Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಬ್ರಿಟಿಷರ ವಿರುದ್ಧ ಹೋರಾಡಿದ್ದಕ್ಕಾಗಿ ಧೈರ್ಯವಾಗಿ ನೇಣುಗಂಬಕ್ಕೇರಿ ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗುತ್ತಾರೆ ಭಗತ್‌ ಸಿಂಗ್‌ ಮತ್ತು ಆತನ ಸಂಗಾತಿಗಳು.. ಆದರೆ ಸಾವರ್ಕರ್‌ ಮಾಡಿದ್ದೇನು?

- Advertisement -
- Advertisement -
  • ಎಚ್.ಎಸ್ ದೊರೆಸ್ವಾಮಿಯವರ ಹಳೆಯ ಲೇಖನ

ಸಾವಿರಾರು ಜನ ವೀರ ಸಾವರ್ಕರ್ ಅವರನ್ನು ಟೀಕಿಸಿದ್ದಾರೆ. ಸಾವಿರದ ಏಳನೆಯವನು ನಾನು. ಆದರೆ ಬಿಜೆಪಿ, ಆರೆಸ್ಸೆಸ್‍ನವರು ನನ್ನನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದಾರೆ? ನಾನು ಸಾರ್ವಜನಿಕ ಕಾರ್ಯದಲ್ಲಿ ಸಕ್ರಿಯನಾಗಿರುವುದೇ ತಪ್ಪೇ? ಯಾರದೇ ಅನುಮತಿ ಪಡೆದು ಸಾರ್ವಜನಿಕ ಜೀವನಕ್ಕೆ ಬಂದವನು ನಾನಲ್ಲ. ನನ್ನ ಕೊನೆಯುಸಿರುವವರೆಗೂ ನಾನು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ನನ್ನ ಅಳಿಲುಸೇವೆ ಸಲ್ಲಿಸುತ್ತಾ ಹೋಗುತ್ತೇನೆ.

ವೀರ ಸಾವರ್ಕರ್ ಆರಂಭದ ದಿನಗಳಲ್ಲಿ ವೀರರಂತೆಯೇ ವರ್ತಿಸಿದವರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದಲೂ ಭಾರತದ ಬಿಡುಗಡೆಗೆ ಅಪಾರ ಸೇವೆ ಸಲ್ಲಿಸಿದರು. 20 ಬಂದೂಕುಗಳನ್ನು ಭಾರತದಲ್ಲಿದ್ದ ತಮ್ಮನಿಗೆ ಕಳಿಸಿದರು. ಅದನ್ನು ಅವರು ಜಾಗರೂಕತೆಯಿಂದ ಹಂಚುತ್ತಿದ್ದರು. ಈ ಕಾರ್ಯದಲ್ಲಿ ತೊಡಗಿದ್ದಾಗ ಅವರು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರು. ಅವರ ವಿರುದ್ಧ ಕೇಸಾಯಿತು. ಸಾವರ್ಕರ್‌ರನ್ನು ಬ್ರಿಟನ್‍ನಲ್ಲೇ ಬಂಧಿಸಲಾಯಿತು. ಫ್ರಾನ್ಸಿನ ಸರಹದ್ದಿನ ಊರಿನ ಹತ್ತಿರ ಹಡಗು ಸಂಚರಿಸುತ್ತಿದ್ದಾಗ, ಸಾವರ್ಕರ್ ಸಮುದ್ರಕ್ಕೆ ಹಾರಿ ಈಜುತ್ತಾ ಫ್ರೆಂಚ್ ದಡದತ್ತ ಧಾವಿಸಲಾರಂಭಿಸಿದರು. ಆದರೆ ಈಜುಬಲ್ಲ ಬ್ರಿಟಿಷ್ ಪೊಲೀಸರು ಅವರನ್ನು ಅಡ್ಡಗಟ್ಟಿ ಬಂಧಿಸಿ ಭಾರತಕ್ಕೆ ತಂದರು. ಅವರ ಮೇಲೆ ಮೊಕದ್ದಮೆ ಆಗಿ 1915ರಲ್ಲಿ ಆರು ವರ್ಷಗಳ ಕರಿನೀರು ಶಿಕ್ಷೆ ವಿಧಿಸಲಾಯಿತು.

