Homeಚಳವಳಿಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

ಸಾವರ್ಕರ್ ಮತ್ತು ನಾಥುರಾಮ್ ಗೂಡ್ಸೆ ನಡುವೆ ದೈಹಿಕ ಸಂಬಂಧವಿತ್ತು: ವಿವಾದ ಎಬ್ಬಿಸಿದ ಕಾಂಗ್ರೆಸ್‌ ಕೈಪಿಡಿ

- Advertisement -
- Advertisement -

ಅಖಿಲ ಭಾರತ ಕಾಂಗ್ರೆಸ್ ಸೇವಾ ದಳವು ಕಿರುಹೊತ್ತಗೆಯೊಂದನ್ನು ಪ್ರಕಟಿಸಿ ಹಂಚಿದ್ದು ವಿವಾದವನ್ನು ಹುಟ್ಟುಹಾಕಿದೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಹಿಂದೂ ಮಹಾಸಭಾ ಸಹ-ಸಂಸ್ಥಾಪಕ ವಿನಾಯಕ್ ದಾಮೋದರ್ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರೊಂದಿಗೆ “ಸಲಿಂಗಕಾಮ ಸಂಬಂಧ” ಹೊಂದಿದ್ದಾರೆಂದು ಬರೆಯಲಾಗಿದೆ.

ಸಾವರ್ಕರ್ ಅವರು ಗೂಡ್ಸೆ ಅವರೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುವಂತೆ ಪುರುಷರನ್ನು ಪ್ರಚೋದಿಸಿದ್ದರು ಎಂದು ಪುಸ್ತಕದಲ್ಲಿ ಬರೆಯಲಾಗಿದೆ. ಅಲ್ಲದೇ 1947 ರಲ್ಲಿ ದೇಶದ ವಿಭಜನೆಗೆ ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಅವರು ಕಾರಣ ಎಂದು ದೂಷಿಸಿದೆ.

‘ವೀರ್ ಸಾವರ್ಕರ್ ಕಿತ್ನೆ ವೀರ್? (ವೀರ್ ಸಾವರ್ಕರ್, ಎಷ್ಟು ಧೈರ್ಯಶಾಲಿ?) ’ಎಂಬ ಹೆಸರಿನ  ಕಿರುಪುಸ್ತಕವನ್ನು ಭೋಪಾಲ್‌ನ ಬೈರಘರ್‌ನಲ್ಲಿ ಗುರುವಾರ ನಡೆದ ಸೇವಾದಳದ ರಾಷ್ಟ್ರೀಯ ತರಬೇತಿ ಶಿಬಿರದ ಉದ್ಘಾಟನಾ ಸಂದರ್ಭದಲ್ಲಿ ಸ್ವಯಂಸೇವಕರ ನಡುವೆ ವಿತರಿಸಲಾಯಿತು.

ಕೈಪಿಡಿ

ಡೊಮಿನಿಕ್ ಲ್ಯಾಪಿಯರ್ ಮತ್ತು ಲ್ಯಾರಿ ಕಾಲಿನ್ಸ್ ಅವರ ಪುಸ್ತಕ ‘ಫ್ರೀಡಮ್ ಅಟ್ ಮಿಡ್ನೈಟ್’ ನಲ್ಲಿ ಉಲ್ಲೇಖಿಸಿರುವ ಒಂದು ಉದಾಹರಣೆಯನ್ನು ಉಲ್ಲೇಖಿಸಿರುವ ಕಿರುಪುಸ್ತಕವು, “ಬ್ರಹ್ಮಚಾರ್ಯವನ್ನು ತೆಗೆದುಕೊಳ್ಳುವ ಮೊದಲು, ಗೂಡ್ಸೆಯು ತಮ್ಮ ರಾಜಕೀಯ ಮಾರ್ಗದರ್ಶಕ ಸಾವರ್ಕರ್ ಅವರೊಂದಿಗೆ ಸಲಿಂಗಕಾಮಿ ಸಂಬಂಧವನ್ನು ಹೊಂದಿದ್ದರು.” ಎಂದು ಬರೆಯಲಾಗಿದೆ.

ಕಿರುಹೊತ್ತಿಗೆಯ ಪುಟ 14ರಲ್ಲಿ “ಅಲ್ಪಸಂಖ್ಯಾತ ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತೆ ಹಿಂದೂ ಪುರುಷರನ್ನು ಸಾವರ್ಕರ್ ಪ್ರಚೋದಿಸುತ್ತಿದ್ದರು” ಎಂದು ಹೇಳಲಾಗಿದೆ. ಸಾರ್ವಕರ್‌ ವಿಭಜನೆಯ ಬೀಜಗಳನ್ನು ಬಿತ್ತಿದರು ಮತ್ತು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ಪ್ರತಿಪಾದಿಸಿದರು ಎಂದು ಬರೆಯಲಾಗಿದೆ. “ಸಾವರ್ಕರ್ ಮತ್ತು ಅವರ ಸ್ನೇಹಿತರು ಕೋಮು ಗಲಭೆಯಲ್ಲಿ ಮುಸ್ಲಿಮರು ಕೊಲ್ಲಲ್ಪಡುವ ಬಗ್ಗೆ ತಿಳಿದಾಗಲೆಲ್ಲಾ ಸಂತೋಷದಿಂದ ನೃತ್ಯ ಮಾಡುತ್ತಿದ್ದರು” ಎಂದು ಕಿರುಪುಸ್ತಕ ಹೇಳುತ್ತದೆ.

