Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

ಬ್ರಿಟಿಷರ ವಿರುದ್ಧ ಹೋರಾಡಿದ್ದಕ್ಕಾಗಿ ಧೈರ್ಯವಾಗಿ ನೇಣುಗಂಬಕ್ಕೇರಿ ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗುತ್ತಾರೆ ಭಗತ್‌ ಸಿಂಗ್‌ ಮತ್ತು ಆತನ ಸಂಗಾತಿಗಳು.. ಆದರೆ ಸಾವರ್ಕರ್‌ ಮಾಡಿದ್ದೇನು?

- Advertisement -
- Advertisement -
  • ಎಚ್.ಎಸ್ ದೊರೆಸ್ವಾಮಿಯವರ ಹಳೆಯ ಲೇಖನ

ಸಾವಿರಾರು ಜನ ವೀರ ಸಾವರ್ಕರ್ ಅವರನ್ನು ಟೀಕಿಸಿದ್ದಾರೆ. ಸಾವಿರದ ಏಳನೆಯವನು ನಾನು. ಆದರೆ ಬಿಜೆಪಿ, ಆರೆಸ್ಸೆಸ್‍ನವರು ನನ್ನನ್ನೇ ಏಕೆ ಟಾರ್ಗೆಟ್ ಮಾಡುತ್ತಿದ್ದಾರೆ? ನಾನು ಸಾರ್ವಜನಿಕ ಕಾರ್ಯದಲ್ಲಿ ಸಕ್ರಿಯನಾಗಿರುವುದೇ ತಪ್ಪೇ? ಯಾರದೇ ಅನುಮತಿ ಪಡೆದು ಸಾರ್ವಜನಿಕ ಜೀವನಕ್ಕೆ ಬಂದವನು ನಾನಲ್ಲ. ನನ್ನ ಕೊನೆಯುಸಿರುವವರೆಗೂ ನಾನು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ನನ್ನ ಅಳಿಲುಸೇವೆ ಸಲ್ಲಿಸುತ್ತಾ ಹೋಗುತ್ತೇನೆ.

ವೀರ ಸಾವರ್ಕರ್ ಆರಂಭದ ದಿನಗಳಲ್ಲಿ ವೀರರಂತೆಯೇ ವರ್ತಿಸಿದವರು. ಇಂಗ್ಲೆಂಡಿಗೆ ಹೋಗಿ ಅಲ್ಲಿಂದಲೂ ಭಾರತದ ಬಿಡುಗಡೆಗೆ ಅಪಾರ ಸೇವೆ ಸಲ್ಲಿಸಿದರು. 20 ಬಂದೂಕುಗಳನ್ನು ಭಾರತದಲ್ಲಿದ್ದ ತಮ್ಮನಿಗೆ ಕಳಿಸಿದರು. ಅದನ್ನು ಅವರು ಜಾಗರೂಕತೆಯಿಂದ ಹಂಚುತ್ತಿದ್ದರು. ಈ ಕಾರ್ಯದಲ್ಲಿ ತೊಡಗಿದ್ದಾಗ ಅವರು ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡರು. ಅವರ ವಿರುದ್ಧ ಕೇಸಾಯಿತು. ಸಾವರ್ಕರ್‌ರನ್ನು ಬ್ರಿಟನ್‍ನಲ್ಲೇ ಬಂಧಿಸಲಾಯಿತು. ಫ್ರಾನ್ಸಿನ ಸರಹದ್ದಿನ ಊರಿನ ಹತ್ತಿರ ಹಡಗು ಸಂಚರಿಸುತ್ತಿದ್ದಾಗ, ಸಾವರ್ಕರ್ ಸಮುದ್ರಕ್ಕೆ ಹಾರಿ ಈಜುತ್ತಾ ಫ್ರೆಂಚ್ ದಡದತ್ತ ಧಾವಿಸಲಾರಂಭಿಸಿದರು. ಆದರೆ ಈಜುಬಲ್ಲ ಬ್ರಿಟಿಷ್ ಪೊಲೀಸರು ಅವರನ್ನು ಅಡ್ಡಗಟ್ಟಿ ಬಂಧಿಸಿ ಭಾರತಕ್ಕೆ ತಂದರು. ಅವರ ಮೇಲೆ ಮೊಕದ್ದಮೆ ಆಗಿ 1915ರಲ್ಲಿ ಆರು ವರ್ಷಗಳ ಕರಿನೀರು ಶಿಕ್ಷೆ ವಿಧಿಸಲಾಯಿತು.