ಆದರೆ ಸಾವರ್ಕರ್‍ರಿಗೆ ಮೂರು ವರ್ಷಗಳ ಕರಿನೀರು ಶಿಕ್ಷೆ ಅನುಭವಿಸುವ ವೇಳೆಗಾಗಲೆ ಮನಸ್ಥಿತಿ ಬದಲಾಯಿತು. ಹೋರಾಟ, ಬಂಧನ, ಈ ಜೈಲುಶಿಕ್ಷೆ ಸಾಕು ಸಾಕೆನಿಸಿತು. ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರ ಬರೆದು ಬಿಡುಗಡೆ ಕೋರಿದರು.

‘ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ’ ಎಂದು ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು.

ಸಾವರ್ಕರರಿಗೆ ಈ ಬಗೆಯ ಭಯ ಹೇಗೆ, ಏಕೆ ಉಂಟಾಯಿತು? ಬ್ರಿಟಿಷರು ಹಾಕಿದ ಷರತ್ತುಗಳನ್ನೆಲ್ಲ ಹೇಗೆ ಒಪ್ಪಿಕೊಂಡರು? ಮತ್ತು ಪಾಲನೆ ಮಾಡಿದರು? ಅರ್ಜುನನಿಗೆ ಯುದ್ಧಕ್ಕೆ ಹೋದಾಗ ಹೇಗೆ ಬುದ್ಧಿ ಗ್ಲಾನಿಯಾಯಿತೊ ಹಾಗೆ ಸಾವರ್ಕರರಿಗೂ ಆಯಿತೇನೊ. ಅರ್ಜುನನಿಗೆ ಸ್ವಧರ್ಮ ಪಾಲನೆ ಮಾಡುವಂತೆ ಹೇಳಲು ಕೃಷ್ಣ ಇದ್ದ. ಸಾವರ್ಕರರಿಗೆ ಈ ನೆರವು ಸಿಗಲಿಲ್ಲ. ಸ್ವಧರ್ಮ ಅವರು ಪಾಲನೆ ಮಾಡಲಿಲ್ಲ. ಹೀಗಾಗಿ ವೀರ ಸಾವರ್ಕರರು ಹೇಡಿ ಸಾವರ್ಕರರಾದರು. ಇದ್ದ ವಿಚಾರವನ್ನು ಇದ್ದಹಾಗೆ ಹೇಳಿದರೆ, ಹಿಂದೂತ್ವದ ಭೂತ ಹಿಡಿದ ಈ ಬಿಜೆಪಿ ಜನ, ಹಾಗೆ ಹೇಳಿದವರ ಮೇಲೆ ಎಲ್ಲರೂ ತಿರುಗಿಬೀಳುತ್ತಾರೆ, ಸಾವರ್ಕರರಿಗೆ ಅವಹೇಳನ ಮಾಡುತ್ತೀರಿ ಎಂದು ಆಪಾದನೆ ಹೊರಿಸುತ್ತಾರೆ.

ಹೋಗಲಿ ಇನ್ನುಮುಂದೆ ವೀರ ಸಾವರ್ಕರರನ್ನು ಹೇಗೆ ಕರೆಯಬೇಕು, ಅದನ್ನಾದರೂ ಹೇಳಿಬಿಡಿ. ಸಾವರ್ಕರರು ತಾನಾಗಿಯೇ ಬ್ರಿಟಿಷರಿಗೆ ಶರಣುಹೋಗಿ ವೀರಚಕ್ರವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರನ್ನು ‘ವೀರ’ ಎಂದು ಹೇಳುವುದು ಅವರನ್ನು ಅಪಹಾಸ್ಯ ಮಾಡಿದಂತೆ ಆಗುತ್ತೆ.