’ಆರ್‌ಎಸ್‌ಎಸ್ ಮತ್ತು ಬಿಜೆಪಿ, ಕೆಲವು ಸಂಗತಿಗಳು ಮತ್ತು ಮಾಹಿತಿ’ ಎಂಬ ಶೀರ್ಷಿಕೆಯ ಎರಡನೇ ಕಿರುಪುಸ್ತಕದಲ್ಲಿ ಸೇವಾ ದಳವು ಮೊದಲಿನಿಂದಲೂ ಆರ್‌ಎಸ್‌ಎಸ್‌ ಸಂಘಟನೆಯು ಫ್ಯಾಸಿಸಂ ಮತ್ತು ನಾಜಿಸಂನಿಂದ ಸ್ಫೂರ್ತಿ ಪಡೆದಿದೆ ಎಂದು ಹೇಳುತ್ತದೆ. “ಆರ್‌ಎಸ್ಎಸ್ ಯಾವಾಗಲೂ ಪ್ರಸಿದ್ಧ ಸರ್ವಾಧಿಕಾರಿಗಳನ್ನು ಆರಾಧಿಸುತ್ತದೆ. 1930 ಮತ್ತು 1940 ರ ದಶಕದ ಸರ್ವಾಧಿಕಾರಿಗಳಾದ ಹಿಟ್ಲರ್ ಮತ್ತು ಮುಸೊಲಿನಿ”ಯನ್ನುಅನುಸರಿಸುತ್ತದೆ ಎಂದು ಕಿರುಪುಸ್ತಕ ಹೇಳುತ್ತದೆ.

ಬಿಜೆಪಿ ವಕ್ತಾರ ರಜನೀಶ್ ಅಗ್ರವಾಲ್ ಅವರು ಕಿರುಹೊತ್ತಗೆಯ ಬಗ್ಗೆ ಮಾತನಾಡಿ ಕಾಂಗ್ರೆಸ್‌ ಪಕ್ಷವು ಆಗಾಗೆ ತಪ್ಪು ಮಾಹಿತಿಯನ್ನು ಹರಡುತ್ತದೆ. ಹಿಟ್ಲರ್ ಮತ್ತು ಮುಸೊಲಿನಿಗಿಂತ ಮುನ್ನವೇ ಆರ್‌ಎಸ್‌ಎಸ್ 1925 ರಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರು ಸಾವರ್ಕರ್‌ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆದು ಅವರ ನೆನಪಿನಲ್ಲಿ ಅಂಚೆ ಚೀಟಿ ತಂದಿದ್ದರು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸೇವಾದಳದ ರಾಷ್ಟ್ರೀಯ ಅಧ್ಯಕ್ಷ ಲಾಲ್ಜಿ ದೇಸಾಯಿ ಕಿರುಪುಸ್ತಕದ ವಿಷಯಗಳನ್ನು ಸಮರ್ಥಿಸಿಕೊಂಡಿದ್ದಾರೆ. “ಪುಸ್ತಕದಲ್ಲಿನ ವಿವರಗಳು ಸತ್ಯಗಳನ್ನು ಆಧರಿಸಿವೆ. ಬಿಜೆಪಿಯಿಂದ ವೀರರಂತೆ ಕರೆಯಲ್ಪಟ್ಟ ಜನರ ವಾಸ್ತವತೆಯನ್ನು ಸಾರ್ವಜನಿಕರು ತಿಳಿದುಕೊಳ್ಳುವುದು ಬಹಳ ಮುಖ್ಯ” ಎಂದು ದೇಸಾಯಿ ಹೇಳಿದ್ದಾರೆ. ಇಂದು ನಮ್ಮ ದೇಶದಲ್ಲಿ ಪ್ರತಿಯೊಬ್ಬರೂ ತಮಗಿಷ್ಟ ಬಂದವರೊಡನೆ ಸಂಬಂಧಹೊಂದಲು ಕಾನೂನುಬದ್ಧ ಹಕ್ಕನ್ನು ಹೊಂದಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಶಿವಸೇನೆಯ ಸಂಜಯ್ ರಾವತ್ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೇವಾ ದಳದ ಕಿರುಪುಸ್ತಕದಲ್ಲಿ ‘ಗೂಡ್ಸೆ ಮತ್ತು ಸಾವರ್ಕರ್ ದೈಹಿಕ ಸಂಬಂಧವನ್ನು ಹೊಂದಿದ್ದರು’ ಎಂಬ ಹೇಳಿಕೆ ಬಂದಿದೆ. ವೀರ್ ಸಾವರ್ಕರ್ ಒಬ್ಬ ಮಹಾನ್ ವ್ಯಕ್ತಿ ಮತ್ತು ಒಬ್ಬ ಮಹಾನ್ ವ್ಯಕ್ತಿಯಾಗಿ ಉಳಿಯುತ್ತಾರೆ. ಒಂದು ವಿಭಾಗವು ಅವನ ವಿರುದ್ಧ ಮಾತನಾಡುತ್ತಲೇ ಇರುತ್ತದೆ, ಅವರು ಯಾರೇ ಆಗಿರಲಿ ಅದು ಅವರ ಮನಸ್ಸಿನಲ್ಲಿರುವ ಕೊಳೆಯನ್ನು ತೋರಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...