Homeಮುಖಪುಟಸೌಗತ್-ಎ-ಮೋದಿ | ಬಿಹಾರ ಮುಸ್ಲಿಮರನ್ನು ಸೆಳೆಯಲು ಬಿಜೆಪಿಯಿಂದ ಈದ್‌ ಕಿಟ್‌ ವಿತರಣಾ ಅಭಿಯಾನ

ಸೌಗತ್-ಎ-ಮೋದಿ | ಬಿಹಾರ ಮುಸ್ಲಿಮರನ್ನು ಸೆಳೆಯಲು ಬಿಜೆಪಿಯಿಂದ ಈದ್‌ ಕಿಟ್‌ ವಿತರಣಾ ಅಭಿಯಾನ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಸ್ಲಿಂ ಮತದಾರರನ್ನು ಆಕರ್ಷಿಸುವ ಉದ್ದೇಶದಿಂದ, ಬಿಜೆಪಿಯ ಅಲ್ಪಸಂಖ್ಯಾತ ಘಟಕವು ರಾಜ್ಯದಲ್ಲಿ ‘ಸೌಗತ್-ಎ-ಮೋದಿ’ ಅಭಿಯಾನವನ್ನು ಪ್ರಾರಂಭಿಸಿದೆ. ಈ ಉಪಕ್ರಮದ ಭಾಗವಾಗಿ, ಸವಲತ್ತುರಹಿತ ಮುಸ್ಲಿಮರಿಗೆ ಈದ್ ಆಚರಿಸಲು ವಿಶೇಷ ಕಿಟ್‌ಗಳನ್ನು ನೀಡಲಾಗುತ್ತದೆ. ಬಿಹಾರ ಮುಸ್ಲಿಮರನ್ನು

‘ಸೌಗತ್-ಎ-ಮೋದಿ’ ಕಿಟ್‌ಗಳಲ್ಲಿ ಬಟ್ಟೆ, ವರ್ಮಿಸೆಲ್ಲಿ, ಖರ್ಜೂರ, ಒಣ ಹಣ್ಣುಗಳು ಮತ್ತು ಸಕ್ಕರೆ ಸೇರಿವೆ. ಮಹಿಳೆಯರ ಕಿಟ್‌ಗಳಲ್ಲಿ ಸೂಟ್‌ಗಳಿಗೆ ಬಟ್ಟೆ ಇರಲಿದ್ದು, ಪುರುಷರ ಕಿಟ್‌ಗಳಲ್ಲಿ ಕುರ್ತಾ-ಪೈಜಾಮಾ ಇರುತ್ತದೆ. ಪ್ರತಿ ಕಿಟ್‌ನ ಬೆಲೆ ಸುಮಾರು 500 ರಿಂದ 600 ರೂ.ಗಳಾಗಿರುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ.

ಬಿಹಾರದ ರಾಜಕೀಯ ಪಕ್ಷಗಳು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ‘ಇಫ್ತಾರ್’ ಕೂಟಗಳನ್ನು ಸಕ್ರಿಯವಾಗಿ ಆಯೋಜಿಸುತ್ತಿರುವ ಸಮಯದಲ್ಲೆ ಬಿಜೆಪಿ ಈ ಅಭಿಯಾನ ನಡೆಸುತ್ತಿದೆ. ಬಿಹಾರ ಮುಸ್ಲಿಮರನ್ನು

ಮಂಗಳವಾರದಂದು ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (HAM)ದ ನಾಯಕ ಜಿತನ್ ರಾಮ್ ಮಾಂಝಿ ಅವರು ರಾಜ್ಯ ರಾಜಧಾನಿಯಲ್ಲಿ ‘ಇಫ್ತಾರ್’ ಕೂಟವನ್ನು ಆಯೋಜಿಸಿದ್ದರು. ಇದರಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಅದಕ್ಕೂ ಒಂದು ದಿನ ಮೊದಲು, ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳ (RJD) ಮಾಜಿ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ಅವರ ನಿವಾಸದಲ್ಲಿ ‘ಇಫ್ತಾರ್’ ಕೂಟವನ್ನು ಆಯೋಜಿಸಿತ್ತು. ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಸಭೆಯಲ್ಲಿ ಭಾಗವಹಿಸಿದ್ದರೂ, ಅದರ ಎರಡು ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ವಿಕಾಸಶೀಲ ಇನ್ಸಾನ್ ಪಕ್ಷದ (VIP) ನಾಯಕರು ಗೈರುಹಾಜರಾಗಿದ್ದರು.