ಆದ್ದರಿಂದ ಸಾವರ್ಕರರನ್ನು ಯಾವ ಸಾವರ್ಕರ್ ಎಂದು ಕರೆಯಬೇಕೆಂಬುದನ್ನು ಆರ್‌ಎಸ್‍ಎಸ್ ಮತ್ತು ಬಿಜೆಪಿ ನಾಯಕರೇ ತೀರ್ಮಾನ ಮಾಡಿ ಜನತೆಗೆ ಹೇಳಲಿ. ಬೇಕಾದರೆ ಅವರನ್ನು ಮಾಜಿ ವೀರ ಸಾವರ್ಕರ್ ಎಂದು ಕರೆಯಬಹುದು.

ಸುಭಾಷ್‍ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಬಗೆಗೆ ಏನು ಬಲ್ಲಿರಿ? ಎಂದು ನನ್ನನ್ನು ಕೇಳಿದ್ದಾರೆ. ಇನ್ನು ಕೆಲವರು `ಅವರ ಬಗೆಗೂ ನನ್ನಲ್ಲಿ ವೀರ ಸಾವರ್ಕರ್ ಬಗೆಗಿರುವ ಭಾವನೆಗಳೇ ಇವೆಯೇ?’ ಎಂದು ಕೇಳಿದ್ದಾರೆ. ನಾನು ಸುಭಾಷ್‍ಚಂದ್ರ ಬೋಸ್‍ರ ಬಗೆಗೆ 30 ಪುಟಗಳ ಜೀವನಚರಿತ್ರೆ ಬರೆದಿದ್ದೇನೆ. ಅದರಲ್ಲಿ ಅವರ ಗುಣಗಾನ ಮಾಡಿದ್ದೇನೆ. ಮೂದಲಿಕೆಯ ಒಂದೂ ಮಾತು ಬರೆದಿಲ್ಲ.

ಭಗತ್‍ಸಿಂಗ್ ಬಗೆಗೆ ಪುಸ್ತಕ ಬರೆದಿಲ್ಲ. ಲೇಖನ ಬರೆದಿದ್ದೇನೆ. ಇಂಗ್ಲಿಷ್ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ಕೊಂದರೆ ಬ್ರಿಟಿಷರು ತಾವಾಗಿಯೇ ದೇಶ ಬಿಟ್ಟುಹೋಗುತ್ತಾರೆಂಬ ವಿಚಾರ ಭಗತ್‍ಸಿಂಗ್ ಮೊದಲಾದ ಕೆಲವರದಾಗಿತ್ತು. ಭಗತ್‍ಸಿಂಗ್ ಮತ್ತು ಇಬ್ಬರು ಸ್ನೇಹಿತರು ಬಾಂಬ್ ತೆಗೆದುಕೊಂಡು ಅಧಿವೇಶನ ನಡೆಯುತ್ತಿದ್ದ ಕಡೆಗೆ ಹೋಗಿ ಪಾಸ್ ಪಡೆದು ವಿಸಿಟರ್ಸ್ ಗ್ಯಾಲರಿಯಲ್ಲಿ ಕುಳಿತುಕೊಳ್ಳುತ್ತಾರೆ. ಸಮಯ ನೋಡಿ ಯಾರಿಗೂ ಅಪಾಯವಾಗದಂತೆ ಬಾಂಬ್ ಎಸೆದು ತಮ್ಮತ್ತ ಎಲ್ಲರ ಗಮನ ಸೆಳೆದು ಘೋಷಣೆ ಕೂಗುತ್ತಾರೆ. ತಾವೇ ಬಾಂಬ್ ಎಸೆದಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಳ್ಳುತ್ತಾರೆ. ಆ ಮೂವರಿಗೂ ಗಲ್ಲುಶಿಕ್ಷೆ ವಿಧಿಸಲಾಗುತ್ತದೆ.

