Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...