Homeಮುಖಪುಟಸೌಗತ್-ಎ-ಮೋದಿ | ಬಿಹಾರ ಮುಸ್ಲಿಮರನ್ನು ಸೆಳೆಯಲು ಬಿಜೆಪಿಯಿಂದ ಈದ್‌ ಕಿಟ್‌ ವಿತರಣಾ ಅಭಿಯಾನ

ಸೌಗತ್-ಎ-ಮೋದಿ | ಬಿಹಾರ ಮುಸ್ಲಿಮರನ್ನು ಸೆಳೆಯಲು ಬಿಜೆಪಿಯಿಂದ ಈದ್‌ ಕಿಟ್‌ ವಿತರಣಾ ಅಭಿಯಾನ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮುಸ್ಲಿಂ ಮತದಾರರನ್ನು ಆಕರ್ಷಿಸುವ ಉದ್ದೇಶದಿಂದ, ಬಿಜೆಪಿಯ ಅಲ್ಪಸಂಖ್ಯಾತ ಘಟಕವು ರಾಜ್ಯದಲ್ಲಿ ‘ಸೌಗತ್-ಎ-ಮೋದಿ’ ಅಭಿಯಾನವನ್ನು ಪ್ರಾರಂಭಿಸಿದೆ. ಈ ಉಪಕ್ರಮದ ಭಾಗವಾಗಿ, ಸವಲತ್ತುರಹಿತ ಮುಸ್ಲಿಮರಿಗೆ ಈದ್ ಆಚರಿಸಲು ವಿಶೇಷ ಕಿಟ್‌ಗಳನ್ನು ನೀಡಲಾಗುತ್ತದೆ. ಬಿಹಾರ ಮುಸ್ಲಿಮರನ್ನು

‘ಸೌಗತ್-ಎ-ಮೋದಿ’ ಕಿಟ್‌ಗಳಲ್ಲಿ ಬಟ್ಟೆ, ವರ್ಮಿಸೆಲ್ಲಿ, ಖರ್ಜೂರ, ಒಣ ಹಣ್ಣುಗಳು ಮತ್ತು ಸಕ್ಕರೆ ಸೇರಿವೆ. ಮಹಿಳೆಯರ ಕಿಟ್‌ಗಳಲ್ಲಿ ಸೂಟ್‌ಗಳಿಗೆ ಬಟ್ಟೆ ಇರಲಿದ್ದು, ಪುರುಷರ ಕಿಟ್‌ಗಳಲ್ಲಿ ಕುರ್ತಾ-ಪೈಜಾಮಾ ಇರುತ್ತದೆ. ಪ್ರತಿ ಕಿಟ್‌ನ ಬೆಲೆ ಸುಮಾರು 500 ರಿಂದ 600 ರೂ.ಗಳಾಗಿರುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ.

ಬಿಹಾರದ ರಾಜಕೀಯ ಪಕ್ಷಗಳು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ‘ಇಫ್ತಾರ್’ ಕೂಟಗಳನ್ನು ಸಕ್ರಿಯವಾಗಿ ಆಯೋಜಿಸುತ್ತಿರುವ ಸಮಯದಲ್ಲೆ ಬಿಜೆಪಿ ಈ ಅಭಿಯಾನ ನಡೆಸುತ್ತಿದೆ. ಬಿಹಾರ ಮುಸ್ಲಿಮರನ್ನು

ಮಂಗಳವಾರದಂದು ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (HAM)ದ ನಾಯಕ ಜಿತನ್ ರಾಮ್ ಮಾಂಝಿ ಅವರು ರಾಜ್ಯ ರಾಜಧಾನಿಯಲ್ಲಿ ‘ಇಫ್ತಾರ್’ ಕೂಟವನ್ನು ಆಯೋಜಿಸಿದ್ದರು. ಇದರಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಅದಕ್ಕೂ ಒಂದು ದಿನ ಮೊದಲು, ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳ (RJD) ಮಾಜಿ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ಅವರ ನಿವಾಸದಲ್ಲಿ ‘ಇಫ್ತಾರ್’ ಕೂಟವನ್ನು ಆಯೋಜಿಸಿತ್ತು. ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಸಭೆಯಲ್ಲಿ ಭಾಗವಹಿಸಿದ್ದರೂ, ಅದರ ಎರಡು ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ವಿಕಾಸಶೀಲ ಇನ್ಸಾನ್ ಪಕ್ಷದ (VIP) ನಾಯಕರು ಗೈರುಹಾಜರಾಗಿದ್ದರು.

