Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...