Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಬ್ರಿಟಿಷರ ವಿರುದ್ಧ ಹೋರಾಡಿದ್ದಕ್ಕಾಗಿ ಧೈರ್ಯವಾಗಿ ನೇಣುಗಂಬಕ್ಕೇರಿ ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗುತ್ತಾರೆ ಭಗತ್‌ ಸಿಂಗ್‌ ಮತ್ತು ಆತನ ಸಂಗಾತಿಗಳು.. ಆದರೆ ಸಾವರ್ಕರ್‌ ಮಾಡಿದ್ದೇನು?

- Advertisement -
- Advertisement -
  • ಎಚ್.ಎಸ್ ದೊರೆಸ್ವಾಮಿಯವರ ಹಳೆಯ ಲೇಖನ

ಸಾವಿರಾರು ಜನ ವೀರ ಸಾವರ್ಕರ್ ಅವರನ್ನು ಟೀಕಿಸಿದ್ದಾರೆ. ಸಾವಿರದ ಏಳನೆಯವನು ನಾನು. ಆದರೆ ಬಿಜೆಪಿ, ಆರೆಸ್ಸೆಸ್‍ನವರು ನನ್ನನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದಾರೆ? ನಾನು ಸಾರ್ವಜನಿಕ ಕಾರ್ಯದಲ್ಲಿ ಸಕ್ರಿಯನಾಗಿರುವುದೇ ತಪ್ಪೇ? ಯಾರದೇ ಅನುಮತಿ ಪಡೆದು ಸಾರ್ವಜನಿಕ ಜೀವನಕ್ಕೆ ಬಂದವನು ನಾನಲ್ಲ. ನನ್ನ ಕೊನೆಯುಸಿರುವವರೆಗೂ ನಾನು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ನನ್ನ ಅಳಿಲುಸೇವೆ ಸಲ್ಲಿಸುತ್ತಾ ಹೋಗುತ್ತೇನೆ.

ವೀರ ಸಾವರ್ಕರ್ ಆರಂಭದ ದಿನಗಳಲ್ಲಿ ವೀರರಂತೆಯೇ ವರ್ತಿಸಿದವರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದಲೂ ಭಾರತದ ಬಿಡುಗಡೆಗೆ ಅಪಾರ ಸೇವೆ ಸಲ್ಲಿಸಿದರು. 20 ಬಂದೂಕುಗಳನ್ನು ಭಾರತದಲ್ಲಿದ್ದ ತಮ್ಮನಿಗೆ ಕಳಿಸಿದರು. ಅದನ್ನು ಅವರು ಜಾಗರೂಕತೆಯಿಂದ ಹಂಚುತ್ತಿದ್ದರು. ಈ ಕಾರ್ಯದಲ್ಲಿ ತೊಡಗಿದ್ದಾಗ ಅವರು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರು. ಅವರ ವಿರುದ್ಧ ಕೇಸಾಯಿತು. ಸಾವರ್ಕರ್‌ರನ್ನು ಬ್ರಿಟನ್‍ನಲ್ಲೇ ಬಂಧಿಸಲಾಯಿತು. ಫ್ರಾನ್ಸಿನ ಸರಹದ್ದಿನ ಊರಿನ ಹತ್ತಿರ ಹಡಗು ಸಂಚರಿಸುತ್ತಿದ್ದಾಗ, ಸಾವರ್ಕರ್ ಸಮುದ್ರಕ್ಕೆ ಹಾರಿ ಈಜುತ್ತಾ ಫ್ರೆಂಚ್ ದಡದತ್ತ ಧಾವಿಸಲಾರಂಭಿಸಿದರು. ಆದರೆ ಈಜುಬಲ್ಲ ಬ್ರಿಟಿಷ್ ಪೊಲೀಸರು ಅವರನ್ನು ಅಡ್ಡಗಟ್ಟಿ ಬಂಧಿಸಿ ಭಾರತಕ್ಕೆ ತಂದರು. ಅವರ ಮೇಲೆ ಮೊಕದ್ದಮೆ ಆಗಿ 1915ರಲ್ಲಿ ಆರು ವರ್ಷಗಳ ಕರಿನೀರು ಶಿಕ್ಷೆ ವಿಧಿಸಲಾಯಿತು.

