Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...