Homeಮುಖಪುಟಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

- Advertisement -
- Advertisement -

ಭಾರತ್ ಜೋಡೋ ಯಾತ್ರೆ ಮೂಲಕ ಪ್ರಚಲಿತದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ಕಿಡಿಕಾರಿದ್ದಾರೆ. ಅವರು ಕ್ಷಮಾಧಾನ ಅರ್ಜಿಗಳನ್ನು ಬರೆದರೆಂದು ಟೀಕಿಸಿದ್ದಾರೆ. ಇದನ್ನೆ ನೆಪವಾಗಿಟ್ಟುಕೊಂಡು ಬಿಜೆಪಿಯು “ಸಾವರ್ಕರ್ ಟೀಕಿಸುವ ಕಾಂಗ್ರೆಸ್‌ನೊಡನೆ ಉದ್ಧವ್ ಠಾಕ್ರೆ ಮೈತ್ರಿ ಮಾಡಿಕೊಂಡಿರುವುದೇಕೆ” ಎಂದು ಪ್ರಶ್ನಿಸಿದೆ. ರಾಹುಲ್ ಸಾವರ್ಕರ್‌ರವರನ್ನು ಟೀಕಿಸಿರುವುದರನ್ನು ವಿರೋಧಿಸುತ್ತಲೆ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವ ಸೇನಾ ಬಣದ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. “ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿಡಿ ಸಾವರ್ಕರ್ ಅವರ ಬಗ್ಗೆ ತಿರುಚಿದ ಇತಿಹಾಸವನ್ನು ಹರಡುತ್ತಿದೆ. ಆದರೆ ಮಹಾರಾಷ್ಟ್ರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಬಿಜೆಪಿಯ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆರೋಪಿಸಿದ್ದಾರೆ.

ಉದ್ಧವ್ ಠಾಕ್ರೆ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ಬಾಳಾಸಾಹೇಬ್ ಠಾಕ್ರೆ ಅವರು ಸಾವರ್ಕರ್ ಅವರ ಹಿಂದುತ್ವ ಸಿದ್ಧಾಂತವನ್ನು ತಮ್ಮ ಜೀವನದುದ್ದಕ್ಕೂ ಮುಂದಕ್ಕೆ ಕೊಂಡೊಯ್ದರು. ವೀರ್ ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸುವವರಿಗೆ ಬೆದರಿಕೆಯೊಡ್ಡಿದರು. ದುರದೃಷ್ಟವಶಾತ್, ಇಂದು ಅವರ ಕುಟುಂಬದ ನಾಯಕರು ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ” ಭಾಗವಹಿಸುತ್ತಿದ್ದಾರೆ ಎಂದು ಫಡ್ನವೀಸ್ ಕಿಡಿಕಾರಿದ್ದರು.

ವಿಡಿ ಸಾವರ್ಕರ್ ಬಗ್ಗೆ “ಅಪಾರ ಗೌರವ” ಎಂದಿರುವ ಉದ್ಧವ್ ಠಾಕ್ರೆ, ರಾಹುಲ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ ಎಂದಿದ್ದಾರೆ. ನಾವು ವಿಡಿ ಸಾವರ್ಕರ್‌ರವರನ್ನು ಗೌರವಿಸುತ್ತೇವೆ. ಬಿಜೆಪಿಯನವರು ನಮಗೆ ಪಾಠ ಹೇಳಲು ಬರಬೇಕಿಲ್ಲ. ಏಕೆಂದರೆ ಅವರು ಕಾಶ್ಮೀರದಲ್ಲಿ ಭಾರತ್ ಮಾತಾ ಕೀ ಜೈ ಎನ್ನದ ಪಿಡಿಪಿ ಪಕ್ಷ ಜೊತೆ ಸರ್ಕಾರ ರಚಿಸಿದ್ದರು ಎಂಬುದನ್ನು ಮರೆಯಬಾರದು ಎಂದಿದ್ದಾರೆ. ಅಲ್ಲದೆ ಬ್ರಿಟಿಷರಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಕೋಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಇದನ್ನೂ ಓದಿ; ಸಾವರ್ಕರ್ ಸಿ.ಐ.ಎ. ಏಜೆಂಟರಾಗಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...