ಆದರೆ ಸಾವರ್ಕರ್‍ರಿಗೆ ಮೂರು ವರ್ಷಗಳ ಕರಿನೀರು ಶಿಕ್ಷೆ ಅನುಭವಿಸುವ ವೇಳೆಗಾಗಲೆ ಮನಸ್ಥಿತಿ ಬದಲಾಯಿತು. ಹೋರಾಟ, ಬಂಧನ, ಈ ಜೈಲುಶಿಕ್ಷೆ ಸಾಕು ಸಾಕೆನಿಸಿತು. ಬ್ರಿಟಿಷ್ ಸರ್ಕಾರಕ್ಕೆ ಕ್ಷಮಾಪಣೆ ಪತ್ರ ಬರೆದು ಬಿಡುಗಡೆ ಕೋರಿದರು.

‘ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ’ ಎಂದು ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು.

ಸಾವರ್ಕರರಿಗೆ ಈ ಬಗೆಯ ಭಯ ಹೇಗೆ, ಏಕೆ ಉಂಟಾಯಿತು? ಬ್ರಿಟಿಷರು ಹಾಕಿದ ಷರತ್ತುಗಳನ್ನೆಲ್ಲ ಹೇಗೆ ಒಪ್ಪಿಕೊಂಡರು? ಮತ್ತು ಪಾಲನೆ ಮಾಡಿದರು? ಅರ್ಜುನನಿಗೆ ಯುದ್ಧಕ್ಕೆ ಹೋದಾಗ ಹೇಗೆ ಬುದ್ಧಿ ಗ್ಲಾನಿಯಾಯಿತೊ ಹಾಗೆ ಸಾವರ್ಕರರಿಗೂ ಆಯಿತೇನೊ. ಅರ್ಜುನನಿಗೆ ಸ್ವಧರ್ಮ ಪಾಲನೆ ಮಾಡುವಂತೆ ಹೇಳಲು ಕೃಷ್ಣ ಇದ್ದ. ಸಾವರ್ಕರರಿಗೆ ಈ ನೆರವು ಸಿಗಲಿಲ್ಲ. ಸ್ವಧರ್ಮ ಅವರು ಪಾಲನೆ ಮಾಡಲಿಲ್ಲ. ಹೀಗಾಗಿ ವೀರ ಸಾವರ್ಕರರು ಹೇಡಿ ಸಾವರ್ಕರರಾದರು. ಇದ್ದ ವಿಚಾರವನ್ನು ಇದ್ದಹಾಗೆ ಹೇಳಿದರೆ, ಹಿಂದೂತ್ವದ ಭೂತ ಹಿಡಿದ ಈ ಬಿಜೆಪಿ ಜನ, ಹಾಗೆ ಹೇಳಿದವರ ಮೇಲೆ ಎಲ್ಲರೂ ತಿರುಗಿಬೀಳುತ್ತಾರೆ, ಸಾವರ್ಕರರಿಗೆ ಅವಹೇಳನ ಮಾಡುತ್ತೀರಿ ಎಂದು ಆಪಾದನೆ ಹೊರಿಸುತ್ತಾರೆ.

ಹೋಗಲಿ ಇನ್ನುಮುಂದೆ ವೀರ ಸಾವರ್ಕರರನ್ನು ಹೇಗೆ ಕರೆಯಬೇಕು, ಅದನ್ನಾದರೂ ಹೇಳಿಬಿಡಿ. ಸಾವರ್ಕರರು ತಾನಾಗಿಯೇ ಬ್ರಿಟಿಷರಿಗೆ ಶರಣುಹೋಗಿ ವೀರಚಕ್ರವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರನ್ನು ‘ವೀರ’ ಎಂದು ಹೇಳುವುದು ಅವರನ್ನು ಅಪಹಾಸ್ಯ ಮಾಡಿದಂತೆ ಆಗುತ್ತೆ.