ಆರ್‌ಜೆಡಿಯನ್ನು ಟೀಕಿಸಿದ ಜೆಡಿ (ಯು) ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ನೀರಜ್ ಕುಮಾರ್, “ಮೈತ್ರಿಕೂಟದ ಪಾಲುದಾರರಾಗಿದ್ದರೂ ಕಾಂಗ್ರೆಸ್ ಮತ್ತು ವಿಐಪಿ ನಾಯಕರು ‘ಇಫ್ತಾರ್’ ಕೂಟಕ್ಕೆ ಏಕೆ ಹಾಜರಾಗಲಿಲ್ಲ? ಇದು ತನಿಖೆಯ ವಿಷಯವಾಗಿದೆ” ಎಂದು ವ್ಯಂಗ್ಯವಾಡಿದ್ದರು.

ತೇಜಸ್ವಿ ಪ್ರಸಾದ್ ಯಾದವ್ ಅವರ ದುರಹಂಕಾರ ಮತ್ತು ಲಾಲು ಪ್ರಸಾದ್ ಅವರ ದುಷ್ಕೃತ್ಯಗಳಿಂದಾಗಿ ಆರ್‌ಜೆಡಿಯ ಮಿತ್ರಪಕ್ಷಗಳು ಮೈತ್ರಿಕೂಟವನ್ನು ತೊರೆಯಲು ಪ್ರಾರಂಭಿಸುತ್ತವೆ ಎಂದು ಅವರು ಹೇಳಿದ್ದಾರೆ. “ಆರ್‌ಜೆಡಿಯ ಪೋಸ್ಟರ್‌ಗಳಲ್ಲಿ ಲಾಲು ಕಾಣೆಯಾಗಿದ್ದಾರೆ. ಅವರ ಮಗ ಕೂಡ ಅವರನ್ನು ನಿರ್ಲಕ್ಷಿಸುತ್ತಿದ್ದಾರೆ” ಎಂದು ಅವರು ಹೇಳಿದ್ದರು.

ಈ ಮಧ್ಯೆ, ಇಮಾರತ್-ಎ-ಶರಿಯಾ, ಫುಲ್ವಾರಿಷರೀಫ್ (ಪಾಟ್ನಾ) ಸೇರಿದಂತೆ ಏಳು ಮುಸ್ಲಿಂ ಸಂಘಟನೆಗಳು ಮುಖ್ಯಮಂತ್ರಿ ನಿತೀಶ್ ಕುಮಾರ್‌ ತಮ್ಮ 1 ಆನ್ ಮಾರ್ಗ್ ನಿವಾಸದಲ್ಲಿ ಆಯೋಜಿಸಿದ್ದ ‘ಇಫ್ತಾರ್’ ಕೂಟವನ್ನು ಬಹಿಷ್ಕರಿಸಿವೆ. ಬಹಿಷ್ಕಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ಜೆಡಿ (ಯು) ನಾಯಕರು ಆರ್‌ಜೆಡಿಯನ್ನು ದೂಷಿಸಿದ್ದಾರೆ.

ಆದಾಗ್ಯೂ, ಜೆಡಿ (ಯು) ನಾಯಕ, ಸಚಿವ ವಿಜಯ್ ಕುಮಾರ್ ಚೌಧರಿ, ನಿತೀಶ್ ಕುಮಾರ್ ಅವರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಭಾಗವಹಿಸಿದ್ದರು ಎಂದು ಹೇಳಿದ್ದಾರೆ. “ಈ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಸಂಘಟನೆಗಳನ್ನು ಆಹ್ವಾನಿಸುವುದು ಸಂಪ್ರದಾಯವಾಗಿದೆ” ಎಂದು ಅವರು ಹೇಳಿದ್ದಾರೆ.

