Homeಮುಖಪುಟಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

ಸಾವರ್ಕರ್ ಕ್ಷಮೆ ಬೇಡಿದ್ದರು: ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಪ್ರತಿಕ್ರಿಯೆ ಹೀಗಿತ್ತು..

- Advertisement -
- Advertisement -

ಭಾರತ್ ಜೋಡೋ ಯಾತ್ರೆ ಮೂಲಕ ಪ್ರಚಲಿತದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾವರ್ಕರ್ ವಿರುದ್ಧ ಕಿಡಿಕಾರಿದ್ದಾರೆ. ಅವರು ಕ್ಷಮಾಧಾನ ಅರ್ಜಿಗಳನ್ನು ಬರೆದರೆಂದು ಟೀಕಿಸಿದ್ದಾರೆ. ಇದನ್ನೆ ನೆಪವಾಗಿಟ್ಟುಕೊಂಡು ಬಿಜೆಪಿಯು “ಸಾವರ್ಕರ್ ಟೀಕಿಸುವ ಕಾಂಗ್ರೆಸ್‌ನೊಡನೆ ಉದ್ಧವ್ ಠಾಕ್ರೆ ಮೈತ್ರಿ ಮಾಡಿಕೊಂಡಿರುವುದೇಕೆ” ಎಂದು ಪ್ರಶ್ನಿಸಿದೆ. ರಾಹುಲ್ ಸಾವರ್ಕರ್‌ರವರನ್ನು ಟೀಕಿಸಿರುವುದರನ್ನು ವಿರೋಧಿಸುತ್ತಲೆ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸದ್ಯಕ್ಕೆ ಮಹಾರಾಷ್ಟ್ರದಲ್ಲಿ ಯಾತ್ರೆಯ ಭಾಗವಾಗಿ ಬುಡಕಟ್ಟು ಹೋರಾಟಗಾರ ಬಿರ್ಸಾ ಮುಂಡಾ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಬ್ರಿಟಿಷರು ಬಿರ್ಸಾ ಮುಂಡಾರವರಿಗೆ ಭೂಮಿ ನೀಡುವುದಾಗಿ ಆಮಿಷವೊಡ್ಡಿದರು ಸಹ ಅವರು ತಲೆಬಾಗಲು ನಿರಾಕರಿಸಿದರು; ಬ್ರೀಟಿಷರ ವಿರುದ್ಧ ದಿಟ್ಟ ಹೋರಾಟ ನಡೆಸಿ ಸಾವನ್ನು ಆರಿಸಿಕೊಂಡರು. ನಾವು, ಕಾಂಗ್ರೆಸ್ ಪಕ್ಷ ಅವರನ್ನು ನಮ್ಮ ಆರಾಧ್ಯ ದೈವವೆಂದು ಪರಿಗಣಿಸುತ್ತೇವೆ. ಆದರೆ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದು ಪಿಂಚಣಿ ಸ್ವೀಕರಿಸಿದ ಸಾವರ್ಕರ್‌ ಜೀ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಆರಾಧ್ಯ ದೈವವಾಗಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವ ಸೇನಾ ಬಣದ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. “ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿಡಿ ಸಾವರ್ಕರ್ ಅವರ ಬಗ್ಗೆ ತಿರುಚಿದ ಇತಿಹಾಸವನ್ನು ಹರಡುತ್ತಿದೆ. ಆದರೆ ಮಹಾರಾಷ್ಟ್ರದ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಬಿಜೆಪಿಯ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆರೋಪಿಸಿದ್ದಾರೆ.

