Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...