ಭಗತ್‍ಸಿಂಗ್ ತಂದೆ ವೈಸ್‍ರಾಯ್‍ರಿಗೆ ಪತ್ರ ಬರೆದು ತಮ್ಮ ಮಗನ ಜೀವದಾನ ಕೇಳುತ್ತಾರೆ. ಆ ವಿಷಯ ತಿಳಿಯುತ್ತಲೂ ಭಗತ್‍ಸಿಂಗ್ ತನ್ನ ತಂದೆಯ ಬಗ್ಗೆ ಹೌಹಾರಿ ಬೀಳುತ್ತಾರೆ. ‘ಮಗನ ಮೇಲಿನ ಮೋಹದಿಂದ ಶತ್ರುವಿನಲ್ಲಿ ನನ್ನ ಪ್ರಾಣಭಿಕ್ಷೆ ಕೇಳಿದ ನಿಮಗೆ ನಾಚಿಕೆಯಾಗುವುದಿಲ್ಲವೇ’ ಎಂದು ತಂದೆಗೆ ತರಾಟೆಗೆ ತೆಗೆದುಕೊಳ್ಳುತ್ತಾರೆ. ಧೈರ್ಯವಾಗಿ ನೇಣುಗಂಬಕ್ಕೇರಿ ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗುತ್ತಾರೆ ಆ ಮೂವರು.

ಇನ್ನೊಂದು ವಿಷಯ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ಸಿನವರ ಪ್ರಭಾವ ಹೆಚ್ಚಿನದಾಗಿತ್ತಾದರೂ ಝಾನ್ಸಿರಾಣಿ ಲಕ್ಷ್ಮೀಬಾಯಿ, ಕಿತ್ತೂರುರಾಣಿ ಚೆನ್ನಮ್ಮ, ಟಿಪ್ಪೂಸುಲ್ತಾನ್ ಮೊದಲಾದವರ ಪಾತ್ರವೂ ಪ್ರಶಂಸನೀಯವೇ. ಅಂತೆಯೇ ಉಗ್ರಗಾಮಿಗಳ ಪಾತ್ರವೂ ಅಷ್ಟೇ ಪ್ರಶಂಸನೀಯ. ಇವರ ಹೋರಾಟದ ಸ್ವರೂಪ ಬೇರೆಯದಾಗಿದ್ದರೂ ಈ ಬಣದವರ ದೇಶಾಭಿಮಾನ ಎಳ್ಳಷ್ಟೂ ಕಡಿಮೆಯಾದುದಲ್ಲ. ಅವರ್ಯಾರು ತಮ್ಮ ದೇಶಪ್ರೇಮದ ಬದ್ಧತೆಯಿಂದ ಯಾವತ್ತೂ ಹಿಂದೆ ಸರಿದವರಲ್ಲ.


ಇದನ್ನೂ ಓದಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೋಲರಿಯದ ದಣಿವರಿಯದ ನಿರ್ಭಿಡೆಯ ಸ್ವಾತಂತ್ರ್ಯ ಯೋಧರಾದ ದೊರೆಸ್ವಾಮಿಯವರು ಸೂಚಿಸಿರುವಂತೆ, ಬಿಜೆಪಿ-ಸಂಘ ಪರಿವಾರದವರು ಸಾವರ್ಕರರನ್ನು ‘ಮಾಜಿ ವೀರ ಸಾವರ್ಕರ್’ ಎಂದು ಕರೆಯಲು ಬಯಸುವುದಾದರೆ ನಮ್ಮ ಅಭ್ಯಂತರವಿಲ್ಲ. ಮುಂದೆ ಬೇಕಾದರೆ ನಾವೂ ಹಾಗೆ ಕರೆಯುವ ಬಗ್ಗೆ ಯೋಚಿಸಬಹುದು.

    ಅಂಗೈ ಮೇಲಿನ ಸತ್ಯವನ್ನು ಒಪ್ಪದೆ, ಸತ್ಯ ಹೇಳುವವರನ್ನು ನಿಂದಿಸಿ ಮೂದಲಿಸುವುದರಿಂದ ಸುಳ್ಳು ಸತ್ಯವಾಗುವುದಿಲ್ಲ, ಮಾಜಿ ವೀರ ಸಾವರ್ಕರ್ ‘ವೀರಚಕ್ರ’ಕ್ಕೆ ಅರ್ಹರಾಗುವುದಿಲ್ಲ.

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...