ಉದ್ಧವ್ ಠಾಕ್ರೆ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “ಬಾಳಾಸಾಹೇಬ್ ಠಾಕ್ರೆ ಅವರು ಸಾವರ್ಕರ್ ಅವರ ಹಿಂದುತ್ವ ಸಿದ್ಧಾಂತವನ್ನು ತಮ್ಮ ಜೀವನದುದ್ದಕ್ಕೂ ಮುಂದಕ್ಕೆ ಕೊಂಡೊಯ್ದರು. ವೀರ್ ಸಾವರ್ಕರ್ ಅವರನ್ನು ಕೀಳಾಗಿ ಬಿಂಬಿಸುವವರಿಗೆ ಬೆದರಿಕೆಯೊಡ್ಡಿದರು. ದುರದೃಷ್ಟವಶಾತ್, ಇಂದು ಅವರ ಕುಟುಂಬದ ನಾಯಕರು ರಾಹುಲ್ ಗಾಂಧಿಯವರ ಯಾತ್ರೆಯಲ್ಲಿ” ಭಾಗವಹಿಸುತ್ತಿದ್ದಾರೆ ಎಂದು ಫಡ್ನವೀಸ್ ಕಿಡಿಕಾರಿದ್ದರು.

ವಿಡಿ ಸಾವರ್ಕರ್ ಬಗ್ಗೆ “ಅಪಾರ ಗೌರವ” ಎಂದಿರುವ ಉದ್ಧವ್ ಠಾಕ್ರೆ, ರಾಹುಲ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ ಎಂದಿದ್ದಾರೆ. ನಾವು ವಿಡಿ ಸಾವರ್ಕರ್‌ರವರನ್ನು ಗೌರವಿಸುತ್ತೇವೆ. ಬಿಜೆಪಿಯನವರು ನಮಗೆ ಪಾಠ ಹೇಳಲು ಬರಬೇಕಿಲ್ಲ. ಏಕೆಂದರೆ ಅವರು ಕಾಶ್ಮೀರದಲ್ಲಿ ಭಾರತ್ ಮಾತಾ ಕೀ ಜೈ ಎನ್ನದ ಪಿಡಿಪಿ ಪಕ್ಷ ಜೊತೆ ಸರ್ಕಾರ ರಚಿಸಿದ್ದರು ಎಂಬುದನ್ನು ಮರೆಯಬಾರದು ಎಂದಿದ್ದಾರೆ. ಅಲ್ಲದೆ ಬ್ರಿಟಿಷರಿಂದ ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಅವರು ಹೇಳಿದ್ದಾರೆ.

ಇನ್ನೊಂದೆಡೆ ರಾಹುಲ್ ಗಾಂಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಕೋಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಸಾವರ್ಕರ್ ಬರೆದಿದ್ದ ಕ್ಷಮಾಪಣಾ ಪತ್ರಗಳನ್ನು ಪ್ರದರ್ಶಿಸಿದ್ದಾರೆ. ‘ಸರ್, ನಿಮ್ಮ ಅತ್ಯಂತ ವಿಧೇಯ ಸೇವಕನಾಗಿ ಉಳಿಯಲು ನಾನು ಬೇಡಿಕೊಳ್ಳುತ್ತೇನೆ’ ಎಂದು ಬರೆದ ಸಾವರ್ಕರ್ ಅದಕ್ಕೆ ಸಹಿ ಹಾಕಿದ್ದಾರೆ. ಕಾರಣ ಅವರು ಪುಕ್ಕಲರಾಗಿದ್ದರು, ಅವರು ಬ್ರಿಟಿಷರಿಗೆ ಹೆದರುತ್ತಿದ್ದರು. ಮಹಾತ್ಮ ಗಾಂಧಿ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯ್ ಪಟೇಲ್‌ರವರು ಹಲವು ವರ್ಷಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. ಆದರೆ ಅವರೆಂದು ಸಾವರ್ಕರ್ ರೀತಿ ಕ್ಷಮಾಪಣ ಪತ್ರಗಳನ್ನು ಬರೆದಿರಲಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ಈ ಕುರಿತು ಕಾಂಗ್ರೆಸ್ ಚರ್ಚೆಗೆ ಸಿದ್ದವಿದೆ ಎಂದಿದ್ದಾರೆ.

ಇದನ್ನೂ ಓದಿ; ಸಾವರ್ಕರ್ ಸಿ.ಐ.ಎ. ಏಜೆಂಟರಾಗಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...