ಆದರೆ ಸಾವರ್ಕರ್‍ರಿಗೆ ಮೂರು ವರ್ಷಗಳ ಕರಿನೀರು ಶಿಕ್ಷೆ ಅನುಭವಿಸುವ ವೇಳೆಗಾಗಲೆ ಮನಸ್ಥಿತಿ ಬದಲಾಯಿತು. ಹೋರಾಟ, ಬಂಧನ, ಈ ಜೈಲುಶಿಕ್ಷೆ ಸಾಕು ಸಾಕೆನಿಸಿತು. ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರ ಬರೆದು ಬಿಡುಗಡೆ ಕೋರಿದರು.

‘ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ’ ಎಂದು ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು.

ಸಾವರ್ಕರರಿಗೆ ಈ ಬಗೆಯ ಭಯ ಹೇಗೆ, ಏಕೆ ಉಂಟಾಯಿತು? ಬ್ರಿಟಿಷರು ಹಾಕಿದ ಷರತ್ತುಗಳನ್ನೆಲ್ಲ ಹೇಗೆ ಒಪ್ಪಿಕೊಂಡರು? ಮತ್ತು ಪಾಲನೆ ಮಾಡಿದರು? ಅರ್ಜುನನಿಗೆ ಯುದ್ಧಕ್ಕೆ ಹೋದಾಗ ಹೇಗೆ ಬುದ್ಧಿ ಗ್ಲಾನಿಯಾಯಿತೊ ಹಾಗೆ ಸಾವರ್ಕರರಿಗೂ ಆಯಿತೇನೊ. ಅರ್ಜುನನಿಗೆ ಸ್ವಧರ್ಮ ಪಾಲನೆ ಮಾಡುವಂತೆ ಹೇಳಲು ಕೃಷ್ಣ ಇದ್ದ. ಸಾವರ್ಕರರಿಗೆ ಈ ನೆರವು ಸಿಗಲಿಲ್ಲ. ಸ್ವಧರ್ಮ ಅವರು ಪಾಲನೆ ಮಾಡಲಿಲ್ಲ. ಹೀಗಾಗಿ ವೀರ ಸಾವರ್ಕರರು ಹೇಡಿ ಸಾವರ್ಕರರಾದರು. ಇದ್ದ ವಿಚಾರವನ್ನು ಇದ್ದಹಾಗೆ ಹೇಳಿದರೆ, ಹಿಂದೂತ್ವದ ಭೂತ ಹಿಡಿದ ಈ ಬಿಜೆಪಿ ಜನ, ಹಾಗೆ ಹೇಳಿದವರ ಮೇಲೆ ಎಲ್ಲರೂ ತಿರುಗಿಬೀಳುತ್ತಾರೆ, ಸಾವರ್ಕರರಿಗೆ ಅವಹೇಳನ ಮಾಡುತ್ತೀರಿ ಎಂದು ಆಪಾದನೆ ಹೊರಿಸುತ್ತಾರೆ.

ಹೋಗಲಿ ಇನ್ನುಮುಂದೆ ವೀರ ಸಾವರ್ಕರರನ್ನು ಹೇಗೆ ಕರೆಯಬೇಕು, ಅದನ್ನಾದರೂ ಹೇಳಿಬಿಡಿ. ಸಾವರ್ಕರರು ತಾನಾಗಿಯೇ ಬ್ರಿಟಿಷರಿಗೆ ಶರಣುಹೋಗಿ ವೀರಚಕ್ರವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರನ್ನು ‘ವೀರ’ ಎಂದು ಹೇಳುವುದು ಅವರನ್ನು ಅಪಹಾಸ್ಯ ಮಾಡಿದಂತೆ ಆಗುತ್ತೆ.

