Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...