Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...