ಆದ್ದರಿಂದ ಸಾವರ್ಕರರನ್ನು ಯಾವ ಸಾವರ್ಕರ್ ಎಂದು ಕರೆಯಬೇಕೆಂಬುದನ್ನು ಆರ್‌ಎಸ್‍ಎಸ್ ಮತ್ತು ಬಿಜೆಪಿ ನಾಯಕರೇ ತೀರ್ಮಾನ ಮಾಡಿ ಜನತೆಗೆ ಹೇಳಲಿ. ಬೇಕಾದರೆ ಅವರನ್ನು ಮಾಜಿ ವೀರ ಸಾವರ್ಕರ್ ಎಂದು ಕರೆಯಬಹುದು.

ಸುಭಾಷ್‍ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಬಗೆಗೆ ಏನು ಬಲ್ಲಿರಿ? ಎಂದು ನನ್ನನ್ನು ಕೇಳಿದ್ದಾರೆ. ಇನ್ನು ಕೆಲವರು `ಅವರ ಬಗೆಗೂ ನನ್ನಲ್ಲಿ ವೀರ ಸಾವರ್ಕರ್ ಬಗೆಗಿರುವ ಭಾವನೆಗಳೇ ಇವೆಯೇ?’ ಎಂದು ಕೇಳಿದ್ದಾರೆ. ನಾನು ಸುಭಾಷ್‍ಚಂದ್ರ ಬೋಸ್‍ರ ಬಗೆಗೆ 30 ಪುಟಗಳ ಜೀವನಚರಿತ್ರೆ ಬರೆದಿದ್ದೇನೆ. ಅದರಲ್ಲಿ ಅವರ ಗುಣಗಾನ ಮಾಡಿದ್ದೇನೆ. ಮೂದಲಿಕೆಯ ಒಂದೂ ಮಾತು ಬರೆದಿಲ್ಲ.

ಭಗತ್‍ಸಿಂಗ್ ಬಗೆಗೆ ಪುಸ್ತಕ ಬರೆದಿಲ್ಲ. ಲೇಖನ ಬರೆದಿದ್ದೇನೆ. ಇಂಗ್ಲಿಷ್ ಅಧಿಕಾರಿಗಳನ್ನು ಒಬ್ಬೊಬ್ಬರನ್ನಾಗಿ ಕೊಂದರೆ ಬ್ರಿಟಿಷರು ತಾವಾಗಿಯೇ ದೇಶ ಬಿಟ್ಟುಹೋಗುತ್ತಾರೆಂಬ ವಿಚಾರ ಭಗತ್‍ಸಿಂಗ್ ಮೊದಲಾದ ಕೆಲವರದಾಗಿತ್ತು. ಭಗತ್‍ಸಿಂಗ್ ಮತ್ತು ಇಬ್ಬರು ಸ್ನೇಹಿತರು ಬಾಂಬ್ ತೆಗೆದುಕೊಂಡು ಅಧಿವೇಶನ ನಡೆಯುತ್ತಿದ್ದ ಕಡೆಗೆ ಹೋಗಿ ಪಾಸ್ ಪಡೆದು ವಿಸಿಟರ್ಸ್ ಗ್ಯಾಲರಿಯಲ್ಲಿ ಕುಳಿತುಕೊಳ್ಳುತ್ತಾರೆ. ಸಮಯ ನೋಡಿ ಯಾರಿಗೂ ಅಪಾಯವಾಗದಂತೆ ಬಾಂಬ್ ಎಸೆದು ತಮ್ಮತ್ತ ಎಲ್ಲರ ಗಮನ ಸೆಳೆದು ಘೋಷಣೆ ಕೂಗುತ್ತಾರೆ. ತಾವೇ ಬಾಂಬ್ ಎಸೆದಿದ್ದಾಗಿ ಪೊಲೀಸರ ಮುಂದೆ ಒಪ್ಪಿಕೊಳ್ಳುತ್ತಾರೆ. ಆ ಮೂವರಿಗೂ ಗಲ್ಲುಶಿಕ್ಷೆ ವಿಧಿಸಲಾಗುತ್ತದೆ.