ಆದ್ದರಿಂದ ಸಾವರ್ಕರರನ್ನು ಯಾವ ಸಾವರ್ಕರ್ ಎಂದು ಕರೆಯಬೇಕೆಂಬುದನ್ನು ಆರ್‌ಎಸ್‍ಎಸ್ ಮತ್ತು ಬಿಜೆಪಿ ನಾಯಕರೇ ತೀರ್ಮಾನ ಮಾಡಿ ಜನತೆಗೆ ಹೇಳಲಿ. ಬೇಕಾದರೆ ಅವರನ್ನು ಮಾಜಿ ವೀರ ಸಾವರ್ಕರ್ ಎಂದು ಕರೆಯಬಹುದು.

ಸುಭಾಷ್‍ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಬಗೆಗೆ ಏನು ಬಲ್ಲಿರಿ? ಎಂದು ನನ್ನನ್ನು ಕೇಳಿದ್ದಾರೆ. ಇನ್ನು ಕೆಲವರು `ಅವರ ಬಗೆಗೂ ನನ್ನಲ್ಲಿ ವೀರ ಸಾವರ್ಕರ್ ಬಗೆಗಿರುವ ಭಾವನೆಗಳೇ ಇವೆಯೇ?’ ಎಂದು ಕೇಳಿದ್ದಾರೆ. ನಾನು ಸುಭಾಷ್‍ಚಂದ್ರ ಬೋಸ್‍ರ ಬಗೆಗೆ 30 ಪುಟಗಳ ಜೀವನಚರಿತ್ರೆ ಬರೆದಿದ್ದೇನೆ. ಅದರಲ್ಲಿ ಅವರ ಗುಣಗಾನ ಮಾಡಿದ್ದೇನೆ. ಮೂದಲಿಕೆಯ ಒಂದೂ ಮಾತು ಬರೆದಿಲ್ಲ.

ಭಗತ್‍ಸಿಂಗ್ ಬಗೆಗೆ ಪುಸ್ತಕ ಬರೆದಿಲ್ಲ. ಲೇಖನ ಬರೆದಿದ್ದೇನೆ. ಇಂಗ್ಲಿಷ್ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ಕೊಂದರೆ ಬ್ರಿಟಿಷರು ತಾವಾಗಿಯೇ ದೇಶ ಬಿಟ್ಟುಹೋಗುತ್ತಾರೆಂಬ ವಿಚಾರ ಭಗತ್‍ಸಿಂಗ್ ಮೊದಲಾದ ಕೆಲವರದಾಗಿತ್ತು. ಭಗತ್‍ಸಿಂಗ್ ಮತ್ತು ಇಬ್ಬರು ಸ್ನೇಹಿತರು ಬಾಂಬ್ ತೆಗೆದುಕೊಂಡು ಅಧಿವೇಶನ ನಡೆಯುತ್ತಿದ್ದ ಕಡೆಗೆ ಹೋಗಿ ಪಾಸ್ ಪಡೆದು ವಿಸಿಟರ್ಸ್ ಗ್ಯಾಲರಿಯಲ್ಲಿ ಕುಳಿತುಕೊಳ್ಳುತ್ತಾರೆ. ಸಮಯ ನೋಡಿ ಯಾರಿಗೂ ಅಪಾಯವಾಗದಂತೆ ಬಾಂಬ್ ಎಸೆದು ತಮ್ಮತ್ತ ಎಲ್ಲರ ಗಮನ ಸೆಳೆದು ಘೋಷಣೆ ಕೂಗುತ್ತಾರೆ. ತಾವೇ ಬಾಂಬ್ ಎಸೆದಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಳ್ಳುತ್ತಾರೆ. ಆ ಮೂವರಿಗೂ ಗಲ್ಲುಶಿಕ್ಷೆ ವಿಧಿಸಲಾಗುತ್ತದೆ.

