Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...