ಭಗತ್‍ಸಿಂಗ್ ತಂದೆ ವೈಸ್‍ರಾಯ್‍ರಿಗೆ ಪತ್ರ ಬರೆದು ತಮ್ಮ ಮಗನ ಜೀವದಾನ ಕೇಳುತ್ತಾರೆ. ಆ ವಿಷಯ ತಿಳಿಯುತ್ತಲೂ ಭಗತ್‍ಸಿಂಗ್ ತನ್ನ ತಂದೆಯ ಬಗ್ಗೆ ಹೌಹಾರಿ ಬೀಳುತ್ತಾರೆ. ‘ಮಗನ ಮೇಲಿನ ಮೋಹದಿಂದ ಶತ್ರುವಿನಲ್ಲಿ ನನ್ನ ಪ್ರಾಣಭಿಕ್ಷೆ ಕೇಳಿದ ನಿಮಗೆ ನಾಚಿಕೆಯಾಗುವುದಿಲ್ಲವೇ’ ಎಂದು ತಂದೆಗೆ ತರಾಟೆಗೆ ತೆಗೆದುಕೊಳ್ಳುತ್ತಾರೆ. ಧೈರ್ಯವಾಗಿ ನೇಣುಗಂಬಕ್ಕೇರಿ ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗುತ್ತಾರೆ ಆ ಮೂವರು.

ಇನ್ನೊಂದು ವಿಷಯ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ಸಿನವರ ಪ್ರಭಾವ ಹೆಚ್ಚಿನದಾಗಿತ್ತಾದರೂ ಝಾನ್ಸಿರಾಣಿ ಲಕ್ಷ್ಮೀಬಾಯಿ, ಕಿತ್ತೂರುರಾಣಿ ಚೆನ್ನಮ್ಮ, ಟಿಪ್ಪೂಸುಲ್ತಾನ್ ಮೊದಲಾದವರ ಪಾತ್ರವೂ ಪ್ರಶಂಸನೀಯವೇ. ಅಂತೆಯೇ ಉಗ್ರಗಾಮಿಗಳ ಪಾತ್ರವೂ ಅಷ್ಟೇ ಪ್ರಶಂಸನೀಯ. ಇವರ ಹೋರಾಟದ ಸ್ವರೂಪ ಬೇರೆಯದಾಗಿದ್ದರೂ ಈ ಬಣದವರ ದೇಶಾಭಿಮಾನ ಎಳ್ಳಷ್ಟೂ ಕಡಿಮೆಯಾದುದಲ್ಲ. ಅವರ್ಯಾರು ತಮ್ಮ ದೇಶಪ್ರೇಮದ ಬದ್ಧತೆಯಿಂದ ಯಾವತ್ತೂ ಹಿಂದೆ ಸರಿದವರಲ್ಲ.


ಇದನ್ನೂ ಓದಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸೋಲರಿಯದ ದಣಿವರಿಯದ ನಿರ್ಭಿಡೆಯ ಸ್ವಾತಂತ್ರ್ಯ ಯೋಧರಾದ ದೊರೆಸ್ವಾಮಿಯವರು ಸೂಚಿಸಿರುವಂತೆ, ಬಿಜೆಪಿ-ಸಂಘ ಪರಿವಾರದವರು ಸಾವರ್ಕರರನ್ನು ‘ಮಾಜಿ ವೀರ ಸಾವರ್ಕರ್’ ಎಂದು ಕರೆಯಲು ಬಯಸುವುದಾದರೆ ನಮ್ಮ ಅಭ್ಯಂತರವಿಲ್ಲ. ಮುಂದೆ ಬೇಕಾದರೆ ನಾವೂ ಹಾಗೆ ಕರೆಯುವ ಬಗ್ಗೆ ಯೋಚಿಸಬಹುದು.

    ಅಂಗೈ ಮೇಲಿನ ಸತ್ಯವನ್ನು ಒಪ್ಪದೆ, ಸತ್ಯ ಹೇಳುವವರನ್ನು ನಿಂದಿಸಿ ಮೂದಲಿಸುವುದರಿಂದ ಸುಳ್ಳು ಸತ್ಯವಾಗುವುದಿಲ್ಲ, ಮಾಜಿ ವೀರ ಸಾವರ್ಕರ್ ‘ವೀರಚಕ್ರ’ಕ್ಕೆ ಅರ್ಹರಾಗುವುದಿಲ್ಲ.

    – ಸಿರಿಮನೆ ನಾಗರಾಜ್.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...