Homeಅಂತರಾಷ್ಟ್ರೀಯಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

ಖಶೋಗಿ ಹತ್ಯೆಗೆ ಸೌದಿ ರಾಜಕುಮಾರ ಹೊಣೆ: ಅಮೆರಿಕ ಅಧ್ಯಕ್ಷ ಜೊ ಬಿಡೆನ್

- Advertisement -
- Advertisement -

ವಾಷಿಂಗ್ಟನ್‌‌ ಪೋಸ್ಟ್‌‌ ಪತ್ರಕರ್ತ ಜಮಾಲ್ ಖಶೋಗಿ ಅವರ ಹತ್ಯೆಗೆ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರೇ ಹೊಣೆಗಾರರಾಗಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶುಕ್ರವಾರ ಹೇಳಿದ್ದಾರೆ. ಅವರು ಸೌದಿ ಅರೇಬಿಯಾದ ಉಪಪ್ರಧಾನಿಯೂ ಆಗಿರುವ ರಾಜಕುಮಾರನೊಂದಿಗೆ ಮಾತುಕತೆ ನಡೆಸಿದ ಸ್ವಲ್ಪ ಸಮಯದ ನಂತರವೇ ಈ ಹೇಳಿಕೆ ನೀಡಿದ್ದಾರೆ.

ಜೋ ಬಿಡೆನ್ ಅವರು ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಕೊಲೆಯಲ್ಲಿ ಭಾಗಿಯಾಗಿರುವುದನ್ನು ನಿರಾಕರಿಸಿದ್ದು, ಆದರೆ ಕೊಲೆಯ ಹೊಣೆಗಾರಿಕೆಯನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಖಶೋಗಿ ಹತ್ಯೆಗೆ ಸಂಬಂಧಿಸಿದ ವಿಚಾರವನ್ನು ನಾನು ಸಭೆಯ ಮುಂದೆ ಎತ್ತಿದ್ದೇನೆ. ಆ ಸಮಯದಲ್ಲಿ ನಾನು ಅದರ ಬಗ್ಗೆ ಏನು ಯೋಚಿಸಿದೆ ಮತ್ತು ಈಗ ಅದರ ಬಗ್ಗೆ ನಾನು ಏನು ಯೋಚಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟಪಡಿಸುತ್ತೇನೆ” ಎಂದು ಬಿಡೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ನಾನು ನೇರವಾಗಿ ಚರ್ಚಿಸುತ್ತಾ ನನ್ನ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದ್ದೇನೆ. ನಾನು ನೇರವಾಗಿ ಹೇಳಿದ್ದೇನೆ, ಅಮೆರಿಕಾದ ಅಧ್ಯಕ್ಷರಾಗಿ ಮಾನವ ಹಕ್ಕುಗಳ ವಿಷಯದ ಬಗ್ಗೆ ಮೌನವಾಗಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಇಸ್ತಾನ್‌ಬುಲ್‌ನಲ್ಲಿರುವ ಸೌದಿ ಅರೇಬಿಯಾದ ದೂತಾವಾಸದಲ್ಲಿ ಸೌದಿ ಏಜೆಂಟರಿಂದ ಹತ್ಯೆಗೀಡಾದ, ಸೌದಿ ಮೂಲದ ಪತ್ರಕರ್ತ ಖಶೋಗಿಯನ್ನು ಸೆರೆಹಿಡಿಯಲು ಅಥವಾ ಕೊಲ್ಲುವ ಕಾರ್ಯಾಚರಣೆಯನ್ನು ರಾಜಕುಮಾರ ಸಲ್ಮಾನ್‌‌ ಅನುಮೋದಿಸಿದ್ದಾರೆ ಎಂದು ಅಮೆರಿಕ ಗುಪ್ತಚರ ಇಲಾಖೆ ಹೇಳಿದೆ. ಖಶೋಗಿ ಕೊಲೆಯು ಅಘಾತಕಾರಿ ಎಂದು ಎಂದು ಬಿಡೆನ್ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

“ಸೌದಿ ರಾಜಕುಮಾರ ಕೊಲೆಗೆ ತಾನು ವೈಯಕ್ತಿಕವಾಗಿ ಜವಾಬ್ದಾರನಲ್ಲ ಎಂದು ಹೇಳಿದ್ದಾರೆ. ಆದರೆ ನಾನು ಕೊಲೆಗೆ ನೀವೇ ಕಾರಣ ಎಂದು ಭಾವಿಸಿದ್ದೇನೆ ಎಂದು ಸೂಚಿಸಿದೆ” ಎಂದು ಎಂದು ಬಿಡೆನ್ ತಮ್ಮ ಸಭೆಯ ಸಮಯದಲ್ಲಿ ರಾಜಕುಮಾರನ ಪ್ರತಿಕ್ರಿಯೆಯ ಬಗ್ಗೆ ಹೇಳಿದ್ದಾರೆ.

ಜೊ ಬಿಡೆನ್‌ ಅವರು ಅಧ್ಯಕ್ಷೀಯ ಅಭ್ಯರ್ಥಿಯಾಗಿದ್ದಾಗ, ಖಶೋಗಿಯ ಹತ್ಯೆಯ ಕಾರಣಕ್ಕೆ ಸೌದಿ ಅರೇಬಿಯಾವನ್ನು ವಿಶ್ವ ವೇದಿಕೆಯಲ್ಲಿ ಏಕಾಂಗಿ(ಪರಿಯಾ) ಮಾಡಬೇಕೆಂದು ಹೇಳಿದ್ದರು. ಈ ಹೇಳಿಕೆಗೆ ತಾನು ವಿಷಾದಿಸುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ.

ಈ ನಡವೆ ಸೌದಿ ರಾಜಕುಮಾರನೊಂದಿಗಿನ ಬಿಡೆನ್ ಅವರ ಸಂವಾದವು ವಾಷಿಂಗ್ಟನ್ ಪೋಸ್ಟ್ ಮತ್ತು ಪತ್ರಕರ್ತರ ಸಮಿತಿ ಸೇರಿದಂತೆ ಅಮೆರಿಕದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಸ್ನೇಹಿತರೊಂದಿಗೆ ಮಾತನಾಡುವ ವಿಧಾನವಲ್ಲ: ಭಾರತವನ್ನು ಹೊಲಸು ಎಂದಿದ್ದ ಟ್ರಂಪ್ ಮೇಲೆ ಜೋ ಬಿಡೆನ್ ವಾಗ್ದಾಳಿ

ಖಶೋಗಿ ಅವರ ಪ್ರೇಯಸಿ ಹ್ಯಾಟಿಸ್ ಸೆಂಗಿಜ್ ಅವರು ಟ್ವಿಟ್ಟರ್‌ನಲ್ಲಿ ಬಿಡೆನ್ ಅವರು ಸೌದಿ ರಾಜಕುಮಾರನೊಂದಿಗಿನ ಭೇಟಿಯ ಚಿತ್ರವನ್ನು ಟ್ವೀಟ್ ಮಾಡಿ, “ಖಶೋಗಿ ಹೀಗೆ ಬರೆಯುತ್ತಾರೆ; ನನ್ನ ಕೊಲೆಗೆ ನೀವು ಭರವಸೆ ನೀಡಿದ ಹೊಣೆಗಾರಿಕೆ ಇದುವೇ? ರಾಜಕುಮಾರ ಸಲ್ಮಾನ್‌ನ ಮುಂದಿನ ಬಲಿಪಶುಗಳ ರಕ್ತವು ನಿಮ್ಮ ಕೈಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...