರನೊಂದಿಗಿನ ಬಿಡೆನ್ ಅವರ ಸಂವಾದವು ವಾಷಿಂಗ್ಟನ್ ಪೋಸ್ಟ್ ಮತ್ತು ಪತ್ರಕರ್ತರ ಸಮಿತಿ ಸೇರಿದಂತೆ ಅಮೆರಿಕದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಖಶೋಗಿ ಅವರ ಪ್ರೇಯಸಿ ಹ್ಯಾಟಿಸ್ ಸೆಂಗಿಜ್ ಅವರು ಟ್ವಿಟ್ಟರ್‌ನಲ್ಲಿ ಬಿಡೆನ್ ಅವರು ಸೌದಿ ರಾಜಕುಮಾರನೊಂದಿಗಿನ ಭೇಟಿಯ ಚಿತ್ರವನ್ನು ಟ್ವೀಟ್ ಮಾಡಿ, “ಖಶೋಗಿ ಹೀಗೆ ಬರೆಯುತ್ತಾರೆ; ನನ್ನ ಕೊಲೆಗೆ ನೀವು ಭರವಸೆ ನೀಡಿದ ಹೊಣೆಗಾರಿಕೆ ಇದುವೇ? ರಾಜಕುಮಾರ ಸಲ್ಮಾನ್‌ನ ಮುಂದಿನ ಬಲಿಪಶುಗಳ ರಕ್ತವು ನಿಮ್ಮ ಕೈಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...