ಭಗತ್‍ಸಿಂಗ್ ತಂದೆ ವೈಸ್‍ರಾಯ್‍ರಿಗೆ ಪತ್ರ ಬರೆದು ತಮ್ಮ ಮಗನ ಜೀವದಾನ ಕೇಳುತ್ತಾರೆ. ಆ ವಿಷಯ ತಿಳಿಯುತ್ತಲೂ ಭಗತ್‍ಸಿಂಗ್ ತನ್ನ ತಂದೆಯ ಬಗ್ಗೆ ಹೌಹಾರಿ ಬೀಳುತ್ತಾರೆ. ‘ಮಗನ ಮೇಲಿನ ಮೋಹದಿಂದ ಶತ್ರುವಿನಲ್ಲಿ ನನ್ನ ಪ್ರಾಣಭಿಕ್ಷೆ ಕೇಳಿದ ನಿಮಗೆ ನಾಚಿಕೆಯಾಗುವುದಿಲ್ಲವೇ’ ಎಂದು ತಂದೆಗೆ ತರಾಟೆಗೆ ತೆಗೆದುಕೊಳ್ಳುತ್ತಾರೆ. ಧೈರ್ಯವಾಗಿ ನೇಣುಗಂಬಕ್ಕೇರಿ ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗುತ್ತಾರೆ ಆ ಮೂವರು.

ಇನ್ನೊಂದು ವಿಷಯ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ಸಿನವರ ಪ್ರಭಾವ ಹೆಚ್ಚಿನದಾಗಿತ್ತಾದರೂ ಝಾನ್ಸಿರಾಣಿ ಲಕ್ಷ್ಮೀಬಾಯಿ, ಕಿತ್ತೂರುರಾಣಿ ಚೆನ್ನಮ್ಮ, ಟಿಪ್ಪೂಸುಲ್ತಾನ್ ಮೊದಲಾದವರ ಪಾತ್ರವೂ ಪ್ರಶಂಸನೀಯವೇ. ಅಂತೆಯೇ ಉಗ್ರಗಾಮಿಗಳ ಪಾತ್ರವೂ ಅಷ್ಟೇ ಪ್ರಶಂಸನೀಯ. ಇವರ ಹೋರಾಟದ ಸ್ವರೂಪ ಬೇರೆಯದಾಗಿದ್ದರೂ ಈ ಬಣದವರ ದೇಶಾಭಿಮಾನ ಎಳ್ಳಷ್ಟೂ ಕಡಿಮೆಯಾದುದಲ್ಲ. ಅವರ್ಯಾರು ತಮ್ಮ ದೇಶಪ್ರೇಮದ ಬದ್ಧತೆಯಿಂದ ಯಾವತ್ತೂ ಹಿಂದೆ ಸರಿದವರಲ್ಲ.


ಇದನ್ನೂ ಓದಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೋಲರಿಯದ ದಣಿವರಿಯದ ನಿರ್ಭಿಡೆಯ ಸ್ವಾತಂತ್ರ್ಯ ಯೋಧರಾದ ದೊರೆಸ್ವಾಮಿಯವರು ಸೂಚಿಸಿರುವಂತೆ, ಬಿಜೆಪಿ-ಸಂಘ ಪರಿವಾರದವರು ಸಾವರ್ಕರರನ್ನು ‘ಮಾಜಿ ವೀರ ಸಾವರ್ಕರ್’ ಎಂದು ಕರೆಯಲು ಬಯಸುವುದಾದರೆ ನಮ್ಮ ಅಭ್ಯಂತರವಿಲ್ಲ. ಮುಂದೆ ಬೇಕಾದರೆ ನಾವೂ ಹಾಗೆ ಕರೆಯುವ ಬಗ್ಗೆ ಯೋಚಿಸಬಹುದು.

    ಅಂಗೈ ಮೇಲಿನ ಸತ್ಯವನ್ನು ಒಪ್ಪದೆ, ಸತ್ಯ ಹೇಳುವವರನ್ನು ನಿಂದಿಸಿ ಮೂದಲಿಸುವುದರಿಂದ ಸುಳ್ಳು ಸತ್ಯವಾಗುವುದಿಲ್ಲ, ಮಾಜಿ ವೀರ ಸಾವರ್ಕರ್ ‘ವೀರಚಕ್ರ’ಕ್ಕೆ ಅರ್ಹರಾಗುವುದಿಲ್ಲ.

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...