ಆರ್‌ಜೆಡಿಯನ್ನು ಟೀಕಿಸಿದ ಜೆಡಿ (ಯು) ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ನೀರಜ್ ಕುಮಾರ್, “ಮೈತ್ರಿಕೂಟದ ಪಾಲುದಾರರಾಗಿದ್ದರೂ ಕಾಂಗ್ರೆಸ್ ಮತ್ತು ವಿಐಪಿ ನಾಯಕರು ‘ಇಫ್ತಾರ್’ ಕೂಟಕ್ಕೆ ಏಕೆ ಹಾಜರಾಗಲಿಲ್ಲ? ಇದು ತನಿಖೆಯ ವಿಷಯವಾಗಿದೆ” ಎಂದು ವ್ಯಂಗ್ಯವಾಡಿದ್ದರು.

ತೇಜಸ್ವಿ ಪ್ರಸಾದ್ ಯಾದವ್ ಅವರ ದುರಹಂಕಾರ ಮತ್ತು ಲಾಲು ಪ್ರಸಾದ್ ಅವರ ದುಷ್ಕೃತ್ಯಗಳಿಂದಾಗಿ ಆರ್‌ಜೆಡಿಯ ಮಿತ್ರಪಕ್ಷಗಳು ಮೈತ್ರಿಕೂಟವನ್ನು ತೊರೆಯಲು ಪ್ರಾರಂಭಿಸುತ್ತವೆ ಎಂದು ಅವರು ಹೇಳಿದ್ದಾರೆ. “ಆರ್‌ಜೆಡಿಯ ಪೋಸ್ಟರ್‌ಗಳಲ್ಲಿ ಲಾಲು ಕಾಣೆಯಾಗಿದ್ದಾರೆ. ಅವರ ಮಗ ಕೂಡ ಅವರನ್ನು ನಿರ್ಲಕ್ಷಿಸುತ್ತಿದ್ದಾರೆ” ಎಂದು ಅವರು ಹೇಳಿದ್ದರು.

ಈ ಮಧ್ಯೆ, ಇಮಾರತ್-ಎ-ಶರಿಯಾ, ಫುಲ್ವಾರಿಷರೀಫ್ (ಪಾಟ್ನಾ) ಸೇರಿದಂತೆ ಏಳು ಮುಸ್ಲಿಂ ಸಂಘಟನೆಗಳು ಮುಖ್ಯಮಂತ್ರಿ ನಿತೀಶ್ ಕುಮಾರ್‌ ತಮ್ಮ 1 ಆನ್ ಮಾರ್ಗ್ ನಿವಾಸದಲ್ಲಿ ಆಯೋಜಿಸಿದ್ದ ‘ಇಫ್ತಾರ್’ ಕೂಟವನ್ನು ಬಹಿಷ್ಕರಿಸಿವೆ. ಬಹಿಷ್ಕಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ಜೆಡಿ (ಯು) ನಾಯಕರು ಆರ್‌ಜೆಡಿಯನ್ನು ದೂಷಿಸಿದ್ದಾರೆ.

ಆದಾಗ್ಯೂ, ಜೆಡಿ (ಯು) ನಾಯಕ, ಸಚಿವ ವಿಜಯ್ ಕುಮಾರ್ ಚೌಧರಿ, ನಿತೀಶ್ ಕುಮಾರ್ ಅವರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಭಾಗವಹಿಸಿದ್ದರು ಎಂದು ಹೇಳಿದ್ದಾರೆ. “ಈ ಸಂದರ್ಭದಲ್ಲಿ ಎಲ್ಲಾ ಮುಸ್ಲಿಂ ಸಂಘಟನೆಗಳನ್ನು ಆಹ್ವಾನಿಸುವುದು ಸಂಪ್ರದಾಯವಾಗಿದೆ” ಎಂದು ಅವರು ಹೇಳಿದ್ದಾರೆ.

ಜೆಡಿ (ಯು) ಎಂಎಲ್‌ಸಿ ಖಾಲಿದ್ ಅನ್ವರ್ ಮುಖ್ಯಮಂತ್ರಿಯ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದು, “ನಿತೀಶ್ ಕುಮಾರ್ ಅವರು ನವೆಂಬರ್ 2005 ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ‘ಇಫ್ತಾರ್’ ಕೂಟಗಳನ್ನು ಆಯೋಜಿಸುತ್ತಿದ್ದಾರೆ. ಈ ಕೂಟಗಳು ಸಂಪೂರ್ಣವಾಗಿ ಧಾರ್ಮಿಕವಾಗಿವೆ, ರಾಜಕೀಯವಲ್ಲ.” ಎಂದು ಹೇಳಿದ್ದರೆ.

