Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ ಸೌದಿ ಅರೇಬಿಯಾ

ಪ್ಯಾಲೆಸ್ತೀನ್‌ಗೆ ಬೆಂಬಲ ಘೋಷಿಸಿದ ಸೌದಿ ಅರೇಬಿಯಾ

- Advertisement -
- Advertisement -

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಯುದ್ಧದ ಹಿನ್ನೆಲೆ ಸೌದಿ ಅರೇಬಿಯಾವು ಪ್ಯಾಲೆಸ್ತೀನಿ ಜನರ ಜೊತೆ ಅಚಲವಾಗಿ ನಿಲ್ಲಲಿದೆ ಎಂದು ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಹೇಳಿದ್ದಾರೆ.

ಹಮಾಸ್‌ ಇಸ್ರೇಲ್‌ ವಿರುದ್ಧ ನಡೆಸಿದ ರಾಕೆಟ್‌ ದಾಳಿ ಬಳಿಕ ನಿರ್ಮಾಣವಾದ ಪರಿಸ್ಥಿತಿಯ ಮತ್ತಷ್ಟು ಉಲ್ಭಣವನ್ನು ತಡೆಯಲು ಕಾರ್ಯಪ್ರವೃತ್ತರಾಗಿರುವುದಾಗಿ  ಮೊಹಮ್ಮದ್ ಬಿನ್ ಸಲ್ಮಾನ್ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರಿಗೆ ಹೇಳಿದ್ದಾರೆ.

ಮಂಗಳವಾರ ಮುಂಜಾನೆ ಸೌದಿ ಸರ್ಕಾರಿ ಮಾಧ್ಯಮಗಳ ಮೂಲಕ ಪ್ಯಾಲೆಸ್ತೀನಿ ಜನರ ಜೊತೆ ಅಚಲವಾಗಿ ನಿಲ್ಲುವ ಬಗ್ಗೆ ಘೋಷಣೆಯನ್ನು ಮಾಡಲಾಗಿದೆ.

ಪ್ಯಾಲೆಸ್ತೀನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರ ಜೊತೆ ಮಾತನಾಡಿದ ಮೊಹಮ್ಮದ್ ಬಿನ್ ಸಲ್ಮಾನ್, ಸೌದಿಅರೇಬಿಯಾವು ಪ್ಯಾಲೆಸ್ತೀನ್ ಜನರ ಕಾನೂನುಬದ್ಧ ಹಕ್ಕುಗಳಿಗಾಗಿ, ಅವರ ಭರವಸೆ ಮತ್ತು ಆಕಾಂಕ್ಷೆಗಳ ಈಡೇರಿಕೆಗೆ,  ನ್ಯಾಯ ಮತ್ತು ಶಾಶ್ವತವಾದ ಶಾಂತಿಗಾಗಿ ಅವರ ಪರವಾಗಿ ಸೌದಿ ಅರೇಬಿಯಾ ನಿಲ್ಲಲಿದೆ ಎಂದು ಹೇಳಿದ್ದಾರೆ.

ಹಮಾಸ್‌ ನಡೆಸಿದ ನೆಲ, ವಾಯು ಮತ್ತು ಸಮುದ್ರ ದಾಳಿ ಮತ್ತು ಇಸ್ರೇಲ್‌ ನಡೆಸಿದ  ಪ್ರತಿ ದಾಳಿಯಿಂದ ಎರಡೂ ಕಡೆಗಳಲ್ಲಿ ಸಾವುನೋವುಗಳು ಸಂಭವಿಸಿದೆ. ಇಸ್ರೇಲ್‌ನಲ್ಲಿ 800ಮಂದಿ ಮೃತಪಟ್ಟಿದ್ದಾರೆ  ಮತ್ತು ಗಾಜಾದಲ್ಲಿ ಮೃತರ ಸಂಖ್ಯೆ 687ಕ್ಕೆ ಏರಿಕೆಯಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿದೆ.

ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಮಧ್ಯೆ, ಸೌದಿ ಅರೇಬಿಯಾ ಇಸ್ರೇಲ್‌ನೊಂದಿಗೆ ಬೆಂಬಲಕ್ಕೆ ನಿಂತಿದೆ ಎಂಬ ಊಹಾಪೋಹ ಹೊರಹೊಮ್ಮಿತ್ತು. ಆದರೆ  ಸೌದಿ ರಾಜಕುಮಾರ ಮೊಹಮ್ಮದ್ ಇತ್ತೀಚೆಗೆ ಫಾಕ್ಸ್ ನ್ಯೂಸ್‌ನೊಂದಿಗೆ ಮಾತನಾಡುತ್ತಾ, ಸೌದಿ ಅರೇಬಿಯಾಕ್ಕೆ ಪ್ಯಾಲೆಸ್ತೀನ್ ಸಮಸ್ಯೆಯ ಮಹತ್ವವನ್ನು ಒತ್ತಿಹೇಳಿದ್ದು, ಸೌದಿಗೆ ಪ್ಯಾಲೆಸ್ತೀನ್‌ ಬುಹುಮುಖ್ಯವಾದುದು ಎಂದು ಹೇಳಿದ್ದಾರೆ. ನಾವು ಅವರ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ. ನಾವು ಪ್ಯಾಲೇಸ್ತೀನಿ ಜನರ  ಜೀವನವನ್ನು ಸುಗಮಗೊಳಿಸಬೇಕಿದೆ ಎಂದು ಹೇಳಿದ್ದಾರೆ.

ಸೌದಿ ರಾಜಕುಮಾರ ಮೊಹಮ್ಮದ್ ಬಿನ್‌ ಸಲ್ಮಾನ್‌ ಇತರ ಪ್ರಾದೇಶಿಕ ನಾಯಕರೊಂದಿಗೆ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ. ಅವರು ಈಜಿಪ್ಟ್ ಅಧ್ಯಕ್ಷ ಅಬ್ದುಲ್‌ ಫತ್ತಾಹ್ ಅಲ್-ಸಿಸಿ ಮತ್ತು ಜೋರ್ಡಾನ್ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ್ದಾರೆ ಎಂದು SPA ವರದಿ ಮಾಡಿದೆ.

ಇನ್ನು ಈ ಬಿಕ್ಕಟ್ಟಿನ ನಡುವೆ ಇಸ್ರೇಲ್‌ಗೆ ಅಮೆರಿಕ, ಫ್ರಾನ್ಸ್, ಜರ್ಮನಿ, ಇಟೆಲಿ ಮತ್ತು ಬ್ರಿಟನ್‌ ಬೆಂಬಲ ನೀಡುವುದಾಗಿ ಜಂಟಿ ಹೇಳಿಕೆ ನೀಡಿದೆ.

ಇದನ್ನು ಓದಿ: ಹಮಾಸ್ ಎಂದರೆ ಯಾರು? ಪ್ಯಾಲೆಸ್ತೀನ್‌ನ ಸಶಸ್ತ್ರ ಗುಂಪಿನ ಬಗ್ಗೆ ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...