ಜೆಡಿ (ಯು) ಎಂಎಲ್‌ಸಿ ಖಾಲಿದ್ ಅನ್ವರ್ ಮುಖ್ಯಮಂತ್ರಿಯ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದು, “ನಿತೀಶ್ ಕುಮಾರ್ ಅವರು ನವೆಂಬರ್ 2005 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ‘ಇಫ್ತಾರ್’ ಕೂಟಗಳನ್ನು ಆಯೋಜಿಸುತ್ತಿದ್ದಾರೆ. ಈ ಕೂಟಗಳು ಸಂಪೂರ್ಣವಾಗಿ ಧಾರ್ಮಿಕವಾಗಿವೆ, ರಾಜಕೀಯವಲ್ಲ.” ಎಂದು ಹೇಳಿದ್ದರೆ.

ಸಂಸತ್ತಿನಲ್ಲಿ ವಕ್ಫ್ ಮಂಡಳಿ ತಿದ್ದುಪಡಿ ಮಸೂದೆಗೆ ಜೆಡಿ(ಯು) ಬೆಂಬಲ ನೀಡಿದ್ದೆ ಮುಸ್ಲಿಂ ಸಂಘಟನೆಗಳು ಮುಖ್ಯಮಂತ್ರಿಯ ಇಫ್ತಾರ್ ಕೂಟ ಬಹಿಷ್ಕರಿಸಲು ಕಾರಣ ಎಂದು ವರದಿಯಾಗಿದೆ. ಇಮಾರತ್-ಎ-ಶರಿಯಾ ಕೂಡ ಈ ವಿಷಯದ ಕುರಿತು ಹೇಳಿಕೆ ನೀಡಿತ್ತು.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ (ರಾಮ್ ವಿಲಾಸ್) ಮತ್ತು ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ಕೂಡ ಪ್ರತ್ಯೇಕ ‘ಇಫ್ತಾರ್’ ಕೂಟಗಳನ್ನು ಆಯೋಜಿಸಿದ್ದಾರೆ. ಪಾರಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲಾಲು ಪ್ರಸಾದ್ ಭಾಗವಹಿಸಿದ್ದರು, ಇದು ಆರ್ಜೆಡಿ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಕಡೆಗೆ ಅವರ ಒಲವು ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ.

ಜೆಡಿ(ಯು) ಕಾರ್ಯಕ್ರಮವನ್ನು ಬಹಿಷ್ಕರಿಸಿದ ಮುಸ್ಲಿಂ ನಾಯಕರು ಸೋಮವಾರದ ಎಲ್‌ಜೆಪಿ (ಆರ್ವಿ) ಆಯೋಜಿಸಿದ್ದ ಇಫ್ತಾರ್ ಕೂಟವನ್ನು ಕೂಡಾ ತಪ್ಪಿಸಿಕೊಂಡಿದ್ದರು.

2023 ರಲ್ಲಿ ನಡೆಸಿದ ಜಾತಿ ಆಧಾರಿತ ಸಮೀಕ್ಷೆಯ ಪ್ರಕಾರ, ಬಿಹಾರದ ಒಟ್ಟು ಜನಸಂಖ್ಯೆಯ ಸುಮಾರು ಶೇ. 17.7 ರಷ್ಟು ಮುಸ್ಲಿಮರಿದ್ದಾರೆ. ಮುಸ್ಲಿಮರು ಬಿಜೆಪಿಯನ್ನು ವಿರೋಧಿಸುವವರು ಎಂದು ಹೆಚ್ಚಾಗಿ ನೋಡಲಾಗುತ್ತದೆಯಾದರೂ, ಜೆಡಿ(ಯು) ವಿವಿಧ ಕಲ್ಯಾಣ ಯೋಜನೆಗಳ ಮೂಲಕ ಅವರ ಬೆಂಬಲವನ್ನು ಪಡೆದುಕೊಂಡಿದೆ. ಮೀಸಲಾತಿ ಮತ್ತು ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುವುದರ ಜೊತೆಗೆ, ನಿತೀಶ್ ಕುಮಾರ್ ಅವರ ಆಡಳಿತವು ಒಬಿಸಿ ಮತ್ತು ಇಬಿಸಿ ಮುಸ್ಲಿಮರಿಗೆ ವಿದ್ಯಾರ್ಥಿವೇತನವನ್ನು ಸಹ ಪ್ರಾರಂಭಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...