ಸಂಸತ್ತಿನಲ್ಲಿ ವಕ್ಫ್ ಮಂಡಳಿ ತಿದ್ದುಪಡಿ ಮಸೂದೆಗೆ ಜೆಡಿ(ಯು) ಬೆಂಬಲ ನೀಡಿದ್ದೆ ಮುಸ್ಲಿಂ ಸಂಘಟನೆಗಳು ಮುಖ್ಯಮಂತ್ರಿಯ ಇಫ್ತಾರ್ ಕೂಟ ಬಹಿಷ್ಕರಿಸಲು ಕಾರಣ ಎಂದು ವರದಿಯಾಗಿದೆ. ಇಮಾರತ್-ಎ-ಶರಿಯಾ ಕೂಡ ಈ ವಿಷಯದ ಕುರಿತು ಹೇಳಿಕೆ ನೀಡಿತ್ತು.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರ ಎಲ್ಜೆಪಿ (ರಾಮ್ ವಿಲಾಸ್) ಮತ್ತು ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ಕೂಡ ಪ್ರತ್ಯೇಕ ‘ಇಫ್ತಾರ್’ ಕೂಟಗಳನ್ನು ಆಯೋಜಿಸಿದ್ದಾರೆ. ಪಾರಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲಾಲು ಪ್ರಸಾದ್ ಭಾಗವಹಿಸಿದ್ದರು, ಇದು ಆರ್ಜೆಡಿ ನೇತೃತ್ವದ ವಿರೋಧ ಪಕ್ಷದ ಮೈತ್ರಿಕೂಟದ ಕಡೆಗೆ ಅವರ ಒಲವು ಹೆಚ್ಚುತ್ತಿರುವುದನ್ನು ಸೂಚಿಸುತ್ತದೆ.

ಜೆಡಿ(ಯು) ಕಾರ್ಯಕ್ರಮವನ್ನು ಬಹಿಷ್ಕರಿಸಿದ ಮುಸ್ಲಿಂ ನಾಯಕರು ಸೋಮವಾರದ ಎಲ್‌ಜೆಪಿ (ಆರ್ವಿ) ಆಯೋಜಿಸಿದ್ದ ಇಫ್ತಾರ್ ಕೂಟವನ್ನು ಕೂಡಾ ತಪ್ಪಿಸಿಕೊಂಡಿದ್ದರು.

2023 ರಲ್ಲಿ ನಡೆಸಿದ ಜಾತಿ ಆಧಾರಿತ ಸಮೀಕ್ಷೆಯ ಪ್ರಕಾರ, ಬಿಹಾರದ ಒಟ್ಟು ಜನಸಂಖ್ಯೆಯ ಸುಮಾರು ಶೇ. 17.7 ರಷ್ಟು ಮುಸ್ಲಿಮರಿದ್ದಾರೆ. ಮುಸ್ಲಿಮರು ಬಿಜೆಪಿಯನ್ನು ವಿರೋಧಿಸುವವರು ಎಂದು ಹೆಚ್ಚಾಗಿ ನೋಡಲಾಗುತ್ತದೆಯಾದರೂ, ಜೆಡಿ(ಯು) ವಿವಿಧ ಕಲ್ಯಾಣ ಯೋಜನೆಗಳ ಮೂಲಕ ಅವರ ಬೆಂಬಲವನ್ನು ಪಡೆದುಕೊಂಡಿದೆ. ಮೀಸಲಾತಿ ಮತ್ತು ಸರ್ಕಾರಿ ಸೌಲಭ್ಯಗಳನ್ನು ವಿಸ್ತರಿಸುವುದರ ಜೊತೆಗೆ, ನಿತೀಶ್ ಕುಮಾರ್ ಅವರ ಆಡಳಿತವು ಒಬಿಸಿ ಮತ್ತು ಇಬಿಸಿ ಮುಸ್ಲಿಮರಿಗೆ ವಿದ್ಯಾರ್ಥಿವೇತನವನ್ನು ಸಹ ಪ್ರಾರಂಭಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ-2020: ಖಾಸಗೀಕರಣದ ವಿರುದ್ಧ NSUI, AISA, SFI, AISF, MSF, CRJD ವಿದ್ಯಾರ್ಥಿಗಳ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...