Homeಅಂತರಾಷ್ಟ್ರೀಯಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

ಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

- Advertisement -
- Advertisement -

ವಾಷಿಂಗ್ಟನ್‌‌ ಪೋಸ್ಟ್‌‌ ಪತ್ರಕರ್ತ ಜಮಾಲ್ ಖಶೋಗಿ ಅವರ ಹತ್ಯೆಗೆ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೇ ಹೊಣೆಗಾರರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶುಕ್ರವಾರ ಹೇಳಿದ್ದಾರೆ. ಅವರು ಸೌದಿ ಅರೇಬಿಯಾದ ಉಪಪ್ರಧಾನಿಯೂ ಆಗಿರುವ ರಾಜಕುಮಾರನೊಂದಿಗೆ ಮಾತುಕತೆ ನಡೆಸಿದ ಸ್ವಲ್ಪ ಸಮಯದ ನಂತರವೇ ಈ ಹೇಳಿಕೆ ನೀಡಿದ್ದಾರೆ.

ಜೋ ಬಿಡೆನ್ ಅವರು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಕೊಲೆಯಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸಿದ್ದು, ಆದರೆ ಕೊಲೆಯ ಹೊಣೆಗಾರಿಕೆಯನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಖಶೋಗಿ ಹತ್ಯೆಗೆ ಸಂಬಂಧಿಸಿದ ವಿಚಾರವನ್ನು ನಾನು ಸಭೆಯ ಮುಂದೆ ಎತ್ತಿದ್ದೇನೆ. ಆ ಸಮಯದಲ್ಲಿ ನಾನು ಅದರ ಬಗ್ಗೆ ಏನು ಯೋಚಿಸಿದೆ ಮತ್ತು ಈಗ ಅದರ ಬಗ್ಗೆ ನಾನು ಏನು ಯೋಚಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ” ಎಂದು ಬಿಡೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾನು ನೇರವಾಗಿ ಚರ್ಚಿಸುತ್ತಾ ನನ್ನ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದ್ದೇನೆ. ನಾನು ನೇರವಾಗಿ ಹೇಳಿದ್ದೇನೆ, ಅಮೆರಿಕಾದ ಅಧ್ಯಕ್ಷರಾಗಿ ಮಾನವ ಹಕ್ಕುಗಳ ವಿಷಯದ ಬಗ್ಗೆ ಮೌನವಾಗಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇಸ್ತಾನ್‌ಬುಲ್‌ನಲ್ಲಿರುವ ಸೌದಿ ಅರೇಬಿಯಾದ ದೂತಾವಾಸದಲ್ಲಿ ಸೌದಿ ಏಜೆಂಟರಿಂದ ಹತ್ಯೆಗೀಡಾದ, ಸೌದಿ ಮೂಲದ ಪತ್ರಕರ್ತ ಖಶೋಗಿಯನ್ನು ಸೆರೆಹಿಡಿಯಲು ಅಥವಾ ಕೊಲ್ಲುವ ಕಾರ್ಯಾಚರಣೆಯನ್ನು ರಾಜಕುಮಾರ ಸಲ್ಮಾನ್‌‌ ಅನುಮೋದಿಸಿದ್ದಾರೆ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಖಶೋಗಿ ಕೊಲೆಯು ಅಘಾತಕಾರಿ ಎಂದು ಎಂದು ಬಿಡೆನ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

“ಸೌದಿ ರಾಜಕುಮಾರ ಕೊಲೆಗೆ ತಾನು ವೈಯಕ್ತಿಕವಾಗಿ ಜವಾಬ್ದಾರನಲ್ಲ ಎಂದು ಹೇಳಿದ್ದಾರೆ. ಆದರೆ ನಾನು ಕೊಲೆಗೆ ನೀವೇ ಕಾರಣ ಎಂದು ಭಾವಿಸಿದ್ದೇನೆ ಎಂದು ಸೂಚಿಸಿದೆ” ಎಂದು ಎಂದು ಬಿಡೆನ್ ತಮ್ಮ ಸಭೆಯ ಸಮಯದಲ್ಲಿ ರಾಜಕುಮಾರನ ಪ್ರತಿಕ್ರಿಯೆಯ ಬಗ್ಗೆ ಹೇಳಿದ್ದಾರೆ.

ಜೊ ಬಿಡೆನ್‌ ಅವರು ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ, ಖಶೋಗಿಯ ಹತ್ಯೆಯ ಕಾರಣಕ್ಕೆ ಸೌದಿ ಅರೇಬಿಯಾವನ್ನು ವಿಶ್ವ ವೇದಿಕೆಯಲ್ಲಿ ಏಕಾಂಗಿ(ಪರಿಯಾ) ಮಾಡಬೇಕೆಂದು ಹೇಳಿದ್ದರು. ಈ ಹೇಳಿಕೆಗೆ ತಾನು ವಿಷಾದಿಸುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಈ ನಡವೆ ಸೌದಿ ರಾಜಕುಮಾರನೊಂದಿಗಿನ ಬಿಡೆನ್ ಅವರ ಸಂವಾದವು ವಾಷಿಂಗ್ಟನ್ ಪೋಸ್ಟ್ ಮತ್ತು ಪತ್ರಕರ್ತರ ಸಮಿತಿ ಸೇರಿದಂತೆ ಅಮೆರಿಕದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಖಶೋಗಿ ಅವರ ಪ್ರೇಯಸಿ ಹ್ಯಾಟಿಸ್ ಸೆಂಗಿಜ್ ಅವರು ಟ್ವಿಟ್ಟರ್‌ನಲ್ಲಿ ಬಿಡೆನ್ ಅವರು ಸೌದಿ ರಾಜಕುಮಾರನೊಂದಿಗಿನ ಭೇಟಿಯ ಚಿತ್ರವನ್ನು ಟ್ವೀಟ್ ಮಾಡಿ, “ಖಶೋಗಿ ಹೀಗೆ ಬರೆಯುತ್ತಾರೆ; ನನ್ನ ಕೊಲೆಗೆ ನೀವು ಭರವಸೆ ನೀಡಿದ ಹೊಣೆಗಾರಿಕೆ ಇದುವೇ? ರಾಜಕುಮಾರ ಸಲ್ಮಾನ್‌ನ ಮುಂದಿನ ಬಲಿಪಶುಗಳ ರಕ್ತವು ನಿಮ್ಮ ಕೈಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...